ಬ್ರೇಕಿಂಗ್ ನ್ಯೂಸ್
26-10-24 10:54 pm Mangalore Correspondent ಕರಾವಳಿ
ಉಳ್ಳಾಲ, ಅ.26: ಆವರಣ ಗೋಡೆಯಿಲ್ಲದೆ ಪಾಳು ಬಿದ್ದಿರುವ ಸರಕಾರಿ ಬಾವಿಯೊಂದಕ್ಕೆ ಬೀಡಾಡಿ ಹೋರಿಯೊಂದು ಬಿದ್ದು ನೀರಲ್ಲಿ ಒದ್ದಾಡಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಹೋರಿಯನ್ನ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಲ್ಲ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಪಿಲಾರು ಪಲ್ಲದಲ್ಲಿರುವ ಸರಕಾರಿ ತೆರೆದ ಬಾವಿಯು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿ ಪಾಳು ಬಿದ್ದಿದೆ. ಶನಿವಾರ ಸಂಜೆ ಬಾವಿಯ ಬಳಿಯಲ್ಲಿ ಬೀಡಾಡಿ ಹೋರಿಗಳೆರಡು ಗುದ್ದಾಡಿಕೊಂಡಿದ್ದು ಪರಿಣಾಮ ಒಂದು ಹೋರಿ ಬಾವಿಯೊಳಗೆ ಬಿದ್ದಿದೆ.




ಸ್ಥಳೀಯ ಸಮಾಜ ಸೇವಕರಾದ ಉದಯಗಟ್ಟಿ ಪಿಲಾರು ಅವರು ಬಾವಿಯ ನೀರಲ್ಲಿ ಬಿದ್ದು ಹೋರಿ ಒದ್ದಾಡುತ್ತಿದ್ದುದನ್ನ ಕಂಡು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಹೋರಿಯನ್ನ ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ತೆರೆದ ಪಾಳುಬಿದ್ದ ಬಾವಿಯನ್ನ ನಿರ್ಲಕ್ಷಿಸಿ ಜೀವ ಬಲಿಗಾಗಿ ಕಾಯುತ್ತಿರುವ ಪುರಸಭಾ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಾವಿಯನ್ನ ಕಡೆಗಣಿಸಿರುವ ಪುರಸಭೆ ಅಧಿಕಾರಿಗಳು
ಪಿಲಾರು ಪಲ್ಲದಲ್ಲಿನ ಪ್ರಾಚೀನ ಬಾವಿಯಲ್ಲಿ ಯಥೇಚ್ಛ ನೀರಿದ್ದರೂ ಸೋಮೇಶ್ವರ ಪುರಸಭಾ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಈ ಬಾವಿ ಕಳೆದ ಅನೇಕ ವರ್ಷಗಳಿಂದ ಪಾಳು ಬಿದ್ದು ಗಿಡ ಗಂಟಿಗಳಿಂದ ಆವೃತವಾಗಿದೆ. ಕಳೆದ ತಿಂಗಳಲ್ಲಿ ನಡೆದಿದ್ದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಸ್ಥಳೀಯ ಪುರಸಭಾ ಸದಸ್ಯರಾದ ಮನೋಜ್ ಕಟ್ಟೆಮನೆ ಅವರು ಪಲ್ಲದ ಬಾವಿಯ ಅಭಿವೃದ್ಧಿ ಕಾಮಗಾರಿಯನ್ನ ಶೀಘ್ರವೇ ನಡೆಸುವಂತೆ ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿಯವರಲ್ಲಿ ಆಗ್ರಹಿಸಿದ್ದರು. ಅಧಿಕಾರಿಗಳು ಇನ್ನೂ ಅಭಿವೃದ್ಧಿ ಕಾರ್ಯವನ್ನು ಮಾಡದೆ, ತೆರೆದ ಬಾವಿಗೊಂದು ರಕ್ಷಣೆಗಾಗಿ ಕನಿಷ್ಟ ಆವರಣ ಗೋಡೆಯನ್ನೂ ನಿರ್ಮಿಸಿಲ್ಲ.
Mangalore Pillar cow falls into well, residents slam officials over negligence. Later cow was rescued by the public with the help of fire service personals.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am