ಬ್ರೇಕಿಂಗ್ ನ್ಯೂಸ್
07-11-24 10:30 pm Mangalore Correspondent ಕರಾವಳಿ
ಮಂಗಳೂರು, ನ.7: ಅಡ್ಯಾರ್- ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಗುಂಡಿ ಬಿದ್ದು ಸಂಚಾರಕ್ಕೆ ತೀವ್ರ ತೊಡಕಾಗಿತ್ತು. ಪಡೀಲಿನಲ್ಲಿ ರಸ್ತೆ ಹೊಂಡ ಬಿದ್ದಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಸುದ್ದಿ ಬಿತ್ತರಿಸಿತ್ತು. ಅದರ ಬೆನ್ನಲ್ಲೇ ಹೊಂಡ ಮುಚ್ಚುವ ಕಾಮಗಾರಿ ನಡೆದಿತ್ತು. ವಾಹನ ಸವಾರರು ಹೆದ್ದಾರಿಗೊಂದು ಒಳ್ಳೆಯ ಟಾರು ಹಾಕಲಿ, ಇಲ್ಲಿ ಟಾರು ಕಾಣದೆ ಎಷ್ಟೋ ವರ್ಷ ಆಯ್ತು ಎಂದು ನಿರೀಕ್ಷೆ ಮಾಡಿದ್ದರು. ಇದೀಗ ಅಡ್ಯಾರು- ಪಡೀಲ್ ಹೆದ್ದಾರಿಯಲ್ಲಿ ಕಡೆಗೂ ಟಾರು ಹಾಕಿದ್ದು, ಫಳಫಳನೆ ಹೊಳೆಯುವ ಹೊಸ ರಸ್ತೆ ಸಂಚಾರಕ್ಕೆ ತೆರೆದುಕೊಂಡಿದೆ.




ಸುರತ್ಕಲ್ - ಬಿಸಿ ರೋಡ್ ಮಧ್ಯೆ 15 ವರ್ಷಗಳ ಹಿಂದೆ ಹೆದ್ದಾರಿ ನಿರ್ಮಾಣವಾಗಿತ್ತು. ಇರ್ಕಾನ್ ಸಂಸ್ಥೆಯವರು ಈ ರಸ್ತೆಯನ್ನು ನಿರ್ಮಿಸಿ ನಿರ್ವಹಣೆಗೆ ಎನ್ಎಂಪಿಟಿ ಬಂದರಿಗೆ ನೀಡಿದ್ದರು. ಕರಾವಳಿಯಲ್ಲಿ ಮೊದಲ ಬಾರಿಗೆ ಈ ರಸ್ತೆ ಚತುಷ್ಪಥಕ್ಕೆ ತೆರೆದುಕೊಂಡಿದ್ದರೂ, ಕಾಮಗಾರಿ ಸಮರ್ಪಕವಾಗದೆ ಹೆದ್ದಾರಿಯಲ್ಲಿ ಅಪಘಾತಗಳೇ ಹೆಚ್ಚಿದ್ದವು. ಮಂಗಳೂರು- ಬಿಸಿ ರೋಡ್ ಮಧ್ಯೆ ತಿರುವಿನ ರಸ್ತೆಗಳನ್ನು ನೇರವಾಗಿಸದೆ ಇದ್ದಂತೆಯೇ ತಿರುವು ಮುರುವು ರಸ್ತೆಗಳನ್ನು ನಿರ್ಮಿಸಲಾಗಿತ್ತು.





15 ವರ್ಷಗಳಲ್ಲಿ ಕೆಲವು ಬಾರಿ ಗುಂಡಿ ಬಿದ್ದ ಜಾಗಕ್ಕೆ ತೇಪೆ ಹಚ್ಚಿದ್ದು ಬಿಟ್ಟರೆ ಪೂರ್ತಿಯಾಗಿ ಡಾಮರು ಹಾಕಿದ್ದು ಇಲ್ಲ. ಈಗ ಪಡೀಲಿನಲ್ಲಿ ರಸ್ತೆಗೆ ಪೂರ್ತಿಯಾಗಿ ಡಾಮರು ಹಾಕಲಾಗುತ್ತಿದ್ದು ಕಪ್ಪಗಿನ ರಸ್ತೆ ಹೊಳೆಯುತ್ತಿದೆ. ಆದರೆ, ಆಧುನಿಕ ಮಾದರಿಯ ರಬ್ಬರ್ ಡಾಮರು ಹಾಕಿದರಷ್ಟೇ ಈಗ ಬಾಳಿಕೆ. ಅದಿಲ್ಲದಿದ್ದರೆ, ಮುಂದಿನ ವರ್ಷದ ಮಳೆಗಾಲಕ್ಕೆ ಡಾಮರು ಎದ್ದು ಹೋಗುತ್ತದೆ. ಕೇರಳದಲ್ಲಿ ಹೊಸತಾಗಿ ರಬ್ಬರ್ ಡಾಮರ್ ಹಾಕಿದರೂ, 5 ವರ್ಷ ಕಾಲ ಗ್ಯಾರಂಟಿ ಕೊಡಬೇಕು. ಅದರಲ್ಲಿ ಸಮಸ್ಯೆಯಾದರೆ, ಡಾಮರು ಹಾಕಿದವರೇ ಹೊಣೆ ಹೊರಬೇಕು. ಇಂಥ ಕಾನೂನು ಎಲ್ಲ ಕಡೆ ಇದ್ದರೂ ಅದನ್ನು ಮಂಗಳೂರಿನಲ್ಲಿ ಲಾಗಾಯ್ತಿ ಮಾಡ್ತಾ ಇಲ್ಲ. ಇದರಿಂದಾಗಿ ಹೆದ್ದಾರಿ ಅಧಿಕಾರಿಗಳು ತಮ್ಮ ಮನಸ್ಸಿಗೆ ಬಂದಂತೆ ರಸ್ತೆ ಮಾಡೋದು, ತಿರುವು ಮುರುವಿನಲ್ಲಿ ಅಪಘಾತ ಆದರೂ ನಿರ್ಲಕ್ಷ್ಯ ಮಾಡೋದು, ಉತ್ತಮ ಗುಣಮಟ್ಟದ ಡಾಮರು ಹಾಕದಿರುವುದನ್ನು ಮಾಡುತ್ತ ಇದ್ದಾರೆ.
Mangalore Padil road filled with huge pot holes finally gets new tar after report by headline karnataka. Report was made expressing the pain of two wheelers who had to cross padil road.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm