ಬ್ರೇಕಿಂಗ್ ನ್ಯೂಸ್
31-10-24 07:03 pm Mangalore Correspondent ಕರಾವಳಿ
ಮಂಗಳೂರು, ಅ.31: ಕನ್ನಡ ಭಾಷೆಯಲ್ಲಿ ಲಭ್ಯವಾದ ಮೊಟ್ಟಮೊದಲ ಶಿಲಾ ಶಾಸನ ಎನಿಸಿರುವ “ಹಲ್ಮಿಡಿ ಶಾಸನ’ದ ಕಲ್ಲಿನ ಪ್ರತಿಕೃತಿಯನ್ನು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. 'ಕರ್ನಾಟಕ ಸಂಭ್ರಮ-50’ರ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಹಲ್ಮಿಡಿ ಶಾಸನದ ಸವಿನೆನಪನ್ನು ಶಾಶ್ವತವಾಗಿಸುವುದು ಮತ್ತು ರಾಜ್ಯಾದ್ಯಂತ ಪ್ರಚಾರ ಪಡಿಸುವುದು ಯೋಜನೆಯ ಉದ್ದೇಶ.
ಇದಕ್ಕಾಗಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ವತಿಯಿಂದ ಹಲ್ಮಿಡಿ ಶಾಸನದ ಕಲ್ಲಿನ ಪ್ರತಿಕೃತಿ ರಚಿಸಲಾಗಿದೆ. ಎಲ್ಲ ಜಿಲ್ಲೆಗಳ ಜಿಲ್ಲಾಡಳಿತದ ವತಿಯಿಂದ ಶಿಲಾಶಾಸನವನ್ನು ಪ್ರತಿಷ್ಠಾಪಿಸಿ ನ.1ರಂದು ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಂದ ಅನಾವರಣಗೊಳಿಸಲು ಉದ್ದೇಶಿಸಲಾಗಿದೆ. ಎಚ್ಡಿ ಕೋಟೆಯಿಂದ ತರಿಸಿದ ಕಲ್ಲನ್ನು ಬಳಸಿ ಹಲ್ಮಿಡಿ ಶಿಲಾಶಾಸನದ ಪ್ರತಿಕೃತಿಯನ್ನು ಚಿಕ್ಕಮಗಳೂರಿನಲ್ಲಿ ಶಿಲ್ಪಕಾರರು ಸಿದ್ದಪಡಿಸಿದ್ದಾರೆ. ಅಲ್ಲಿಂದ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಈಗಾಗಲೇ ಕಲ್ಲಿನ ಪ್ರತಿಮೆಯನ್ನು ಕಳುಹಿಸಲಾಗಿದೆ. ಪ್ರತಿಷ್ಠಾಪನೆ ನಡೆಸಬೇಕಾದ ಜಿಲ್ಲಾ ಕೇಂದ್ರಗಳಲ್ಲಿ ಕಲ್ಲಿನ ಪ್ರತಿಕೃತಿ ತಂದು ನಿಲ್ಲಿಸಲಾಗಿದೆ.
ಪ್ರತಿಷ್ಠಾಪನೆ ನಡೆಸುವ ಕೆಳಭಾಗದಲ್ಲಿ ಕಾಂಕ್ರಿಟ್ ಫೌಂಡೇಶನ್, ಮಧ್ಯೆ ಗ್ರಾನೈಟ್ ಶಿಲೆ ಬಳಸಲಾಗಿದೆ. ಮಂಗಳೂರಿನ ಪುರಭವನ ಮುಂಭಾಗದ ರಾಜಾಜಿ ಪಾರ್ಕ್ನಲ್ಲಿ ಹಾಗೂ ಉಡುಪಿಯ ಭುಜಂಗ ಪಾರ್ಕ್ನಲ್ಲಿ ಈ ಶಿಲಾಶಾಸನ ಪ್ರತಿಷ್ಠಾಪನೆ ನಡೆಯಲಿದೆ.
ಕನ್ನಡದ ಮೊದಲ ಶಿಲಾ ಶಾಸನ
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲ್ಮಿಡಿಯಲ್ಲಿ 1936ರಲ್ಲಿ ಪತ್ತೆಯಾದ ಶಾಸನವನ್ನು ಕನ್ನಡ ಲಿಪಿಯಲ್ಲಿ ಲಭ್ಯವಾದ ಮೊಟ್ಟಮೊದಲ ಶಾಸನವೆಂದು ಪರಿಗಣಿಸಲಾಗಿದೆ. 16 ಸಾಲುಗಳ ಕನ್ನಡ ಬರಹ ಇದರಲ್ಲಿದ್ದು ಇದು ಕ್ರಿಸ್ತ ಶಕ 450ರ ಸುಮಾರಿನದ್ದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಈ ಶಿಲಾ ಶಾಸನದ ಮಹತ್ವವನ್ನು ಶಾಶ್ವತವಾಗಿ ಜನರ ನೆನಪಿನಲ್ಲಿ ಉಳಿಯುವಂತೆ ಮಾಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರದಲ್ಲಿ ಪ್ರತಿಕೃತಿ ರೂಪದಲ್ಲಿ ಇರಿಸಲು ಸರಕಾರ ಉದ್ದೇಶಿಸಿದೆ. ಶಾಸನದ ಪ್ರತಿಕೃತಿ ನಾಲ್ಕೂವರೆ ಅಡಿ ಎತ್ತರ, 2 ಅಡಿ ಅಗಲ, 6 ಇಂಚು ದಪ್ಪ, 450 ರಿಂದ 500 ಕಿಲೋ ತೂಕ ಹೊಂದಿದೆ.
The state government has decided to install a stone replica of the "Halmidi inscription" which is said to be the first stone inscription available in Kannada language in all the district centers across the state.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm