ಬ್ರೇಕಿಂಗ್ ನ್ಯೂಸ್
31-10-24 06:38 pm Mangalore Correspondent ಕರಾವಳಿ
ಉಳ್ಳಾಲ, ಅ.31: ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ನಗರ ಸಾರಿಗೆ ಬಸ್ಸಿನಿಂದ ಕೆಳಗಿಳಿದು, ಖಾಸಗಿ ಬಸ್ಸು ಹತ್ತುತ್ತಿದ್ದ ವ್ಯಕ್ತಿಯೋರ್ವರ ಮೇಲೆ ಇಂಟರ್ ಲಾಕ್ ತುಂಬಿದ್ದ ಟೆಂಪೋ ಲಾರಿಯೊಂದು ಹರಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಸಮೀಪದ ಅಡಂಕುದ್ರು ಎಂಬಲ್ಲಿ ಗುರುವಾರ ಸಂಜೆ ವೇಳೆ ನಡೆದಿದೆ.
ಫರಂಗಿಪೇಟೆ ರೊಟ್ಟಿಗುಡ್ಡೆ ನಿವಾಸಿ ಆದಂ (63) ಮೃತಪಟ್ಟ ವ್ಯಕ್ತಿ. ಗುರುವಾರ ಸಂಜೆ ಮಂಗಳೂರಿನಿಂದ ಮುಡಿಪುವಿಗೆ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ನಗರ ಸಾರಿಗೆ ಅಡಂಕುದ್ರು ಪ್ರದೇಶದಲ್ಲಿ ಕೆಟ್ಟು ನಿಂತಿದೆ. ಬಸ್ಸಿನಲ್ಲಿದ್ದ ಆದಂ ಅವರು ಕೆಳಗಿಳಿದು ಮುಂದೆ ನಿಂತಿದ್ದ ಖಾಸಗಿ ಬಸ್ಸು ಹತ್ತಲು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ನಿಯಂತ್ರಣ ಕಳೆದು ಎಡಕ್ಕೆ ತಿರುಗಿದ್ದು ಹೆದ್ದಾರಿ ಬದಿಯ ಬೇಕರಿ ಮುಂಭಾಗದಲ್ಲಿ ನಿಂತಿದ್ದ ಇಲೆಕ್ಟ್ರಿಕ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಆದಂ ಅವರ ಮೇಲೆ ಹರಿದಿದೆ. ಮುಂದೆ ಸಾಗಿದ ಟೆಂಪೋ ಬೇಕರಿ ಅಂಗಡಿಯ ಬೃಹತ್ ನಾಮಫಲಕದ ಕಮಾನಿಗೂ ಗುದ್ದಿ ಗೂಡಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ ಆದಂ ಅವರು ಸ್ಥಳದಲ್ಲೇ ಮೃತಪಟ್ಟಿದ್ದನ್ನ ಕಂಡ ಬಳಿಕ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.





ಟೆಂಪೋ ಡಿಕ್ಕಿ ಹೊಡೆದಿದ್ದ ಇಲೆಕ್ಟ್ರಿಕ್ ಕಾರಿನಲ್ಲಿ ಮಕ್ಕಳು ಸೇರಿ ಆರು ಜನರನ್ನ ಕೂರಿಸಿದ್ದ ಚಾಲಕ ರಸ್ತೆ ಅಂಚಿನ ಬೇಕರಿಗೆ ತಿಂಡಿ ಖರೀದಿಗೆ ತೆರಳಿದ್ದರು. ಅದೃಷ್ಟವಶಾತ್ ಘಟನೆಯಿಂದ ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Accident, Tempo goes over pedestrian at Kallapu in Mangalore. The deceased has been identified as Adam from Farangipete.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm