ಬ್ರೇಕಿಂಗ್ ನ್ಯೂಸ್
26-10-24 10:58 pm Mangalore Correspondent ಕರಾವಳಿ
ಮಂಗಳೂರು, ಅ.21: ಪುತ್ತೂರಿನ ಅಭಿವೃದ್ಧಿಗೆ ಬೆಂಚ್ ಮಾರ್ಕ್ ಆಗಬಲ್ಲ ಯೋಜನೆ ಹಾಕಿದ್ದೇನೆ. ಕಳೆದ ಒಂದು ವರ್ಷದಲ್ಲಿ ಪುತ್ತೂರು ಕ್ಷೇತ್ರಕ್ಕೆ 1476 ಕೋಟಿ ಅನುದಾನ ಬಂದಿದ್ದು, ಕ್ಷೇತ್ರದ ಜನರಿಗೆ ಕುಡಿಯುವ ನೀರಿನ ತೊಂದರೆ ಆಗಬಾರದು ಎಂಬ ಕನಸು ಹೊತ್ತು 1010 ಕೋಟಿ ವೆಚ್ಚದ ಯೋಜನೆ ಕೈಗೊಂಡಿದ್ದೇನೆ. ಈಗಾಗಲೇ ಈ ಯೋಜನೆಗೆ 400 ಕೋಟಿ ಬಿಡುಗಡೆಯಾಗಿದ್ದು, ಕಾಮಗಾರಿ ಶುರುವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನಮ್ಮ ಗ್ರಾಮ, ನಮ್ಮ ರಸ್ತೆ ಎನ್ನುವ ಯೋಜನೆ ಹಾಕಿದ್ದು 68 ಕೋಟಿ ವೆಚ್ಚದ ಕಾಮಗಾರಿಗೆ ಮಂಜೂರಾತಿ ಸಿಕ್ಕಿದೆ. ಚತುಷ್ಪಥ ಹೆದ್ದಾರಿಯನ್ನು ಉಪ್ಪಿನಂಗಡಿಯಲ್ಲಿ ರಿ ಅಲೈನ್ಮೆಂಟ್ ಮಾಡಿದ್ದು, ಪೆರ್ನೆ, ಬೆಳಿಯೂರಿನಲ್ಲಿ ಎದುರಾಗಿದ್ದ ತೊಂದರೆಯನ್ನು ಸರಿಪಡಿಸಿದ್ದೇನೆ. ಮೆಲ್ಕಾರ್, ಪೆರ್ನೆ ಫ್ಲೈಓವರ್ ಡಿಸೆಂಬರ್ ವೇಳೆಗೆ ಪೂರ್ತಿಯಾಗಲಿದೆ. ಮಾರ್ಚ್ ವೇಳೆಗೆ ಕಲ್ಲಡ್ಕ ಫ್ಲೈ ಓವರ್ ಕಾಮಗಾರಿಯೂ ಮುಗಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ರಾಜಧಾನಿ ಬೆಂಗಳೂರು ಬಿಟ್ಟರೆ ದಕ್ಷಿಣ ಕನ್ನಡ ಅತಿ ಹೆಚ್ಚು ತೆರಿಗೆ ನೀಡುವ ಜಿಲ್ಲೆ. ಆದರೆ ಅನುದಾನ ಕೊಡುವುದರಲ್ಲಿ ಕೊನೆಯ ಸ್ಥಾನ ನಮ್ಮದು. ನಾವು ಕೇಳಿಕೊಂಡು ಹೋಗಿ ಅನುದಾನ ಪಡೆದು ತರಬೇಕು. ಜಿಲ್ಲೆಯಾದ್ಯಂತ ಸಮುದ್ರದ ಕಡೆಯಿಂದ ರಿಂಗ್ ರೋಡ್ ಮಾಡಬೇಕೆಂಬ ಕಲ್ಪನೆ ಇದೆ. ಪ್ರತಿವರ್ಷ ಪದವೀಧರರಾಗಿ ಹೊರಬರುವ ಯುವಕ- ಯುವತಿಯರ ಕೈಗೆ ಕೆಲಸ ಕೊಡಬೇಕಾಗಿದೆ. ಪುತ್ತೂರಿನಲ್ಲಿ 300 ಕೋಟಿ ವೆಚ್ಚದಲ್ಲಿ ಎರಡು ಉದ್ಯಮಗಳು ಮುಂದೆ ಬಂದಿದ್ದು ಒಂದಷ್ಟು ಉದ್ಯೋಗ ಸಿಗಲಿವೆ. ಇದರ ಜೊತೆಗೆ, ಪುತ್ತೂರು ತಾಲೂಕಿನಲ್ಲಿ ಡ್ರೈನೇಜ್ ಸಿಸ್ಟಮ್ ಮಾಡುವ ಯೋಜನೆ ಇದೆ.
ಧರ್ಮಸ್ಥಳ, ಕುಕ್ಕೆಗೆ ಬರುವವರಲ್ಲಿ 50 ಶೇ. ಮಂದಿ ಜಿಲ್ಲೆಯ ಪ್ರವಾಸೋದ್ಯಮದ ಕಡೆಗೆ ಹೊರಳಿದರೆ, ಜನರ ಆದಾಯ ಹೆಚ್ಚಬಹುದು. ಉಪ್ಪಿನಂಗಡಿಯಲ್ಲಿ ಕೂಡಲಸಂಗಮದ ರೀತಿ ಡ್ಯಾಮ್ ಮಾಡಿ ನೀರು ನಿಲ್ಲಿಸುವ ಯೋಜನೆ ಇದ್ದು ಪ್ರವಾಸಿಗರು ಬಂದರೆ ಆಕರ್ಷಣೀಯ ತಾಣ ಆಗಲಿದೆ. ಮೆಡಿಕಲ್ ಕಾಲೇಜು ಇಲ್ಲದೆ ಪುತ್ತೂರು, ಸುಳ್ಯ, ಬೆಳ್ತಂಗಡಿಯವರು ತುರ್ತು ಅಗತ್ಯಕ್ಕೆ ಮಂಗಳೂರಿಗೆ ಬರಬೇಕಾದ ಸ್ಥಿತಿಯಿದೆ. ಆದರೆ ಹೆಚ್ಚಿನ ಸಂದರ್ಭದಲ್ಲಿ ದೂರದಿಂದ ಬಂದು ಹಿಂತಿರುಗಿ ಹೋಗುವಾಗ ಹೆಣವೇ ಆಗುವ ಸ್ಥಿತಿಯಿದೆ. ಇದರ ಜೊತೆಗೆ, ಪುತ್ತೂರಿಗೆ ಮೆಡಿಕಲ್ ಕಾಲೇಜು ಸಿಗಬೇಕೆಂಬ ಕನಸು ಇದೆ. ಕಾಲೇಜು ನಿರ್ಮಾಣಕ್ಕಾಗಿ ತಾಲೂಕಿನಲ್ಲಿ 40 ಎಕ್ರೆ ಜಾಗ ನೋಡಿದ್ದೇವೆ.
ಪುತ್ತೂರಿನಲ್ಲಿ ಸರಿಯಾದ ಮೈದಾನ ಇಲ್ಲ. ಮುಂದಿನ ಪೀಳಿಗೆಗೆ ದೈಹಿಕ ವ್ಯವಸ್ಥೆ ಬಗ್ಗೆ ಜಾಗೃತಿ ಮೂಡಿಸುವ ವ್ಯವಸ್ಥೆ ಇಲ್ಲ ಎಂಬುದನ್ನು ಅರಿತು, 20 ಎಕ್ರೆ ಜಾಗ ಹುಡುಕಿ ಸಿಂಥೆಟಿಕ್ ಟ್ರ್ಯಾಕ್ ಮಾಡಲು ಕೇಂದ್ರಕ್ಕೆ ಪ್ರಸ್ತಾಪ ಇಟ್ಟಿದ್ದೇವೆ. ಕರ್ನಾಟಕ ಕ್ರಿಕೆಟ್ ಅಕಾಡೆಮಿಯಿಂದ ಎರಡು ಮೈದಾನ ಮಾಡುವ ಪ್ರಸ್ತಾಪ ಇಟ್ಟಿದ್ದಾರೆ. ಪುತ್ತೂರು ತಾಲೂಕಿನ ಎಲ್ಲೆಡೆ ರಸ್ತೆ ಬದಿ ಹಣ್ಣಿನ ಮರಗಳನ್ನು ಬೆಳೆಸಲು ಸೂಚನೆ ನೀಡಿದ್ದೇನೆ. ಕಾಟು ಮಾವಿನ ಹಣ್ಣು, ನೇರಳೆ, ಪುನರ್ಪುಳಿ ಹೀಗೆ ಹಣ್ಣಿನ ಮರಗಳ ಗಿಡವನ್ನು ನೆಡುವುದಕ್ಕೆ ವ್ಯವಸ್ಥೆ ಮಾಡಿದ್ದೇನೆ. ಹೈದರಾಬಾದ್ ನಿಂದ ರೋಕೊಮಿಲ್ಲಾ ಗಿಡ ತಂದು ನೆಡುತ್ತಿದ್ದೇವೆ. ಹಣ್ಣಿನ ಗಿಡಗಳಾದರೆ, ಹಕ್ಕಿಗಳು, ಇನ್ನಿತರ ಜೀವಿಗಳಿಗೆ ಆಹಾರವಾಗುತ್ತದೆ. ರಸ್ತೆ ಬದಿಯ ಗಿಡಗಳನ್ನು ಕದ್ದೊಯ್ಯುವ ಕೆಲಸ ಮಾಡಬೇಡಿ, ಬೇಕಾದರೆ ಗಿಡವನ್ನು ತಂದು ಕೊಡುತ್ತೇವೆ ಎಂದು ಅಶೋಕ್ ರೈ ಮನವಿ ಮಾಡಿದರು.
ಪೆರ್ಮಲ ಗುಡ್ಡದ ಅಭಿವೃದ್ಧಿಗಾಗಿ ಎರಡು ಕೋಟಿ ಕೊಟ್ಟಿದ್ದು ಆಕರ್ಷಣೀಯ ಮಾಡಲು ವ್ಯವಸ್ಥೆ ಮಾಡಿದ್ದೇನೆ. ಗುಡ್ದದ ಮೇಲ್ಗಡೆ ದೊಡ್ಡ ಧ್ವಜ ಸ್ತಂಭ ನಿರ್ಮಿಸುವ ಯೋಜನೆ ಇದೆ. ಆಯುಷ್ ಇಲಾಖೆಯಡಿ 15 ಕೋಟಿ ವೆಚ್ಚದಲ್ಲಿ 50 ಆಸ್ಪತ್ರೆ ಬೆಡ್ ಮಾಡಿಸಲು ಯೋಜನೆ ಹಾಕಿದ್ದೇನೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಪ್ರತ್ಯೇಕ ಪ್ಲಾನ್ ಮಾಡಿದ್ದು, ಕೇಂದ್ರ ಪ್ರವಾಸೋದ್ಯಮ ಇಲಾಖೆಯಡಿ 50 ಕೋಟಿ ವೆಚ್ಚದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲಿದ್ದೇನೆ ಎಂದರು.
ಪುತ್ತೂರು ಕ್ಷೇತ್ರದಲ್ಲಿ ಈವರೆಗೆ ಎರಡು ಸಾವಿರಕ್ಕೂ ಹೆಚ್ಚು ಕಡತ ವಿಲೇವಾರಿ ಮಾಡಿದ್ದೇನೆ. ಭ್ರಷ್ಟಾಚಾರ ರಹಿತ ಕೆಲಸ ಮಾಡಿದ್ದು ಭ್ರಷ್ಟ ವ್ಯವಸ್ಥೆ ಪತ್ತೆಯಾದರೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಯಾವುದೇ ಶಾಸಕರಿಗೂ ಅನುದಾನ ಸಿಗಲ್ಲವೆಂದು ಇರಲ್ಲ. ನಾವು ಫಾಲೋ ಅಪ್ ಮಾಡಬೇಕಷ್ಟೇ. ಯಾವುದೇ ಕ್ಷೇತ್ರಕ್ಕೆ 68 ಕಿಮೀ ರಸ್ತೆ ಅಭಿವೃದ್ಧಿಗೆ ಅವಕಾಶ ಇರುತ್ತದೆ. ಇದರಲ್ಲಿ 38 ಕಿಮೀ ಅಭಿವೃದ್ಧಿಗೆ ಹೇಗೂ ಅನುದಾನ ಬರುತ್ತದೆ. ಟ್ಯಾಲೆಂಟ್ ಇದ್ದರೆ ಮತ್ತಷ್ಟು ಅನುದಾನ ತರಲು ಸಾಧ್ಯವಾಗುತ್ತದೆ. ಕನಿಷ್ಠ ಮೂರು ಕಿಮೀನಿಂದ 5 ಕಿಮೀ ಅಭಿವೃದ್ಧಿಗೆ ಅನುದಾನ ಬರುತ್ತದೆ. ನಾವು ಬೇಕಾದ ರೀತಿ ಬಳಸಿಕೊಳ್ಳಬೇಕು ಎಂದು ಹೇಳಿದರು.
1476 crore rs fund released for the development of Puttur says MLA Ashok Rai in Mangalore. 1010 crore has been utilised for good water facility he added.
04-07-26 02:51 pm
HK News Staffer
ರಾಮನಗರ ಕಲ್ಯಾಣ ಮಂಟಪದಲ್ಲಿ ಮತದಾರರನ್ನು ಸೇರಿಸಿ ಎಸ್...
03-07-26 01:21 pm
ರಾಮನಗರದಲ್ಲಿ 10 ಸಾವಿರಕ್ಕೂ ಹೆಚ್ಚು ಬಾಂಗ್ಲಾ ಪ್ರಜೆ...
02-07-26 09:19 pm
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
04-07-26 08:09 pm
HK News Staffer
ರಷ್ಯಾದಿಂದ ತೈಲ ಖರೀದಿಸಿ ಮತ್ತೆ ಆ ದೇಶಕ್ಕೇ ಪೆಟ್ರೋಲ...
03-07-26 09:40 pm
ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿ 52 ಕ್ರಿಮಿ...
02-07-26 03:37 pm
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
03-07-26 10:17 pm
HK News Staffer
ಕೆರೆಬೈಲ್ ಎಸ್ಟೇಟ್ ಆವರಣ ಗೋಡೆ ಕುಸಿದು ಅವಾಂತರ ; ಸ...
02-07-26 10:53 pm
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
04-07-26 09:47 pm
HK News Staffer
Panambur Gold Robbery, Update: ಚಿನ್ನದ ವ್ಯಾಪಾರ...
04-07-26 09:43 pm
ಅಶ್ಲೀಲ ವಿಡಿಯೋ ಇದೆಯೆಂದು ಹೇಳಿ ರಿಯಲ್ ಎಸ್ಟೇಟ್ ಉದ್...
04-07-26 06:54 pm
'ಡಿಜಿಟಲ್ ಅರೆಸ್ಟ್’ ಸೈಬರ್ ವಂಚಕರಿಗೆ ಅಮಾಯಕರ ಹೆಸರಲ...
04-07-26 05:58 pm
ಮಲ್ಪೆ ವಾಟರ್ ಸ್ಪೋರ್ಟ್ಸ್ ಉದ್ಯಮಿ ಸಂದೀಪ್ ಸಾಲ್ಯಾನ್...
04-07-26 03:12 pm