ಬ್ರೇಕಿಂಗ್ ನ್ಯೂಸ್
03-11-24 02:43 pm Udupi Correspondent ಕರಾವಳಿ
ಉಡುಪಿ, ನ.3: ಉಡುಪಿ ನಗರದೊಳಗೆ 'ಸುಲ್ತಾನ್ ಪುರ' ಎಂಬ ಹೆಸರು ಸರ್ಕಾರದ ದಿಶಾಂಕ್ ಆಪ್ ನಲ್ಲಿ ಕಾಣಿಸಿಕೊಂಡ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಕ್ಫ್ ವಿವಾದ ಎದ್ದಿರುವಾಗಲೇ ಇಂತಹ ಹೆಸರು ಕೇಳಿಬಂದಿದ್ದರಿಂದ ಜನರು ತಮ್ಮ ಭೂಮಿಯ ದಾಖಲೆಗಳನ್ನು ಪರಿಶೀಲಿಸಲು ಆರಂಭಿಸಿದ್ದರು. ಈ ಬಗ್ಗೆ ಸಾಕಷ್ಟು ಗೊಂದಲವೂ ಉಂಟಾಗಿತ್ತು. ಇದೀಗ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರೇ ಸ್ಪಷ್ಟನೆ ನೀಡಿದ್ದು ಅಂತಹ ಹೆಸರು ಕಂದಾಯ ದಾಖಲೆಗಳಲ್ಲಿ ಇಲ್ಲ ಎಂದಿದ್ದಾರೆ.
ಸರ್ವೇ ನಂಬರ್ ಗಳನ್ನು ದಾಖಲಿಸುವ ರಾಜ್ಯ ಸರ್ಕಾರದ ದಿಶಾಂಕ್ ಆಪ್ ನಲ್ಲಿ ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ರಲ್ಲಿ ‘ಸುಲ್ತಾನಪುರ’ ಎಂಬ ಹೆಸರು ಪತ್ತೆಯಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ, Dishank app ನಲ್ಲಿ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ಮತ್ತು 85 ರಲ್ಲಿ SULTANAPURA ಎಂದು ದಾಖಲಾಗಿರುತ್ತದೆ ಎಂಬ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವುದನ್ನು ಗಮನಿಸಲಾಗಿದೆ. ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120& 85 ರ ಗ್ರಾಮ ನಕಾಶೆಯನ್ನು ಲಗತ್ತಿಸಲಾಗಿದೆ.

ಸಾರ್ವಜನಿಕರು ಸಹ ಸದರಿ ಗ್ರಾಮದ ಪೂರ್ಣ ಗ್ರಾಮ ನಕಾಶೆಯನ್ನು www.landrecords.karnataka.gov.in ನಲ್ಲಿ Download ಮಾಡಬಹುದಾಗಿದೆ. ಗ್ರಾಮ ನಕಾಶೆಯಲ್ಲಿ SULTANAPUR ಎಂದು ದಾಖಲಾಗಿರುದಿಲ್ಲ.
ಕಂದಾಯ/ಭೂಮಾಪನ ಇಲಾಖೆ ದಾಖಲೆಗಳಲ್ಲೂ Sultanpur ಎಂದು ಇರುವುದಿಲ್ಲ. ಸರ್ವೇ ನಂಬರು 120ರ RTC ಯಲ್ಲೂ ಈ ರೀತಿಯ ಯಾವುದೇ ಉಲ್ಲೇಖವಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕ ಪಡಬೇಕಾಗಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಿದ್ದಾರೆ.
Udupi Deputy Commissioner Dr Vidya Kumari provided clarification regarding the appearance of the name ‘Sultanpur’ under survey number 120 in Udupi on the state government’s Dishaank app.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm