ಬ್ರೇಕಿಂಗ್ ನ್ಯೂಸ್
31-10-24 06:38 pm Mangalore Correspondent ಕರಾವಳಿ
ಉಳ್ಳಾಲ, ಅ.31: ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ನಗರ ಸಾರಿಗೆ ಬಸ್ಸಿನಿಂದ ಕೆಳಗಿಳಿದು, ಖಾಸಗಿ ಬಸ್ಸು ಹತ್ತುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಇಂಟರ್ ಲಾಕ್ ತುಂಬಿದ್ದ ಟೆಂಪೋ ಲಾರಿಯೊಂದು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಸಮೀಪದ ಅಡಂಕುದ್ರು ಎಂಬಲ್ಲಿ ಗುರುವಾರ ಸಂಜೆ ವೇಳೆ ನಡೆದಿದೆ.
ಫರಂಗಿಪೇಟೆ ರೊಟ್ಟಿಗುಡ್ಡೆ ನಿವಾಸಿ ಆದಂ (63) ಮೃತಪಟ್ಟ ವ್ಯಕ್ತಿ. ಗುರುವಾರ ಸಂಜೆ ಮಂಗಳೂರಿನಿಂದ ಮುಡಿಪುವಿಗೆ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ನಗರ ಸಾರಿಗೆ ಅಡಂಕುದ್ರು ಪ್ರದೇಶದಲ್ಲಿ ಕೆಟ್ಟು ನಿಂತಿದೆ. ಬಸ್ಸಿನಲ್ಲಿದ್ದ ಆದಂ ಅವರು ಕೆಳಗಿಳಿದು ಮುಂದೆ ನಿಂತಿದ್ದ ಖಾಸಗಿ ಬಸ್ಸು ಹತ್ತಲು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ನಿಯಂತ್ರಣ ಕಳೆದು ಎಡಕ್ಕೆ ತಿರುಗಿದ್ದು ಹೆದ್ದಾರಿ ಬದಿಯ ಬೇಕರಿ ಮುಂಭಾಗದಲ್ಲಿ ನಿಂತಿದ್ದ ಇಲೆಕ್ಟ್ರಿಕ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಆದಂ ಅವರ ಮೇಲೆ ಹರಿದಿದೆ. ಮುಂದೆ ಸಾಗಿದ ಟೆಂಪೋ ಬೇಕರಿ ಅಂಗಡಿಯ ಬೃಹತ್ ನಾಮಫಲಕದ ಕಮಾನಿಗೂ ಗುದ್ದಿ ಗೂಡಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಆದಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದನ್ನ ಕಂಡ ಬಳಿಕ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.





ಟೆಂಪೋ ಡಿಕ್ಕಿ ಹೊಡೆದಿದ್ದ ಇಲೆಕ್ಟ್ರಿಕ್ ಕಾರಿನಲ್ಲಿ ಮಕ್ಕಳು ಸೇರಿ ಆರು ಜನರನ್ನ ಕೂರಿಸಿದ್ದ ಚಾಲಕ ರಸ್ತೆ ಅಂಚಿನ ಬೇಕರಿಗೆ ತಿಂಡಿ ಖರೀದಿಗೆ ತೆರಳಿದ್ದರು. ಅದೃಷ್ಟವಶಾತ್ ಘಟನೆಯಿಂದ ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Accident, Tempo goes over pedestrian at Kallapu in Mangalore. The deceased has been identified as Adam from Farangipete.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am