ಬ್ರೇಕಿಂಗ್ ನ್ಯೂಸ್
01-11-24 11:42 am Mangalore Correspondent ಕರಾವಳಿ
ಉಳ್ಳಾಲ, ನ.1: ಪೊಲೀಸರಿಗೆ ನಿರಂತರ ಚಳ್ಳೆಹಣ್ಣು ತಿನ್ನಿಸಿ ಗಾಂಜಾ ಮಾರಾಟ ನಡೆಸುತ್ತಿದ್ದ ಬಂಟಿ-ಬಬ್ಲಿ ದಂಪತಿಯನ್ನ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ನಾಯಕ್ ನೇತೃತ್ವದ "ಆ್ಯಂಟಿ ಡ್ರಗ್ ಟೀಮ್" ತಲಪಾಡಿ ಸಮೀಪದ ಕಿನ್ಯ ಎಂಬಲ್ಲಿ ಬಂಧಿಸಿದೆ.
ಕಿನ್ಯ ಗ್ರಾಮದ ರೆಹಮತ್ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದ ಶೇಖ್ ನಝೀರ್ ಹುಸೈನ್ (50) ಮತ್ತು ಆತನ ಪತ್ನಿ ಅಪ್ಸಾತ್ (37) ಬಂಧಿತ ದಂಪತಿ. ಕಿನ್ಯಾ, ರಹಮತ್ ನಗರದ ಬಾಡಿಗೆ ಮನೆಯಲ್ಲೇ ಆರೋಪಿಗಳು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಅಕ್ಟೋಬರ್ 30 ರಂದು ದಾಳಿ ನಡೆಸಿ ಮನೆಯಲ್ಲಿದ್ದ ಸುಮಾರು 2.4 ಲಕ್ಷ ಬೆಲೆಬಾಳುವ 8 ಕೆಜಿಯಷ್ಟು ಗಾಂಜಾ ಹಾಗೂ ಮಾರಾಟ ಮಾಡಲು ಉಪಯೋಗಿಸಿದ್ದ ರೆನಾಲ್ಟ್ ಕ್ವಿಡ್ ಬಿಳಿ ಬಣ್ಣದ ಕಾರು, 2 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ವಾಧೀನಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ 5.14.810/ ಆಗಿದ್ದು, ಆರೋಪಿ ದಂಪತಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 195/2024 ಕಲಂ 8(c), 20 (b) (ii) (B) NDPS Act 1985 r/w 3(5) BNS -2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಬಂಧಿತ ಆರೋಪಿ ನಝೀರ್ ಹುಸೈನ್ ಮೂಲತಃ ಮಂಜೇಶ್ವರದ ಕುಂಜತ್ತೂರು ನಿವಾಸಿಯಾಗಿದ್ದು, ಗಾಂಜಾ ಮಾರಾಟಕ್ಕಾಗಿಯೇ ಕಿನ್ಯ ಗ್ರಾಮದಲ್ಲಿ ಬಾಡಿಗೆ ಮನೆ ಪಡೆದಿದ್ದ. ನಝೀರ್ ತನ್ನ ಕಾರಲ್ಲೇ ಪತ್ನಿ ಅಥವಾ ಮಕ್ಕಳನ್ನ ಕುಳ್ಳಿರಿಸಿ ಗಿರಾಕಿಗಳಿಗೆ ಗಾಂಜಾ ಪೂರೈಸುತ್ತಿದ್ದನಂತೆ. ಗಾಂಜಾ ಮಾರಾಟ ವೇಳೆ ಕಾರಲ್ಲಿ ಪತ್ನಿ ಅಥವಾ ಮಕ್ಕಳನ್ನ ಕುಳ್ಳಿರಿಸಿ ಪೊಲೀಸರಿಗೆ ಸ್ವಲ್ಪವೂ ಸಂಶಯ ಬಾರದಂತೆ ಗಾಂಜಾ ಧಂದೆ ನಡೆಸುತ್ತಿದ್ದನೆಂದು ಆರೋಪಗಳಿವೆ. ಖಚಿತ ಮಾಹಿತಿಯನ್ನ ಆಧರಿಸಿ ಪೊಲೀಸರು ಆರೋಪಿಗಳ ಬಾಡಿಗೆ ಮನೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ್ ಗೋಯಲ್ ಮತ್ತು ದಿನೇಶ್ ಕುಮಾರ್ ನಿರ್ದೇಶನದಲ್ಲಿ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯ ಎನ್.ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಳ್ಳಾಲ ಪೊಲೀಸ್ ಠಾಣೆ ನಿರೀಕ್ಷಕರಾದ ಬಾಲಕೃಷ್ಣ ಹೆಚ್.ಎನ್, ಪಿಎಸ್ ಐ ಸಂತೋಷ್ ಕುಮಾರ್ ಡಿ, "ಆಂಟಿ ಡ್ರಗ್ ಟೀಮ್ "ನ ಪಿಎಸ್ಐ ಪುನೀತ್ ಹಾಗೂ ಸಿಬ್ಬಂದಿಯವರಾದ ಸಾಜು ನಾಯರ್, ಮಹೇಶ್, ಶಿವಕುಮಾರ್, ಅಕ್ಬರ್, ತಿರುಮಲೇಶ್ ಭಾಗವಹಿಸಿದ್ದಾರೆ.
Mangalore couple selling ganja in rented house arrested at ullal by Acp Dhanya and team. A police team led by the anti-drug squad of Mangaluru city south sub-division arrested two individuals for selling ganja from a rented house in Kaje Bakimaaru, Keenya Rahmathnagara. Ganja weighing eight kilos and valued at Rs 2,04,000 in the market was seized from the accused.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm