ಬ್ರೇಕಿಂಗ್ ನ್ಯೂಸ್
04-11-24 04:34 pm Mangalore Correspondent ಕರಾವಳಿ
ಮಂಗಳೂರು, ನ.4: ಕದ್ದ ಮಾಲನ್ನು ವಾಪಸ್ ಕೊಡುವ ಹೊಸ ಪರಿಪಾಠ ಕಾಂಗ್ರೆಸ್ ಸರಕಾರದಲ್ಲಿ ಬೆಳೆದು ಬಂದಿದೆ. ವಾಲ್ಮೀಕಿ ಹಗರಣದಲ್ಲಿ ಭ್ರಷ್ಟಾಚಾರ ಒಪ್ಪಿಕೊಂಡ ಬಳಿಕ ಮುಡಾ ಪ್ರಕರಣದಲ್ಲಿಯೂ ಪತ್ನಿ ಪಡೆದ 14 ಸೈಟ್ ಗಳನ್ನು ಸಿದ್ದರಾಮಯ್ಯ ವಾಪಸ್ ಮಾಡಿದ್ದಾರೆ. ಇದೀಗ ವಕ್ಫ್ ಕಾಯ್ದೆಯಡಿ 50 ವರ್ಷಗಳ ಹಿಂದಿನ ನೋಟಿಫಿಕೇಶನ್ ಆಧರಿಸಿ 1200 ಎಕ್ರೆ ಭೂಮಿಗೆ ನೋಟೀಸ್ ಕೊಟ್ಟು ವಾಪಸ್ ಮಾಡಿಸಿದ್ದಾರೆ. ಕದಿಯೋದು, ಸಿಕ್ಕಿಬಿದ್ದಾಗ ವಾಪಸ್ ಮಾಡೋದು ಖಯಾಲಿಯಾಗಿದೆ. ಕೇಂದ್ರ ಸರಕಾರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತೆ ಎಂದು ತಿಳಿದು ರಾಹುಲ್ ಗಾಂಧಿ ಅಣತಿಯಂತೆ ಸಿಎಂ ಸಿದ್ದರಾಮಯ್ಯ ಮತ್ತು ಜಮೀರ್ ಅಹ್ಮದ್ ಖಾನ್ ರಾಜ್ಯದಲ್ಲಿ ಲ್ಯಾಂಡ್ ಜಿಹಾದ್ ಮಾಡುತ್ತಿದ್ದಾರೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.
ಮಂಗಳೂರು ನಗರದ ಹಂಪನಕಟ್ಟೆಯ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಮತ್ತು ಸಿದ್ದರಾಮಯ್ಯ ಸರ್ಕಾರದ ನಡೆ ವಿರೋಧಿಸಿ ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ವಕ್ಫ್ ಕಾಯ್ದೆ ಬ್ರಿಟಿಷರು ಹಿಂದು - ಮುಸ್ಲಿಂ ಒಡೆದಾಳುವುದಕ್ಕಾಗಿ ಮಾಡಿದ್ದ ಕಾಯ್ದೆ. ಅದನ್ನು ಯಥಾವತ್ ಸ್ವಾತಂತ್ರ್ಯ ಭಾರತದಲ್ಲಿ ಜಾರಿಗೆ ತಂದಿದ್ದು ಕಾಂಗ್ರೆಸ್. ಆದರೆ, ಬಡ ಮುಸ್ಲಿಮರ ಉದ್ಧಾರ ಮಾಡುವ ಬದಲು ವಕ್ಫ್ ಹೆಸರಿನಲ್ಲಿ ಕಾಂಗ್ರೆಸ್ ಲ್ಯಾಂಡ್ ಜಿಹಾದ್ ಮಾಡಿದ್ದಾರೆ. ದೇಶಾದ್ಯಂತ ವಕ್ಫ್ ಆಸ್ತಿಯನ್ನು ಲೂಟಿ ಮಾಡಿದ್ದಾರೆ.

ಇದಲ್ಲದೆ, ಯಾವುದೇ ಖಾಸಗಿ ಆಸ್ತಿಯನ್ನೂ ವಕ್ಫ್ ಕಾಯ್ದೆಯಡಿ ನೋಟಿಫೈ ಮಾಡಲು ಅವಕಾಶ ಕೊಟ್ಟಿದ್ದಾರೆ. ಅದನ್ನು ಖಾಸಗಿ ವ್ಯಕ್ತಿ ಪ್ರಶ್ನೆ ಮಾಡುವುದಕ್ಕೂ ಸಾಧ್ಯವಿಲ್ಲದಂತೆ ಮಾಡಿದ್ದು ಕಾಂಗ್ರೆಸ್. ವಕ್ಫ್ ಭೂಮಿಯೆಂದು ನೋಟಿಫೈ ಆದಲ್ಲಿ ಅದನ್ನು ವಕ್ಫ್ ಟ್ರಿಬ್ಯುನಲ್ ನಲ್ಲಿ ಮಾತ್ರ ಪ್ರಶ್ನೆ ಮಾಡಬೇಕಾಗುತ್ತದೆ. ಮುಸ್ಲಿಂ ವೈಯಕ್ತಿಕ ಕಾನೂನನ್ನು ಪಾಲಿಸುವ, ಮುಸ್ಲಿಮರು ಮಾತ್ರ ಇರುವ ಟ್ರಿಬ್ಯುನಲ್ ನಲ್ಲಿ ಪ್ರಶ್ನೆ ಮಾಡಿದರೆ ಇತರೇ ಧರ್ಮೀಯನಿಗೆ ನ್ಯಾಯ ಸಿಗುವುದೇ. ಸ್ವತಂತ್ರ ಭಾರತದಲ್ಲಿ ಜನಸಾಮಾನ್ಯನಿಗೆ ಇಂಥ ಹೀನ ಸ್ಥಿತಿ ತಂದಿಟ್ಟಿದ್ದು ಕಾಂಗ್ರೆಸ್ ಎಂದು ದೂರಿದರು ಬ್ರಿಜೇಶ್ ಚೌಟ.
ಹಿಂದು ವಿರೋಧಿ, ದೇಶ ವಿರೋಧಿ, ಸಂವಿಧಾನ ವಿರೋಧಿ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡಲು ಮೋದಿ ಸರಕಾರ ಜಂಟಿ ಸದನ ಸಮಿತಿಯ ಚರ್ಚೆಗೆ ಕೊಟ್ಟಿದೆ. ಕಾಯ್ದೆ ತಿದ್ದುಪಡಿ ಆಗುತ್ತಿರುವುದನ್ನು ತಿಳಿದ ಸಿದ್ದರಾಮಯ್ಯ ಮತ್ತು ಜಮೀರ್ ಅಹ್ಮದ್ ಖಾನ್, ವಿಜಯಪುರ ಜಿಲ್ಲೆಯಲ್ಲಿ ರೈತರಿಗೆ ಸೇರಿದ 1200 ಎಕ್ರೆ ಭೂಮಿಗೆ ನೋಟಿಸ್ ಕೊಟ್ಟಿದ್ದಾರೆ. ಕಾಯ್ದೆಗೆ ತಿದ್ದುಪಡಿ ತರುತ್ತಿರುವಾಗಲೇ ರೈತರ ಭೂಮಿಗೆ ನೋಟಿಸ್ ಕೊಟ್ಟಿರುವುದು ಏನನ್ನು ಸೂಚಿಸುತ್ತದೆ ಸಿದ್ದರಾಮಯ್ಯ ಅವರೇ ಎಂದು ಕೇಳಿದ ಚೌಟ, ನೀವು ಕೇವಲ ಮುಸ್ಲಿಮರಿಗೆ ಮುಖ್ಯಮಂತ್ರಿ ಆಗಿದ್ದೀರಾ ಎಂದು ಪ್ರಶ್ನಿಸಿದರು.
ಶಾಸಕ ಭರತ್ ಶೆಟ್ಟಿ ಮಾತನಾಡಿ, ಟಿವಿಯಲ್ಲಿ ಡಿಬೇಟ್ ಕುಳಿತ ವ್ಯಕ್ತಿಯೊಬ್ಬ ವಿಧಾನಸೌಧ ಕೂಡ ವಕ್ಫ್ ಆಸ್ತಿ. ಅದರ ಮೇಲೆ ನಾವೀಗ ಸಮಸ್ಯೆ ಮಾಡಿಲ್ಲ ಎಂದು ಹೇಳುತ್ತಾನೆ. ಅಂದ್ರೆ, ಮುಂದೆ ಸಮಸ್ಯೆ ತರುತ್ತೇವೆ ಎನ್ನುವುದು ಆತನ ಮಾತಿನ ಅರ್ಥ. ಬಿಟ್ಟರೆ ವಿಧಾನಸೌಧ, ಪಾರ್ಲಿಮೆಂಟನ್ನೂ ತಮ್ಮದೇ ಆಸ್ತಿಯೆಂದು ಹೇಳುತ್ತೀರಿ. ನಿಮ್ಮ ಕರಾಳ ಕಾಯ್ದೆಯನ್ನು ಮೋದಿ ಸರಕಾರ ಬದಲಾವಣೆ ಮಾಡುತ್ತದೆ. ವಕ್ಫ್ ಕಾಯ್ದೆ ಕುರಿತ ಪ್ರಶ್ನೆಗಳನ್ನು ನ್ಯಾಯಾಂಗದಲ್ಲಿ ಪ್ರಶ್ನಿಸಲು ಹಕ್ಕಿಲ್ಲ ಎಂದರೆ, ಅದು ಸಂವಿಧಾನ ವ್ಯಾಪ್ತಿಗೆ ಬರುವುದಿಲ್ಲ ಎಂದಾಯಿತು. ಸಂವಿಧಾನದಲ್ಲಿ ಇಲ್ಲದ ಕಾಯ್ದೆ ನಮ್ಮಲ್ಲಿ ಯಾಕೆ ಬೇಕು ಎಂದು ಪ್ರಶ್ನೆ ಮಾಡಿದರು.
ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮಾತನಾಡಿದರು. ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಸೇರಿದಂತೆ ಮಂಗಳೂರು ಉತ್ತರ, ದಕ್ಷಿಣ, ಉಳ್ಳಾಲ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Protest against Waqf scam by MP Brijesh Chowta in Mangalore. “Congress is still trapped in a colonial mindset, using Waqf as a political tool,” Chowta declared.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm