ಬ್ರೇಕಿಂಗ್ ನ್ಯೂಸ್
28-10-24 03:53 pm Mangalore Correspondent ಕರಾವಳಿ
ಉಳ್ಳಾಲ, ಅ.28: ದೇರಳಕಟ್ಟೆ ಸಮೀಪದ ಪಾನೀರು ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಬಗ್ಗೆ ವದಂತಿ ಹಬ್ಬಿದೆ. ಸ್ಥಳೀಯ ಕಾನ್ವೆಂಟ್ ಒಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಪ್ರಾಣಿಯೊಂದು ಓಡುತ್ತಿದ್ದು, ನಾಯಿಗಳು ಅದನ್ನ ಬೆನ್ನಟ್ಟುವ ಅಸ್ಪಷ್ಟ ವೀಡಿಯೋ ಚಿತ್ರಣ ಲಭಿಸಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪಾನೀರು ಭಾಗದ ಕಾಂಗ್ರೆಸ್ ಮುಖಂಡ ಆಲ್ವಿನ್ ಡಿಸೋಜ ಅವರ ಮನೆಯ ಹಿಂಭಾಗದ ಕಾನ್ವೆಂಟ್ ಒಂದರ ಮುಂಭಾಗದಿಂದ ಚಿರತೆಯೊಂದು ಓಡಿರುವ ಬಗ್ಗೆ ವದಂತಿ ಹಬ್ಬಿದೆ. ಉತ್ತರ ಪ್ರದೇಶದ ವಲಸೆ ಕಾರ್ಮಿಕನೋರ್ವನು ಚಿರತೆ ಇರುವಿಕೆ ಬಗ್ಗೆ ವದಂತಿ ಹಬ್ಬಿಸಿದ್ದ ಎನ್ನಲಾಗುತ್ತಿದೆ. ಇಂದು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದಾಗ ಸ್ಥಳೀಯ ಕಾನ್ವೆಂಟ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಪ್ರಾಣಿಯೊಂದನ್ನ ನಾಯಿಗಳು ಅಟ್ಟಿಸಿಕೊಂಡು ಓಡುತ್ತಿರುವ ಅಸ್ಪಷ್ಟ ದೃಶ್ಯ ಕಂಡುಬಂದಿದೆ. ಪಾನೀರು ಪ್ರದೇಶದಲ್ಲಿ ಚಿರತೆಯನ್ನ ಕಂಡ ಪ್ರತ್ಯಕ್ಷದರ್ಶಿ ಎಂದು ಹೇಳಲಾಗಿದ್ದ ವಲಸೆ ಕಾರ್ಮಿಕ ಅರಣ್ಯಾಧಿಕಾರಿಗಳ ಸಂಪರ್ಕಕ್ಕೆ ಸಿಕ್ಕಿಲ್ಲ.
ಚಿರತೆಯ ಇರುವಿಕೆ ಬಗ್ಗೆ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡಿದ ಪರಿಣಾಮ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಜನರು ಆತಂಕಕ್ಕೀಡಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಕೋಟೆಕಾರು ಶಾಖಾ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ಭೇಟಿ ನೀಡಿ ಸಿಸಿಟಿವಿ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿಯ ನಸುಕಿನ ವೇಳೆಯ ವೀಡಿಯೋದಲ್ಲಿ ನಾಯಿಗಳು ಅಟ್ಟಿಸುತ್ತಿರುವ ಪ್ರಾಣಿ ಯಾವುದೆಂದು ಸ್ಪಷ್ಟವಾಗಿ ಕಾಣಿಸುತ್ತಿಲ್ಲ. ಚಿರತೆಯನ್ನ ನೋಡಿದ್ದಾನೆಂಬ ಪ್ರತ್ಯಕ್ಷದರ್ಶಿ ಸಿಕ್ಕಿಲ್ಲ. ಚಿರತೆ ಇರುವಿಕೆ ದೃಢವಾದರೆ ಅದನ್ನ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸೋದಾಗಿ ಹೇಳಿದ್ದಾರೆ.
Rumors have surfaced about a #leopard being spotted in #Deralakatte, #mangalore. A video capturing this elusive creature has gone viral, stirring excitement and concern among local residents. pic.twitter.com/W613BOyGPZ
— Headline Karnataka (@hknewsonline) October 28, 2024
Rumours of Leopard being found at pilar in Deralakatte, Mangalore, video goes viral. Man who made the video viral stating he found leopard is now gone missing.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm