ಬ್ರೇಕಿಂಗ್ ನ್ಯೂಸ್
05-11-24 10:40 pm Mangaluru Correspondent ಕರಾವಳಿ
ಮಂಗಳೂರು, ನ.5: ಹದಗೆಟ್ಟಿರುವ ನಂತೂರು - ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಕುರಿತು ಚರ್ಚಿಸಲು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ, ಸುರತ್ಕಲ್ ಇದರ ವತಿಯಿಂದ ಕುಳಾಯಿ ಮಹಿಳಾ ಮಂಡಲದ ಸಭಾಂಗಣದಲ್ಲಿ ಸಮಾಲೋಚನಾ ಸಭೆ ನಡೆಯಿತು.
ಕಳೆದ ಐದಾರು ವರ್ಷಗಳಿಂದ ಡಾಮರೀಕರಣ, ನಿರ್ವಹಣೆ ಇಲ್ಲದೆ ಪೂರ್ತಿ ಹದಗೆಟ್ಟಿರುವ ಹೆದ್ದಾರಿಯ ಹಲವು ಸಮಸ್ಯೆಗಳ ಕುರಿತು ಸಭೆಯಲ್ಲಿ ಪಾಲ್ಗೊಂಡ ಹಲವರು ತಮ್ಮ ಅನಿಸಿಕೆ ಹೇಳಿಕೊಂಡರು. ಸಮಸ್ಯೆ ಬಗೆಹರಿಸಲು ಸ್ಥಳೀಯ ಜನಪ್ರತಿನಿಧಿಗಳ ನಿರಾಸಕ್ತಿಯ ಕುರಿತು ಆಕ್ಷೇಪಗಳು ವ್ಯಕ್ತವಾದವು. ಹೆದ್ದಾರಿಯ ದುಸ್ಥಿತಿಯಿಂದ ಅಪಘಾತಗಳು ಸರಣಿಯಾಗಿ ನಡೆಯುತ್ತಿದ್ದು, ಸವಾರರು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಸಂಬಂಧಪಟ್ಟವರು ಗಮನ ಹರಿಸದಿರುವ ಬಗ್ಗೆ ಆಕ್ರೋಶ ವ್ಯಕ್ತವಾಯಿತು.
ಚರ್ಚೆ, ಅಭಿಪ್ರಾಯಗಳ ತರುವಾಯ ಹೆದ್ದಾರಿಯ ಪ್ರಮುಖ ಸಮಸ್ಯೆಗಳನ್ನು ಗುರುತಿಸಿ ಪ್ರಧಾನವಾಗಿ, ಹದಗೆಟ್ಟಿರುವ ಸುರತ್ಕಲ್ - ನಂತೂರು ಹೆದ್ದಾರಿಯನ್ನು ಪೂರ್ಣ ಪ್ರಮಾಣದಲ್ಲಿ ದುರಸ್ತಿ ಪಡಿಸಬೇಕು, ಕೂಳೂರು ಹೊಸ ಸೇತುವೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಬೇಕು, ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಬೇಕು, ಸರ್ವಿಸ್ ರಸ್ತೆಗಳನ್ನು ಹೆದ್ದಾರಿ ಉದ್ದಕ್ಕೂ ನಿರ್ಮಿಸಬೇಕು, ಬೀದಿ ದೀಪಗಳ ಅಳವಡಿಕೆ, ನಿರ್ವಹಣೆ ಸರಿಪಡಿಸಬೇಕು, ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ನಿರ್ಮಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಹೋರಾಟ ನಡೆಸಲು ತೀರ್ಮಾನಿಸಲಾಯಿತು. ಪ್ರಥಮ ಹಂತದಲ್ಲಿ ನವಂಬರ್ 26ರಂದು ಕೂಳೂರು ಸೇತುವೆ ಬಳಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ನಡೆಸಲು ನಿರ್ಧರಿಸಲಾಯಿತು.

ಸಮಾಲೋಚನಾ ಸಭೆಯ ಅಧ್ಯಕ್ಷತೆಯನ್ನು ಹಿರಿಯ ಮುಂದಾಳು ಎಂ.ಜಿ. ಹೆಗ್ಡೆ ವಹಿಸಿದ್ದರು. ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ವಿಷಯ ಮಂಡಿಸಿದರು. ಶ್ರೀನಾಥ್ ಕುಲಾಲ್ ಸ್ವಾಗತಿಸಿದರು. ಮಾಜಿ ಉಪ ಮೇಯರ್ ಗಳಾದ ಮುಹಮ್ಮದ್ ಕುಂಜತ್ತಬೈಲ್, ಪುರುಷೋತ್ತಮ ಚಿತ್ರಾಪುರ, ದಲಿತ ನಾಯಕರಾದ ಎಂ. ದೇವದಾಸ್, ಹೋರಾಟ ಸಮಿತಿ ಸಹ ಸಂಚಾಲಕ ವೈ. ರಾಘವೇಂದ್ರ ರಾವ್, ಬಿ.ಕೆ ಇಮ್ತಿಯಾಜ್, ಮೂಸಬ್ಬ ಪಕ್ಷಿಕೆರೆ, ರಮೇಶ್ ಟಿ.ಎನ್, ಸದಾಶಿವ ಶೆಟ್ಟಿ, ರಾಜೇಶ್ ಕುಳಾಯಿ, ಸುಧಾಕರ ಪಡುಬಿದ್ರೆ, ರಘು ಎಕ್ಕಾರು, ಕೃಷ್ಣ ತಣ್ಣೀರುಬಾವಿ, ಮುಸ್ಲಿಂ ಐಕ್ಯತಾ ವೇದಿಕೆಯ ಆಶ್ರಫ್ ಬದ್ರಿಯ, ಅದ್ದು ಕೃಷ್ಣಾಪುರ, ಮಾಜಿ ಕಾರ್ಪೊರೇಟರ್ ಅಯಾಝ್ ಕೃಷ್ಣಾಪುರ, ಡಿವೈಎಫ್ಐ ನ ಮಕ್ಸೂದ್ ಬಿ ಕೆ, ಪ್ರಮೀಳಾ ಕೆ, ಮಹಿಳಾ ಕಾಂಗ್ರೆಸ್ ನ ಶಶಿಕಲಾ, ಹೋರಾಟ ಸಮಿತಿಯ ಪ್ರಮುಖರಾದ ಆನಂದ ಅಮೀನ್, ಹರೀಶ್ ಪೇಜಾವರ, ಅಬೂಬಕ್ಕರ್ ಬಾವ, ಆಶಾ ಬೋಳೂರು, ಗಂಗಾಧರ ಬಂಜನ್, ಶಮೀರ್ ಕಾಟಿಪಳ್ಳ, ಸಲೀಂ ಶ್ಯಾಡೋ ಸೇರಿದಂತೆ ಹಲವು ಸಂಘಟನೆಗಳ ಪ್ರಮುಖರು ಹಾಜರಿದ್ದರು.
Mass Protest Planned on November 26th Against Poor Road Conditions on Mangalore Nanthoor Surathkal Highway
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm