ಬ್ರೇಕಿಂಗ್ ನ್ಯೂಸ್
03-11-24 02:43 pm Udupi Correspondent ಕರಾವಳಿ
ಉಡುಪಿ, ನ.3: ಉಡುಪಿ ನಗರದೊಳಗೆ 'ಸುಲ್ತಾನ್ ಪುರ' ಎಂಬ ಹೆಸರು ಸರ್ಕಾರದ ದಿಶಾಂಕ್ ಆಪ್ ನಲ್ಲಿ ಕಾಣಿಸಿಕೊಂಡ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಕ್ಫ್ ವಿವಾದ ಎದ್ದಿರುವಾಗಲೇ ಇಂತಹ ಹೆಸರು ಕೇಳಿಬಂದಿದ್ದರಿಂದ ಜನರು ತಮ್ಮ ಭೂಮಿಯ ದಾಖಲೆಗಳನ್ನು ಪರಿಶೀಲಿಸಲು ಆರಂಭಿಸಿದ್ದರು. ಈ ಬಗ್ಗೆ ಸಾಕಷ್ಟು ಗೊಂದಲವೂ ಉಂಟಾಗಿತ್ತು. ಇದೀಗ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರೇ ಸ್ಪಷ್ಟನೆ ನೀಡಿದ್ದು ಅಂತಹ ಹೆಸರು ಕಂದಾಯ ದಾಖಲೆಗಳಲ್ಲಿ ಇಲ್ಲ ಎಂದಿದ್ದಾರೆ.
ಸರ್ವೇ ನಂಬರ್ ಗಳನ್ನು ದಾಖಲಿಸುವ ರಾಜ್ಯ ಸರ್ಕಾರದ ದಿಶಾಂಕ್ ಆಪ್ ನಲ್ಲಿ ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ರಲ್ಲಿ ‘ಸುಲ್ತಾನಪುರ’ ಎಂಬ ಹೆಸರು ಪತ್ತೆಯಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ, Dishank app ನಲ್ಲಿ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ಮತ್ತು 85 ರಲ್ಲಿ SULTANAPURA ಎಂದು ದಾಖಲಾಗಿರುತ್ತದೆ ಎಂಬ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವುದನ್ನು ಗಮನಿಸಲಾಗಿದೆ. ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120& 85 ರ ಗ್ರಾಮ ನಕಾಶೆಯನ್ನು ಲಗತ್ತಿಸಲಾಗಿದೆ.

ಸಾರ್ವಜನಿಕರು ಸಹ ಸದರಿ ಗ್ರಾಮದ ಪೂರ್ಣ ಗ್ರಾಮ ನಕಾಶೆಯನ್ನು www.landrecords.karnataka.gov.in ನಲ್ಲಿ Download ಮಾಡಬಹುದಾಗಿದೆ. ಗ್ರಾಮ ನಕಾಶೆಯಲ್ಲಿ SULTANAPUR ಎಂದು ದಾಖಲಾಗಿರುದಿಲ್ಲ.
ಕಂದಾಯ/ಭೂಮಾಪನ ಇಲಾಖೆ ದಾಖಲೆಗಳಲ್ಲೂ Sultanpur ಎಂದು ಇರುವುದಿಲ್ಲ. ಸರ್ವೇ ನಂಬರು 120ರ RTC ಯಲ್ಲೂ ಈ ರೀತಿಯ ಯಾವುದೇ ಉಲ್ಲೇಖವಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕ ಪಡಬೇಕಾಗಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಿದ್ದಾರೆ.
Udupi Deputy Commissioner Dr Vidya Kumari provided clarification regarding the appearance of the name ‘Sultanpur’ under survey number 120 in Udupi on the state government’s Dishaank app.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm