ಬ್ರೇಕಿಂಗ್ ನ್ಯೂಸ್
11-11-24 05:36 pm Mangalore Correspondent ಕರಾವಳಿ
ಮಂಗಳೂರು, ನ.11: ನಗರದ ಲೇಡಿಗೋಶನ್ ಹೆರಿಗೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿ ಬಾಣಂತಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಮುನಿಯಾಲು ನಿವಾಸಿ ರಂಜಿತಾ (28) ಮೃತ ಮಹಿಳೆ.
ಒಂದು ವರ್ಷದ ಹಿಂದೆ ಮುನಿಯಾಲಿನ ಪ್ರಕಾಶ್ ಆಚಾರ್ಯ ಮತ್ತು ರಂಜಿತಾ ಮದುವೆಯಾಗಿತ್ತು. ಆರು ತಿಂಗಳ ಗರ್ಭಿಣಿಯಾಗಿದ್ದ ರಂಜಿತಾಗೆ ಅತಿ ರಕ್ತದೊತ್ತಡ ಇದ್ದುದರಿಂದ ಅ.24ರಂದು ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಮಹಿಳೆಯ ಆರೋಗ್ಯಕ್ಕೆ ತೊಂದರೆ ಎದುರಾಗಿದ್ದರಿಂದ ಅ.29ರಂದು ಮಗುವನ್ನು ಸಿಸೇರಿಯನ್ ಮೂಲಕ ತೆಗೆಸಲಾಗಿತ್ತು. ನಾಲ್ಕು ದಿನಗಳ ಕಾಲ ಎನ್ಐಸಿಯುನಲ್ಲಿದ್ದ ಮಗು ಬಳಿಕ ಮೃತಪಟ್ಟಿತ್ತು.
ಕೆಲವು ಮಹಿಳೆಯರಿಗೆ ಬಾಣಂತಿ ಸಂದರ್ಭದಲ್ಲಿ ಮಾನಸಿಕ ಖಿನ್ನತೆ ಆವರಿಸುತ್ತದೆ. ಅದೇ ರೀತಿಯ ಖಿನ್ನತೆ ರಂಜಿತಾಗೂ ಇತ್ತು ಎನ್ನಲಾಗುತ್ತಿದೆ. ಮಗು ಮೃತಪಟ್ಟ ವಿಷಯ ತಿಳಿದೋ ಏನೋ ಮಾನಸಿಕವಾಗಿ ಕುಗ್ಗಿದ ರೀತಿ ಇದ್ದರು. ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಕ್ಕೆ ಪ್ರಕ್ರಿಯೆ ನಡೆದಿತ್ತು. ಪತಿ ಪ್ರಕಾಶ್ ಆಚಾರ್ಯ ಕಾರು ತೆಗೆದುಕೊಂಡು ಆಸ್ಪತ್ರೆ ಕಡೆಗೆ ಬರುತ್ತಿದ್ದರೆ, ಮಹಿಳೆಯ ತಮ್ಮ ಮತ್ತು ತಾಯಿ ಆಸ್ಪತ್ರೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಮಹಿಳೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿದ್ದು ದುರಂತ ಸಾವು ತಂದುಕೊಂಡಿದ್ದಾರೆ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman who recently gave birth and lost her newborn to illness ended her life by jumping from the fourth floor of Lady Goschen Hospital on Monday, November 11. The deceased has been identified as Ranjita (28), a resident of Karkala.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm