ಬ್ರೇಕಿಂಗ್ ನ್ಯೂಸ್
26-10-24 10:54 pm Mangalore Correspondent ಕರಾವಳಿ
ಉಳ್ಳಾಲ, ಅ.26: ಆವರಣ ಗೋಡೆಯಿಲ್ಲದೆ ಪಾಳು ಬಿದ್ದಿರುವ ಸರಕಾರಿ ಬಾವಿಯೊಂದಕ್ಕೆ ಬೀಡಾಡಿ ಹೋರಿಯೊಂದು ಬಿದ್ದು ನೀರಲ್ಲಿ ಒದ್ದಾಡಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಹೋರಿಯನ್ನ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಲ್ಲ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಪಿಲಾರು ಪಲ್ಲದಲ್ಲಿರುವ ಸರಕಾರಿ ತೆರೆದ ಬಾವಿಯು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಒಳಗಾಗಿ ಪಾಳು ಬಿದ್ದಿದೆ. ಶನಿವಾರ ಸಂಜೆ ಬಾವಿಯ ಬಳಿಯಲ್ಲಿ ಬೀಡಾಡಿ ಹೋರಿಗಳೆರಡು ಗುದ್ದಾಡಿಕೊಂಡಿದ್ದು ಪರಿಣಾಮ ಒಂದು ಹೋರಿ ಬಾವಿಯೊಳಗೆ ಬಿದ್ದಿದೆ.




ಸ್ಥಳೀಯ ಸಮಾಜ ಸೇವಕರಾದ ಉದಯಗಟ್ಟಿ ಪಿಲಾರು ಅವರು ಬಾವಿಯ ನೀರಲ್ಲಿ ಬಿದ್ದು ಹೋರಿ ಒದ್ದಾಡುತ್ತಿದ್ದುದನ್ನ ಕಂಡು ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಒಂದು ಗಂಟೆ ಕಾರ್ಯಾಚರಣೆ ನಡೆಸಿ ಹೋರಿಯನ್ನ ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ತೆರೆದ ಪಾಳುಬಿದ್ದ ಬಾವಿಯನ್ನ ನಿರ್ಲಕ್ಷಿಸಿ ಜೀವ ಬಲಿಗಾಗಿ ಕಾಯುತ್ತಿರುವ ಪುರಸಭಾ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಾವಿಯನ್ನ ಕಡೆಗಣಿಸಿರುವ ಪುರಸಭೆ ಅಧಿಕಾರಿಗಳು
ಪಿಲಾರು ಪಲ್ಲದಲ್ಲಿನ ಪ್ರಾಚೀನ ಬಾವಿಯಲ್ಲಿ ಯಥೇಚ್ಛ ನೀರಿದ್ದರೂ ಸೋಮೇಶ್ವರ ಪುರಸಭಾ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಈ ಬಾವಿ ಕಳೆದ ಅನೇಕ ವರ್ಷಗಳಿಂದ ಪಾಳು ಬಿದ್ದು ಗಿಡ ಗಂಟಿಗಳಿಂದ ಆವೃತವಾಗಿದೆ. ಕಳೆದ ತಿಂಗಳಲ್ಲಿ ನಡೆದಿದ್ದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಸ್ಥಳೀಯ ಪುರಸಭಾ ಸದಸ್ಯರಾದ ಮನೋಜ್ ಕಟ್ಟೆಮನೆ ಅವರು ಪಲ್ಲದ ಬಾವಿಯ ಅಭಿವೃದ್ಧಿ ಕಾಮಗಾರಿಯನ್ನ ಶೀಘ್ರವೇ ನಡೆಸುವಂತೆ ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿಯವರಲ್ಲಿ ಆಗ್ರಹಿಸಿದ್ದರು. ಅಧಿಕಾರಿಗಳು ಇನ್ನೂ ಅಭಿವೃದ್ಧಿ ಕಾರ್ಯವನ್ನು ಮಾಡದೆ, ತೆರೆದ ಬಾವಿಗೊಂದು ರಕ್ಷಣೆಗಾಗಿ ಕನಿಷ್ಟ ಆವರಣ ಗೋಡೆಯನ್ನೂ ನಿರ್ಮಿಸಿಲ್ಲ.
Mangalore Pillar cow falls into well, residents slam officials over negligence. Later cow was rescued by the public with the help of fire service personals.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm