ಬ್ರೇಕಿಂಗ್ ನ್ಯೂಸ್
31-10-24 01:57 pm Mangalore Correspondent ಕರಾವಳಿ
ಮಂಗಳೂರು, ಅ.31: ತುಳು ಮಾತನಾಡುವ ಸಮುದಾಯದ ಬೆಳವಣಿಗೆಗೆ ಮತ್ತೊಂದು ಗರಿಯೆಂಬಂತೆ, ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಅಧಿಕೃತವಾಗಿ ಲೈವ್ ಆಗಿವೆ. ತುಳು ವಿಕ್ಷನರಿ, ವಿಕಿಮೀಡಿಯಾ ಫೌಂಡೇಶನ್ ನಿರ್ವಹಿಸುವ ಅಂತರಜಾಲ ನಿಘಂಟಾಗಿದೆ. ಬಳಕೆದಾರರು ತುಳು ವಿಕ್ಷನರಿಯಲ್ಲಿ ಮಾಹಿತಿ ಹುಡುಕಬಹುದು, ಸಂಪಾದಿಸಬಹುದು ಮತ್ತು ಕೊಡುಗೆ ನೀಡಬಹುದು. ಈ ಸಾಧನೆಯು ಕರಾವಳಿ ವಿಕಿಮೀಡಿಯನ್ನರು ಮತ್ತು ತುಳು ವಿಕಿಮೀಡಿಯನ್ನರ ಆರು ವರ್ಷಗಳ ಸ್ವಯಂಪ್ರೇರಿತ ಸಂಪಾದನೆಯ ಪ್ರಯತ್ನದ ಫಲವಾಗಿದೆ.
ಈ ಯೋಜನೆಗೆ 2018ರಲ್ಲಿ ಮುನ್ನುಡಿ ಹಾಡಿದವರು ಡಾ. ಯು.ಬಿ. ಪವನಜ. ಅತ್ಯಂತ ಹೆಚ್ಚು ಪದಗಳನ್ನು ಸಂಪಾದಿಸಿ ಕೊಡುಗೆ ನೀಡಿರುವವರು ಕರಾವಳಿ ವಿಕಿಮೀಡಿಯನ್ ಯೂಸರ್ ಗ್ರೂಪಿನ ಸದಸ್ಯರಾದ ಡಾ. ವಿಶ್ವನಾಥ ಬದಿಕಾನ, ದಿವಂಗತ. ರವೀಂದ್ರ ಮುಡ್ಕೂರು, ಭರತೇಶ ಅಲಸಂಡೆಮಜಲು, ಡಾ. ಕಿಶೋರ್ ಕುಮಾರ್ ರೈ ಶೇಣಿ, ಮತ್ತು ಯಕ್ಷಿತ ಮೂಡುಕೋಣಾಜೆ. ತಾಂತ್ರಿಕ ಕೆಲಸಗಳನ್ನು ಅನೂಪ್ ರಾವ್ ಕಾರ್ಕಳ, ಚಿದಾನಂದ ಕಂಪ, ಭರತೇಶ ಅಲಸಂಡೆಮಜಲು ಸಹಕರಿಸಿದ್ದರು. 2018ರ ಆಗಸ್ಟ್ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ತುಳು ಸ್ನಾತಕೋತ್ತರ ಪದವಿ ಪ್ರಾರಂಭವಾದ ಸಂದರ್ಭದಲ್ಲಿ ತುಳು ವಿಕ್ಷನರಿಯ ಕೆಲಸವೂ ಪ್ರಾರಂಭವಾಯಿತು. ಇದು ಜಾಗತಿಕ ಮಟ್ಟದಲ್ಲಿ ತುಳು ಭಾಷೆಯನ್ನು ಗುರುತಿಸಲು ಪ್ರಮುಖ ಸಂಪನ್ಮೂಲವಾಗಿ ಕಾರ್ಯ ನಿರ್ವಹಿಸುತ್ತದೆ. ತುಳು ಭಾಷಾಭಿಮಾನಿಗಳು ಮತ್ತು ವಿದ್ವಾಂಸರ ಸಹಯೋಗದಿಂದ ಈ ತುಳು ಶಬ್ದಕೋಶವನ್ನು ವಿಸ್ತರಿಸಲು ಮತ್ತು ಪರಿಷ್ಕರಿಸಲು ಡಿಜಿಟಲ್ ಮಾಧ್ಯಮದಲ್ಲಿ ಸಾಧ್ಯವಿದೆ.
ವಿಕ್ಷನರಿ ಒಂದು ಉಚಿತ, ಬಹುಭಾಷಾ ಆನ್ಲೈನ್ ನಿಘಂಟಾಗಿದ್ದು, ವ್ಯಾಖ್ಯಾನಗಳು(Definition), ವ್ಯುತ್ಪತ್ತಿಗಳು(etymology), ಉಚ್ಚಾರಣೆಗಳು, ಚಿತ್ರ, ಅನುವಾದಗಳು, ಗಾದೆ, ಒಗಟು, ನುಡಿಗಟ್ಟು ಮತ್ತು ಇನ್ನಿತರ ವಿಚಾರಗಳನ್ನು ಸೇರಿಸಿಕೊಳ್ಳಬಹುದು. ಸಾಂಪ್ರದಾಯಿಕ ನಿಘಂಟುಗಳಿಗಿಂತ ಭಿನ್ನವಾಗಿ, ಇದು ಪ್ರಪಂಚದಾದ್ಯಂತದ ಸ್ವಯಂಸೇವಕರ ಸಹಯೋಗದೊಂದಿಗೆ ಸಂಪಾದಿಸಲ್ಪಡುತ್ತದೆ. ಇದು ನಿರಂತರವಾಗಿ ಮಾರ್ಪಾಡು ಮತ್ತು ವಿಕಸನದಿಂದ ನೈಜ ಸಮಯದಲ್ಲಿ ಬೆಳೆಯುವಂತಹ ನಿಘಂಟು ಅಗಿದೆ. ತುಳು ವಿಕ್ಷನರಿಯಲ್ಲಿ 3000ಕ್ಕೂ ಅಧಿಕ ಶಬ್ದಗಳಿದ್ದು ವ್ಯವಸ್ಥಿತವಾಗಿ ವ್ಯಾಕರಣ ನೆಲೆಯಲ್ಲಿ ವರ್ಗಿಕರೀಸಲಾಗಿದೆ. ಇದು ತುಳು ಭಾಷೆಯಲ್ಲಿನ ಪದಗಳ ಬಗ್ಗೆ ಆಳವಾದ ಮಾಹಿತಿಯನ್ನು ಒದಗಿಸುತ್ತದೆ. ಪದ, ಸಮಾನಾರ್ಥಗಳು, ಸಾಹಿತ್ಯ, ಪಾಡ್ದನ ಇತ್ಯಾದಿ ಬಳಕೆಯ ಉದಾಹರಣೆಗಳು, ಪದದ ಮೂಲಗಳು, ಇತರ ಭಾಷೆಯ ಸಮಾನಾರ್ಥಗಳು ಮತ್ತು ಅವುಗಳಿಗೆ ಲಿಂಕ್ ಮತ್ತು ವ್ಯಾಕರಣ ವಿವರಗಳು ಇತ್ಯಾದಿ ಭಾಷಾ ಕಲಿಕೆಗೆ, ಭಾಷಾ ಶಾಸ್ತ್ರಜ್ಞರಿಗೆ ಮತ್ತು ಸಾಂಸ್ಕೃತಿಕ ಅಧ್ಯಯನಕ್ಕೆ ಸಹಾಯವಾಗುವುದು.
ತುಳು ವಿಕ್ಷನರಿಯ ಜೊತೆಗೆ ತುಳು ವಿಕಿಸೋರ್ಸ್ ಕೂಡ ಪ್ರಾರಂಭವಾಗಿದೆ. ವಿಕಿಸೋರ್ಸ್ ಎನ್ನುವುದು ಉಚಿತ ಆನ್ಲೈನ್ ಡಿಜಿಟಲ್ ಲೈಬ್ರರಿ. ಸಾರ್ವಜನಿಕ ಡೊಮೇನ್ನಲ್ಲಿ ಅಥವಾ ಮುಕ್ತ ಹಕ್ಕುಸ್ವಾಮ್ಯದ ಅಡಿಯಲ್ಲಿ ಮೂಲ ಪಠ್ಯಗಳನ್ನು ಹೊಂದಿದ್ದು, ಓದುಗರು, ಪುಸ್ತಕ ಬಳಕೆದಾರರು ವಿಷಯದ ನಿಖರತೆಯನ್ನು ಖಚಿತ ಪಡಿಸಿಕೊಳ್ಳಲು ಪಠ್ಯಗಳನ್ನು ವಿಕಿಸೋರ್ಸ್ ಸಹಕಾರಿ. ಪುಸ್ತಕವನ್ನು ಲಿಪ್ಯಂತರ ಮತ್ತು ಪ್ರೂಫ್ ರೀಡಿಂಗ್ ಓದುವ ಅನುಕೂಲವನ್ನು ಸಂಪಾದಕರು ಮಾಡಿಕೊಡುವರು. ಹೀಗೆ ಸಂಪಾದನೆಯಾದ ಪುಸ್ತಕವನ್ನು ಓದಬಹುದು ಮತ್ತು ಸಂಗ್ರಹಿಸಿಟ್ಟುಕೊಳ್ಳಬಹುದು.. ತುಳು ವಿಕಿಸೋರ್ಸ್ ಪುಸ್ತಕಗಳು, ಪತ್ರಗಳು, ಐತಿಹಾಸಿಕ ಪಠ್ಯಗಳು ಮತ್ತು ಸಾಹಿತ್ಯ ಕೃತಿಗಳಂತಹ ಮೂಲ ತುಳು ದಾಖಲೆಗಳನ್ನು ಸಂರಕ್ಷಿಸಲು ಗಮನಹರಿಸುತ್ತದೆ. ಇದು ಸಂಶೋಧಕರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ತುಳು ಸಾಹಿತ್ಯ ಪರಂಪರೆಯ ಸಂರಕ್ಷಣೆಯಲ್ಲಿ ಆಸಕ್ತಿ ಹೊಂದಿರುವವರಿಗೆ ವಿಶೇಷವಾಗಿ ಉಪಯುಕ್ತವಾಗಿದೆ.
ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಇವುಗಳ ಪ್ರಾರಂಭವು ಜಾಗತಿಕ ವೇದಿಕೆಯಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಮತ್ತು ಸಂರಕ್ಷಿಸುವ ಪ್ರಮುಖ ಹೆಜ್ಜೆಯಾಗಿದೆ. ಭವಿಷ್ಯದ ಪೀಳಿಗೆಯು ಈ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಕಲಿಯಲು ಮತ್ತು ತೊಡಗಿಸಿಕೊಳ್ಳಲು ಒಂದು ಉತ್ತಮ ಬುನಾದಿಯಾಗಿದೆ.
Mangalore Another milestone of Tulu language, Tulu Wiktionary and Tulu Wikisource Live launched.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 12:11 pm
Mangaluru Correspondent
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
Special Task Force, Home Minister Parameshwar...
13-06-25 01:05 pm
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm