ಬ್ರೇಕಿಂಗ್ ನ್ಯೂಸ್
28-10-24 03:53 pm Mangalore Correspondent ಕರಾವಳಿ
ಉಳ್ಳಾಲ, ಅ.28: ದೇರಳಕಟ್ಟೆ ಸಮೀಪದ ಪಾನೀರು ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಬಗ್ಗೆ ವದಂತಿ ಹಬ್ಬಿದೆ. ಸ್ಥಳೀಯ ಕಾನ್ವೆಂಟ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಪ್ರಾಣಿಯೊಂದು ಓಡುತ್ತಿದ್ದು, ನಾಯಿಗಳು ಅದನ್ನ ಬೆನ್ನಟ್ಟುವ ಅಸ್ಪಷ್ಟ ವೀಡಿಯೋ ಚಿತ್ರಣ ಲಭಿಸಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪಾನೀರು ಭಾಗದ ಕಾಂಗ್ರೆಸ್ ಮುಖಂಡ ಆಲ್ವಿನ್ ಡಿಸೋಜ ಅವರ ಮನೆಯ ಹಿಂಭಾಗದ ಕಾನ್ವೆಂಟ್ ಒಂದರ ಮುಂಭಾಗದಿಂದ ಚಿರತೆಯೊಂದು ಓಡಿರುವ ಬಗ್ಗೆ ವದಂತಿ ಹಬ್ಬಿದೆ. ಉತ್ತರ ಪ್ರದೇಶದ ವಲಸೆ ಕಾರ್ಮಿಕನೋರ್ವನು ಚಿರತೆ ಇರುವಿಕೆ ಬಗ್ಗೆ ವದಂತಿ ಹಬ್ಬಿಸಿದ್ದ ಎನ್ನಲಾಗುತ್ತಿದೆ. ಇಂದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದಾಗ ಸ್ಥಳೀಯ ಕಾನ್ವೆಂಟ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಪ್ರಾಣಿಯೊಂದನ್ನ ನಾಯಿಗಳು ಅಟ್ಟಿಸಿಕೊಂಡು ಓಡುತ್ತಿರುವ ಅಸ್ಪಷ್ಟ ದೃಶ್ಯ ಕಂಡುಬಂದಿದೆ. ಪಾನೀರು ಪ್ರದೇಶದಲ್ಲಿ ಚಿರತೆಯನ್ನ ಕಂಡ ಪ್ರತ್ಯಕ್ಷದರ್ಶಿ ಎಂದು ಹೇಳಲಾಗಿದ್ದ ವಲಸೆ ಕಾರ್ಮಿಕ ಅರಣ್ಯಾಧಿಕಾರಿಗಳ ಸಂಪರ್ಕಕ್ಕೆ ಸಿಕ್ಕಿಲ್ಲ.
ಚಿರತೆಯ ಇರುವಿಕೆ ಬಗ್ಗೆ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡಿದ ಪರಿಣಾಮ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಜನರು ಆತಂಕಕ್ಕೀಡಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಕೋಟೆಕಾರು ಶಾಖಾ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ಭೇಟಿ ನೀಡಿ ಸಿಸಿಟಿವಿ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿಯ ನಸುಕಿನ ವೇಳೆಯ ವೀಡಿಯೋದಲ್ಲಿ ನಾಯಿಗಳು ಅಟ್ಟಿಸುತ್ತಿರುವ ಪ್ರಾಣಿ ಯಾವುದೆಂದು ಸ್ಪಷ್ಟವಾಗಿ ಕಾಣಿಸುತ್ತಿಲ್ಲ. ಚಿರತೆಯನ್ನ ನೋಡಿದ್ದಾನೆಂಬ ಪ್ರತ್ಯಕ್ಷದರ್ಶಿ ಸಿಕ್ಕಿಲ್ಲ. ಚಿರತೆ ಇರುವಿಕೆ ದೃಢವಾದರೆ ಅದನ್ನ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸೋದಾಗಿ ಹೇಳಿದ್ದಾರೆ.
Rumors have surfaced about a #leopard being spotted in #Deralakatte, #mangalore. A video capturing this elusive creature has gone viral, stirring excitement and concern among local residents. pic.twitter.com/W613BOyGPZ
— Headline Karnataka (@hknewsonline) October 28, 2024
Rumours of Leopard being found at pilar in Deralakatte, Mangalore, video goes viral. Man who made the video viral stating he found leopard is now gone missing.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am