ಬ್ರೇಕಿಂಗ್ ನ್ಯೂಸ್
28-10-24 03:53 pm Mangalore Correspondent ಕರಾವಳಿ
ಉಳ್ಳಾಲ, ಅ.28: ದೇರಳಕಟ್ಟೆ ಸಮೀಪದ ಪಾನೀರು ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಬಗ್ಗೆ ವದಂತಿ ಹಬ್ಬಿದೆ. ಸ್ಥಳೀಯ ಕಾನ್ವೆಂಟ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಪ್ರಾಣಿಯೊಂದು ಓಡುತ್ತಿದ್ದು, ನಾಯಿಗಳು ಅದನ್ನ ಬೆನ್ನಟ್ಟುವ ಅಸ್ಪಷ್ಟ ವೀಡಿಯೋ ಚಿತ್ರಣ ಲಭಿಸಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪಾನೀರು ಭಾಗದ ಕಾಂಗ್ರೆಸ್ ಮುಖಂಡ ಆಲ್ವಿನ್ ಡಿಸೋಜ ಅವರ ಮನೆಯ ಹಿಂಭಾಗದ ಕಾನ್ವೆಂಟ್ ಒಂದರ ಮುಂಭಾಗದಿಂದ ಚಿರತೆಯೊಂದು ಓಡಿರುವ ಬಗ್ಗೆ ವದಂತಿ ಹಬ್ಬಿದೆ. ಉತ್ತರ ಪ್ರದೇಶದ ವಲಸೆ ಕಾರ್ಮಿಕನೋರ್ವನು ಚಿರತೆ ಇರುವಿಕೆ ಬಗ್ಗೆ ವದಂತಿ ಹಬ್ಬಿಸಿದ್ದ ಎನ್ನಲಾಗುತ್ತಿದೆ. ಇಂದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದಾಗ ಸ್ಥಳೀಯ ಕಾನ್ವೆಂಟ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಪ್ರಾಣಿಯೊಂದನ್ನ ನಾಯಿಗಳು ಅಟ್ಟಿಸಿಕೊಂಡು ಓಡುತ್ತಿರುವ ಅಸ್ಪಷ್ಟ ದೃಶ್ಯ ಕಂಡುಬಂದಿದೆ. ಪಾನೀರು ಪ್ರದೇಶದಲ್ಲಿ ಚಿರತೆಯನ್ನ ಕಂಡ ಪ್ರತ್ಯಕ್ಷದರ್ಶಿ ಎಂದು ಹೇಳಲಾಗಿದ್ದ ವಲಸೆ ಕಾರ್ಮಿಕ ಅರಣ್ಯಾಧಿಕಾರಿಗಳ ಸಂಪರ್ಕಕ್ಕೆ ಸಿಕ್ಕಿಲ್ಲ.
ಚಿರತೆಯ ಇರುವಿಕೆ ಬಗ್ಗೆ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡಿದ ಪರಿಣಾಮ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಜನರು ಆತಂಕಕ್ಕೀಡಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಕೋಟೆಕಾರು ಶಾಖಾ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ಭೇಟಿ ನೀಡಿ ಸಿಸಿಟಿವಿ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿಯ ನಸುಕಿನ ವೇಳೆಯ ವೀಡಿಯೋದಲ್ಲಿ ನಾಯಿಗಳು ಅಟ್ಟಿಸುತ್ತಿರುವ ಪ್ರಾಣಿ ಯಾವುದೆಂದು ಸ್ಪಷ್ಟವಾಗಿ ಕಾಣಿಸುತ್ತಿಲ್ಲ. ಚಿರತೆಯನ್ನ ನೋಡಿದ್ದಾನೆಂಬ ಪ್ರತ್ಯಕ್ಷದರ್ಶಿ ಸಿಕ್ಕಿಲ್ಲ. ಚಿರತೆ ಇರುವಿಕೆ ದೃಢವಾದರೆ ಅದನ್ನ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸೋದಾಗಿ ಹೇಳಿದ್ದಾರೆ.
Rumors have surfaced about a #leopard being spotted in #Deralakatte, #mangalore. A video capturing this elusive creature has gone viral, stirring excitement and concern among local residents. pic.twitter.com/W613BOyGPZ
— Headline Karnataka (@hknewsonline) October 28, 2024
Rumours of Leopard being found at pilar in Deralakatte, Mangalore, video goes viral. Man who made the video viral stating he found leopard is now gone missing.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm