ಬ್ರೇಕಿಂಗ್ ನ್ಯೂಸ್
31-10-24 02:22 pm Udupi Correspondent ಕರಾವಳಿ
ಉಡುಪಿ, ಅ.31: ಸ್ಕೂಟಿ ಸವಾರಿ ಮಾಡುತ್ತಿದ್ದ ಯುವತಿ ಮೇಲೆ ಮಣ್ಣು ತುಂಬಿದ ಟಿಪ್ಪರ್ ಲಾರಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದ್ದು ಆಟೋ ಚಾಲಕರೊಬ್ಬರ ಸಕಾಲಿಕ ಪ್ರಯತ್ನದಿಂದ ಯುವತಿಯ ಪ್ರಾಣ ಉಳಿದಿದೆ. ಸ್ಕೂಟಿಯೊಂದಿಗೆ ಮಣ್ಣಿನಡಿಗೆ ಬಿದ್ದು ಒದ್ದಾಡುತ್ತಿದ್ದ ಮಹಿಳೆಯನ್ನು ಆಟೋ ಚಾಲಕ ಅಶೋಕ್ ಪೂಜಾರಿ ರಕ್ಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಒಳರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಒಂದು ಬದಿಗೆ ಮಗುಚಿ ಬಿದ್ದಿತ್ತು. ಇದೇ ವೇಳೆ ಲಾರಿಯ ಪಕ್ಕದಲ್ಲೇ ಯುವತಿ ಚಲಾಯಿಸುತ್ತಿದ್ದ ಸ್ಕೂಟಿ, ಟಿಪ್ಪರ್ ವಾಹನದಡಿಗೆ ಮಗುಚಿ ಬಿದ್ದಿದೆ. ಮಣ್ಣಿನ ಅಡಿಯಲ್ಲಿ ಸ್ಕೂಟಿ ಸವಾರೆ, ಸ್ಥಳೀಯ ನಿವಾಸಿ ಆರತಿ ಶೆಟ್ಟಿ ಸಿಲುಕಿದ್ದರೆ, ಲಾರಿ ಚಾಲಕನೂ ಹೊರಬರಲು ಸಾಧ್ಯವಾಗದೆ ಕ್ಯಾಬಿನ್ ಒಳಗಡೆ ಸಿಲುಕಿದ್ದರು.
ಈ ಸಂದರ್ಭ ಅದೇ ದಾರಿಯಲ್ಲಿ ಆಟೋ ಚಲಾಯಿಸುತ್ತ ಬಂದಿದ್ದ ಸಮಾಜಸೇವಕ ಕೋಡಿ ಅಶೋಕ್ ಪೂಜಾರಿ, ಏನು ಮಾಡಬೇಕೆಂದು ತೋಚದೇ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಿ ಹೋಗಿದ್ದ ಮಹಿಳೆಯ ಮೇಲಿದ್ದ ಮಣ್ಣನ್ನು ತೆಗೆದು ರಕ್ಷಣೆ ಮಾಡಿದ್ದಾರೆ. ಆನಂತರ, ಸ್ಥಳೀಯರ ಸಹಕಾರದಿಂದ ಮಹಿಳೆಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಲಾರಿ ಚಾಲಕನನ್ನೂ ರಕ್ಷಣೆ ಮಾಡಿದ್ದಾರೆ. ಅಶೋಕ್ ಅವರ ಸಕಾಲಿಕ ನೆರವು ಯುವತಿಯ ಪ್ರಾಣ ಉಳಿಸಿದ್ದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
Udupi accident, Girl rescued by auto driver after truck topples.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 02:49 pm
Mangalore Correspondent
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm