ಬ್ರೇಕಿಂಗ್ ನ್ಯೂಸ್
11-11-24 05:36 pm Mangalore Correspondent ಕರಾವಳಿ
ಮಂಗಳೂರು, ನ.11: ನಗರದ ಲೇಡಿಗೋಶನ್ ಹೆರಿಗೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿ ಬಾಣಂತಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಮುನಿಯಾಲು ನಿವಾಸಿ ರಂಜಿತಾ (28) ಮೃತ ಮಹಿಳೆ.
ಒಂದು ವರ್ಷದ ಹಿಂದೆ ಮುನಿಯಾಲಿನ ಪ್ರಕಾಶ್ ಆಚಾರ್ಯ ಮತ್ತು ರಂಜಿತಾ ಮದುವೆಯಾಗಿತ್ತು. ಆರು ತಿಂಗಳ ಗರ್ಭಿಣಿಯಾಗಿದ್ದ ರಂಜಿತಾಗೆ ಅತಿ ರಕ್ತದೊತ್ತಡ ಇದ್ದುದರಿಂದ ಅ.24ರಂದು ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಮಹಿಳೆಯ ಆರೋಗ್ಯಕ್ಕೆ ತೊಂದರೆ ಎದುರಾಗಿದ್ದರಿಂದ ಅ.29ರಂದು ಮಗುವನ್ನು ಸಿಸೇರಿಯನ್ ಮೂಲಕ ತೆಗೆಸಲಾಗಿತ್ತು. ನಾಲ್ಕು ದಿನಗಳ ಕಾಲ ಎನ್ಐಸಿಯುನಲ್ಲಿದ್ದ ಮಗು ಬಳಿಕ ಮೃತಪಟ್ಟಿತ್ತು.
ಕೆಲವು ಮಹಿಳೆಯರಿಗೆ ಬಾಣಂತಿ ಸಂದರ್ಭದಲ್ಲಿ ಮಾನಸಿಕ ಖಿನ್ನತೆ ಆವರಿಸುತ್ತದೆ. ಅದೇ ರೀತಿಯ ಖಿನ್ನತೆ ರಂಜಿತಾಗೂ ಇತ್ತು ಎನ್ನಲಾಗುತ್ತಿದೆ. ಮಗು ಮೃತಪಟ್ಟ ವಿಷಯ ತಿಳಿದೋ ಏನೋ ಮಾನಸಿಕವಾಗಿ ಕುಗ್ಗಿದ ರೀತಿ ಇದ್ದರು. ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಕ್ಕೆ ಪ್ರಕ್ರಿಯೆ ನಡೆದಿತ್ತು. ಪತಿ ಪ್ರಕಾಶ್ ಆಚಾರ್ಯ ಕಾರು ತೆಗೆದುಕೊಂಡು ಆಸ್ಪತ್ರೆ ಕಡೆಗೆ ಬರುತ್ತಿದ್ದರೆ, ಮಹಿಳೆಯ ತಮ್ಮ ಮತ್ತು ತಾಯಿ ಆಸ್ಪತ್ರೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಮಹಿಳೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿದ್ದು ದುರಂತ ಸಾವು ತಂದುಕೊಂಡಿದ್ದಾರೆ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman who recently gave birth and lost her newborn to illness ended her life by jumping from the fourth floor of Lady Goschen Hospital on Monday, November 11. The deceased has been identified as Ranjita (28), a resident of Karkala.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm