ಬ್ರೇಕಿಂಗ್ ನ್ಯೂಸ್
31-10-24 06:38 pm Mangalore Correspondent ಕರಾವಳಿ
ಉಳ್ಳಾಲ, ಅ.31: ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ನಗರ ಸಾರಿಗೆ ಬಸ್ಸಿನಿಂದ ಕೆಳಗಿಳಿದು, ಖಾಸಗಿ ಬಸ್ಸು ಹತ್ತುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಇಂಟರ್ ಲಾಕ್ ತುಂಬಿದ್ದ ಟೆಂಪೋ ಲಾರಿಯೊಂದು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಸಮೀಪದ ಅಡಂಕುದ್ರು ಎಂಬಲ್ಲಿ ಗುರುವಾರ ಸಂಜೆ ವೇಳೆ ನಡೆದಿದೆ.
ಫರಂಗಿಪೇಟೆ ರೊಟ್ಟಿಗುಡ್ಡೆ ನಿವಾಸಿ ಆದಂ (63) ಮೃತಪಟ್ಟ ವ್ಯಕ್ತಿ. ಗುರುವಾರ ಸಂಜೆ ಮಂಗಳೂರಿನಿಂದ ಮುಡಿಪುವಿಗೆ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ನಗರ ಸಾರಿಗೆ ಅಡಂಕುದ್ರು ಪ್ರದೇಶದಲ್ಲಿ ಕೆಟ್ಟು ನಿಂತಿದೆ. ಬಸ್ಸಿನಲ್ಲಿದ್ದ ಆದಂ ಅವರು ಕೆಳಗಿಳಿದು ಮುಂದೆ ನಿಂತಿದ್ದ ಖಾಸಗಿ ಬಸ್ಸು ಹತ್ತಲು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ನಿಯಂತ್ರಣ ಕಳೆದು ಎಡಕ್ಕೆ ತಿರುಗಿದ್ದು ಹೆದ್ದಾರಿ ಬದಿಯ ಬೇಕರಿ ಮುಂಭಾಗದಲ್ಲಿ ನಿಂತಿದ್ದ ಇಲೆಕ್ಟ್ರಿಕ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಆದಂ ಅವರ ಮೇಲೆ ಹರಿದಿದೆ. ಮುಂದೆ ಸಾಗಿದ ಟೆಂಪೋ ಬೇಕರಿ ಅಂಗಡಿಯ ಬೃಹತ್ ನಾಮಫಲಕದ ಕಮಾನಿಗೂ ಗುದ್ದಿ ಗೂಡಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಆದಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದನ್ನ ಕಂಡ ಬಳಿಕ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಟೆಂಪೋ ಡಿಕ್ಕಿ ಹೊಡೆದಿದ್ದ ಇಲೆಕ್ಟ್ರಿಕ್ ಕಾರಿನಲ್ಲಿ ಮಕ್ಕಳು ಸೇರಿ ಆರು ಜನರನ್ನ ಕೂರಿಸಿದ್ದ ಚಾಲಕ ರಸ್ತೆ ಅಂಚಿನ ಬೇಕರಿಗೆ ತಿಂಡಿ ಖರೀದಿಗೆ ತೆರಳಿದ್ದರು. ಅದೃಷ್ಟವಶಾತ್ ಘಟನೆಯಿಂದ ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Accident, Tempo goes over pedestrian at Kallapu in Mangalore. The deceased has been identified as Adam from Farangipete.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm