ಬ್ರೇಕಿಂಗ್ ನ್ಯೂಸ್
31-10-24 01:27 pm Mangalore Correspondent ಕರಾವಳಿ
ಮಂಗಳೂರು, ಅ.31: ಕೊಂಕಣಿ ಕೆಥೋಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ ‘ರಚನಾ’ ನವೆಂಬರ್ 3ರಂದು ಬೆಳ್ಳಿಹಬ್ಬದ ಸಂಭ್ರಮ ಆಚರಿಸಲಿದೆ. ಭಾನುವಾರ ಸಂಜೆ 6 ಗಂಟೆಗೆ ನಗರದ ಕುಲಶೇಖರದ ಕೋರ್ಡೆಲ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪುಣೆಯ ಮಿಲಿಟರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಮಾಂಡೆಂಟ್ ಆಗಿರುವ ರಿಯರ್ ಆ್ಯಡ್ಮಿರಲ್ ನೆಲ್ಸನ್ ಡಿಸೋಜ ಭಾಗವಹಿಸಲಿದ್ದಾರೆ.
ಎನ್ಆರ್ಐ ಉದ್ಯಮಿ ಮೈಕಲ್ ಡಿಸೋಜ, ರೋಹನ್ ಕಾರ್ಪೋರೇಶನ್ ಚೇರ್ಮ್ಯಾನ್ ರೋಹನ್ ಮೊಂತೇರೊ ಮುಖ್ಯ ಅತಿಥಿಯಾಗಿರುವರು. ಬೆಂಗಳೂರಿನ ಆರ್ಚ್ ಬಿಷಪ್ ಪೀಟರ್ ಮಚಾದೊ ಉದ್ಘಾಟಿಸಲಿದ್ದು, ಮಂಗಳೂರಿನ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹ ಅಧ್ಯಕ್ಷತೆ ವಹಿಸಲಿದ್ದಾರೆ. ರಚನಾ ಅಧ್ಯಕ್ಷ ಜಾನ್ ಮೊಂತೇರೊ, ಬೆಳ್ಳಿ ಹಬ್ಬ ಸಮಾರಂಭದ ಸಂಚಾಲಕಿ ಮಾರ್ಜರಿ ಟೆಕ್ಸೇರಾ ಉಪಸ್ಥಿತರಿರುವರು. 25 ವರ್ಷಗಳ ಸವಿನೆನಪಿಗಾಗಿ ಕೊಂಕಣಿ ಕ್ರೈಸ್ತ ಸಮುದಾಯದ ಯುವ ಉದ್ಯಮಿಗಳಿಗೆ ನೆರವಾಗುವ ನಿಟ್ಟಿನಲ್ಲಿ ರಚನಾ ಕೆಥೋಲಿಕ್ ಸೌಹಾರ್ದ ಸಹಕಾರಿ ಸಂಘವನ್ನು ಪ್ರಾರಂಭಿಸುವ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಸಮಾರಂಭದಲ್ಲಿ ಇದರ ಉದ್ಘಾಟಿಸಲಾಗುವುದು ಎಂದು ರಚನಾ ಸಂಸ್ಥೆಯ ಅಧ್ಯಕ್ಷ ಜಾನ್ ಮೊಂತೇರೊ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಚನಾ ಸಂಸ್ಥೆ ಪ್ರಾರಂಭಿಸಲು ಕಾರಣಕರ್ತರಾದ ಮಾರಿಟ್ಟೊ ಸಿಕ್ವೇರಾ ಅವರನ್ನು ಸನ್ಮಾನಿಸಲಾಗುವುದು. ರಚನಾದ ಉಗಮ ಮತ್ತು ನಡೆದುಬಂದ ಹಾದಿಯ ಬಗ್ಗೆ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಗುವುದು. ಕೆನರಾ ಕೊಂಕಣಿ ಕೆಥೋಲಿಕ್ ಸಮುದಾಯದ ಉದ್ಯಮಿಗಳು, ವ್ಯಾಪಾರಿಗಳು ಒಗ್ಗೂಡುವ ಅವಶ್ಯಕತೆಯನ್ನು ಮನಗಂಡ ಕೆಲವು ಮುಖಂಡರು ಆ ನಿಟ್ಟಿನಲ್ಲಿ ಚರ್ಚಿಸಿದರು. 1998ರ ಸಪ್ಟೆಂಬರ್ 6ರಂದು ಬೆಂದೂರು ಚರ್ಚ್ ಹಾಲ್ನಲ್ಲಿ ದಕ್ಷಿಣ ಕನ್ನಡ ಮತ್ತು ನೆರೆಯ ಜಿಲ್ಲೆಗಳಿಂದ 500ರಷ್ಟು ಕ್ರೈಸ್ತ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ಕಾಫಿ ಪ್ಲಾಂಟರ್’ಗಳು, ವೃತ್ತಿಪರರು, ಕೃಷಿಕರು ಸಭೆ ಸೇರಿದರು. ಸಭೆಯಲ್ಲಿ ಚರ್ಚಿಸಿದಂತೆ ಪ್ರಮುಖರು ಸೇರಿ ರಚನಾ ಸಂಸ್ಥೆಯ ಆರಂಭಕ್ಕೆ ಅಡಿಪಾಯ ಹಾಕಿದರು. ಹೀಗೆ 1998 ನವೆಂಬರ್ 1ರಂದು ರಚನಾ ಉದ್ಘಾಟನೆಯಾಯಿತು. ಬಳಿಕ ತಾತ್ಕಾಲಿಕ ಸಮಿತಿ ರಚಿಸಿ ಸಂಘಟನೆಯ ರೂಪುರೇಷೆ ಸಿದ್ಧಪಡಿಸಿ, ಸದಸ್ಯರನ್ನು ನೇಮಕಗೊಳಿಸಲಾಯಿತು. 1999ರ ಆಗಸ್ಟ್ 8ರಂದು ಮೊದಲ ಪೂರ್ಣ ಪ್ರಮಾಣದ ಸಭೆ ನಡೆದು ರಚನಾಕ್ಕೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಂದು ರಚನಾದ ಮೊದಲ ಅಧ್ಯಕ್ಷರಾಗಿ ಜಾನ್ ಅಲೆಕ್ಸ್ ಸಿಕ್ವೇರಾ ಚುನಾಯಿತರಾದರು.
ರಚನಾ ಹಮ್ಮಿಕೊಳ್ಳುವ ಕಾರ್ಯಕ್ರಮಗಳು
ಸಮುದಾಯದಲ್ಲಿ ಉದ್ಯಮ ಸ್ಥಾಪನೆಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಸಾಧಕರನ್ನು ಗುರುತಿಸುವ ಮತ್ತು ಗೌರವಿಸುವ ಕಾರ್ಯವನ್ನೂ ರಚನಾ ಮಾಡುತ್ತದೆ. ಸ್ವ ಉದ್ಯಮಿಗಳು, ವೃತ್ತಿಪರರು ಮತ್ತು ಕೃಷಿ, ಕೈಗಾರಿಕೆ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿದವರನ್ನು ರಚನಾ ಸನ್ಮಾನಿಸುತ್ತಾ ಬಂದಿದೆ. ಔದ್ಯಮಿಕ ಕ್ಷೇತ್ರದಲ್ಲಿ ತರುಣರನ್ನು ತೊಡಗಿಸಲು ಬೇಕಾದ ಜಾಗೃತಿ ಉಂಟು ಮಾಡುವುದಲ್ಲದೆ ಅವರಿಗೆ ಬೇಕಾದ ಸೂಕ್ತ ತರಬೇತಿಯನ್ನೂ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ಹಲವು ಕಾರ್ಯಾಗಾರಗಳನ್ನು ಏರ್ಪಡಿಸಿದೆ.
ಪ್ರತಿಷ್ಠಿತ ರಚನಾ ಪ್ರಶಸ್ತಿಗಳು
ಕ್ರೈಸ್ತ ಸಮಾಜದ ಶ್ರೇಷ್ಠ ಸಾಧಕರನ್ನು ಬೃಹತ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸುವ ಪರಿಪಾಠವನ್ನು ರಚನಾ ಹಮ್ಮಿಕೊಂಡು ಬಂದಿದೆ. ವರ್ಷದ ಅತ್ಯುತ್ತಮ ಕೃಷಿಕ, ವೃತ್ತಿಪರ, ಉದ್ಯಮಿ, ಎನ್ಆರ್ಐ ಉದ್ಯಮಿ ಮತ್ತು ಅಪ್ರತಿಮ ಮಹಿಳಾ ಸಾಧಕರನ್ನು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. 2003ರಲ್ಲಿ ನಡೆದ ಮೊದಲ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾರತದ ರಕ್ಷಣಾ ಸಚಿವರಾಗಿದ್ದ ಜಾರ್ಜ್ ಫೆರ್ನಾಂಡಿಸ್ ಭಾಗವಹಿಸಿದ್ದರು. ಇಲ್ಲಿಯವರೆಗೆ 15 ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ನೆರವೇರಿದ್ದು ಒಟ್ಟು 67 ಸಾಧಕರು ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ರಚನಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು
ಜಾನ್ ಅಲೆಕ್ಸ್ ಸಿಕ್ವೇರಾ, ಮಾರ್ಜೊರಿ ಟೆಕ್ಸೇರಾ, ರೊಯ್ ಕ್ಯಾಸ್ತೆಲಿನೊ, ರುಡಾಲ್ಫ್ ಡಿಸಿಲ್ವ, ಮಾರ್ಸೆಲ್ ಮೊಂತೇರೊ, ರೊನಾಲ್ಡ್ ಗೋಮ್ಸ್, ಜಾನ್ ಎಸ್. ನೊರೊನ್ಹಾ, ಐವನ್ ಡಿಸೋಜ, ಜಾನ್ ಮೊಂತೇರೊ, ಗಿಲ್ಬರ್ಟ್ ಡಿಸೋಜ, ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಎಲಿಯಾಸ್ ಸಾಂಕ್ತಿಸ್ ಹಾಗೂ ವಿನ್ಸೆಂಟ್ ಕುಟಿನ್ಹೊ. ಜಾನ್ ಮೊಂತೇರೊ ಪ್ರಸ್ತುತ ಅಧ್ಯಕ್ಷರಾಗಿದ್ದಾರೆ.
ಪ್ರಸ್ತುತ ಆಡಳಿತ ಸಮಿತಿಯಲ್ಲಿ ಅಧ್ಯಕ್ಷರಾಗಿ ಜಾನ್ ಮೊಂತೇರೊ, ಉಪಾಧ್ಯಕ್ಷರಾಗಿ ನವೀನ್ ಲೋಬೊ, ವಿಜಯ್ ವಿಶ್ವಾಸ್ ಲೋಬೊ, ಕಾರ್ಯದರ್ಶಿ; ವಾಲ್ಟರ್ ಡಿಕುನ್ಹ, ಸಹ ಕಾರ್ಯದರ್ಶಿ; ನೆಲ್ಸನ್ ಮೊಂತೇರೊ, ಕೋಶಾಧಿಕಾರಿ. ಸದಸ್ಯರು: ಲವಿನಾ ಮೊಂತೇರೊ, ಯುಲಾಲಿಯಾ ಡಿಸೋಜ, ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಸಿಎ ವಿಕ್ರಮ್ ಸಲ್ಡಾನ್ಹ, ರೋಶನ್ ಆ್ಯಂಟನಿ ಡಿಸೋಜ, ಆಲ್ವಿನ್ ಪ್ರಕಾಶ್ ಸಿಕ್ವೇರಾ, ವಿನ್ಸೆಂಟ್ ಕುಟಿನ್ಹೊ, ರೋಹನ್ ಮೊಂತೇರೊ, ಸಚಿನ್ ರೂಪರ್ಟ್ ಪಿರೇರಾ ಮತ್ತು ಆಲ್ವಿನ್ ಡಿಸೋಜ ಇದ್ದಾರೆ.
Rachana, the Catholic Chamber of Commerce and Industry, Mangalore—a forum for Catholic Entrepreneurs, Professionals, and Agriculturists—is set to celebrate its Silver Jubilee on November 3, 2024. The event will take place at Cordel Hall, Kulshekar, Mangalore, at 6 PM.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 02:49 pm
Mangalore Correspondent
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm