ಬ್ರೇಕಿಂಗ್ ನ್ಯೂಸ್
31-10-24 02:22 pm Udupi Correspondent ಕರಾವಳಿ
ಉಡುಪಿ, ಅ.31: ಸ್ಕೂಟಿ ಸವಾರಿ ಮಾಡುತ್ತಿದ್ದ ಯುವತಿ ಮೇಲೆ ಮಣ್ಣು ತುಂಬಿದ ಟಿಪ್ಪರ್ ಲಾರಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದ್ದು ಆಟೋ ಚಾಲಕರೊಬ್ಬರ ಸಕಾಲಿಕ ಪ್ರಯತ್ನದಿಂದ ಯುವತಿಯ ಪ್ರಾಣ ಉಳಿದಿದೆ. ಸ್ಕೂಟಿಯೊಂದಿಗೆ ಮಣ್ಣಿನಡಿಗೆ ಬಿದ್ದು ಒದ್ದಾಡುತ್ತಿದ್ದ ಮಹಿಳೆಯನ್ನು ಆಟೋ ಚಾಲಕ ಅಶೋಕ್ ಪೂಜಾರಿ ರಕ್ಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಒಳರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಒಂದು ಬದಿಗೆ ಮಗುಚಿ ಬಿದ್ದಿತ್ತು. ಇದೇ ವೇಳೆ ಲಾರಿಯ ಪಕ್ಕದಲ್ಲೇ ಯುವತಿ ಚಲಾಯಿಸುತ್ತಿದ್ದ ಸ್ಕೂಟಿ, ಟಿಪ್ಪರ್ ವಾಹನದಡಿಗೆ ಮಗುಚಿ ಬಿದ್ದಿದೆ. ಮಣ್ಣಿನ ಅಡಿಯಲ್ಲಿ ಸ್ಕೂಟಿ ಸವಾರೆ, ಸ್ಥಳೀಯ ನಿವಾಸಿ ಆರತಿ ಶೆಟ್ಟಿ ಸಿಲುಕಿದ್ದರೆ, ಲಾರಿ ಚಾಲಕನೂ ಹೊರಬರಲು ಸಾಧ್ಯವಾಗದೆ ಕ್ಯಾಬಿನ್ ಒಳಗಡೆ ಸಿಲುಕಿದ್ದರು.
ಈ ಸಂದರ್ಭ ಅದೇ ದಾರಿಯಲ್ಲಿ ಆಟೋ ಚಲಾಯಿಸುತ್ತ ಬಂದಿದ್ದ ಸಮಾಜಸೇವಕ ಕೋಡಿ ಅಶೋಕ್ ಪೂಜಾರಿ, ಏನು ಮಾಡಬೇಕೆಂದು ತೋಚದೇ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಿ ಹೋಗಿದ್ದ ಮಹಿಳೆಯ ಮೇಲಿದ್ದ ಮಣ್ಣನ್ನು ತೆಗೆದು ರಕ್ಷಣೆ ಮಾಡಿದ್ದಾರೆ. ಆನಂತರ, ಸ್ಥಳೀಯರ ಸಹಕಾರದಿಂದ ಮಹಿಳೆಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಲಾರಿ ಚಾಲಕನನ್ನೂ ರಕ್ಷಣೆ ಮಾಡಿದ್ದಾರೆ. ಅಶೋಕ್ ಅವರ ಸಕಾಲಿಕ ನೆರವು ಯುವತಿಯ ಪ್ರಾಣ ಉಳಿಸಿದ್ದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
Udupi accident, Girl rescued by auto driver after truck topples.
22-01-26 05:20 pm
HK News Desk
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
22-01-26 01:52 pm
HK News Desk
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 02:40 pm
Bangalore Correspondent
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm