ಬ್ರೇಕಿಂಗ್ ನ್ಯೂಸ್
31-10-24 06:38 pm Mangalore Correspondent ಕರಾವಳಿ
ಉಳ್ಳಾಲ, ಅ.31: ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ನಗರ ಸಾರಿಗೆ ಬಸ್ಸಿನಿಂದ ಕೆಳಗಿಳಿದು, ಖಾಸಗಿ ಬಸ್ಸು ಹತ್ತುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಇಂಟರ್ ಲಾಕ್ ತುಂಬಿದ್ದ ಟೆಂಪೋ ಲಾರಿಯೊಂದು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಸಮೀಪದ ಅಡಂಕುದ್ರು ಎಂಬಲ್ಲಿ ಗುರುವಾರ ಸಂಜೆ ವೇಳೆ ನಡೆದಿದೆ.
ಫರಂಗಿಪೇಟೆ ರೊಟ್ಟಿಗುಡ್ಡೆ ನಿವಾಸಿ ಆದಂ (63) ಮೃತಪಟ್ಟ ವ್ಯಕ್ತಿ. ಗುರುವಾರ ಸಂಜೆ ಮಂಗಳೂರಿನಿಂದ ಮುಡಿಪುವಿಗೆ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ನಗರ ಸಾರಿಗೆ ಅಡಂಕುದ್ರು ಪ್ರದೇಶದಲ್ಲಿ ಕೆಟ್ಟು ನಿಂತಿದೆ. ಬಸ್ಸಿನಲ್ಲಿದ್ದ ಆದಂ ಅವರು ಕೆಳಗಿಳಿದು ಮುಂದೆ ನಿಂತಿದ್ದ ಖಾಸಗಿ ಬಸ್ಸು ಹತ್ತಲು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ನಿಯಂತ್ರಣ ಕಳೆದು ಎಡಕ್ಕೆ ತಿರುಗಿದ್ದು ಹೆದ್ದಾರಿ ಬದಿಯ ಬೇಕರಿ ಮುಂಭಾಗದಲ್ಲಿ ನಿಂತಿದ್ದ ಇಲೆಕ್ಟ್ರಿಕ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಆದಂ ಅವರ ಮೇಲೆ ಹರಿದಿದೆ. ಮುಂದೆ ಸಾಗಿದ ಟೆಂಪೋ ಬೇಕರಿ ಅಂಗಡಿಯ ಬೃಹತ್ ನಾಮಫಲಕದ ಕಮಾನಿಗೂ ಗುದ್ದಿ ಗೂಡಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಆದಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದನ್ನ ಕಂಡ ಬಳಿಕ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.





ಟೆಂಪೋ ಡಿಕ್ಕಿ ಹೊಡೆದಿದ್ದ ಇಲೆಕ್ಟ್ರಿಕ್ ಕಾರಿನಲ್ಲಿ ಮಕ್ಕಳು ಸೇರಿ ಆರು ಜನರನ್ನ ಕೂರಿಸಿದ್ದ ಚಾಲಕ ರಸ್ತೆ ಅಂಚಿನ ಬೇಕರಿಗೆ ತಿಂಡಿ ಖರೀದಿಗೆ ತೆರಳಿದ್ದರು. ಅದೃಷ್ಟವಶಾತ್ ಘಟನೆಯಿಂದ ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Accident, Tempo goes over pedestrian at Kallapu in Mangalore. The deceased has been identified as Adam from Farangipete.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am