ಬ್ರೇಕಿಂಗ್ ನ್ಯೂಸ್
11-11-24 05:36 pm Mangalore Correspondent ಕರಾವಳಿ
ಮಂಗಳೂರು, ನ.11: ನಗರದ ಲೇಡಿಗೋಶನ್ ಹೆರಿಗೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿ ಬಾಣಂತಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಮುನಿಯಾಲು ನಿವಾಸಿ ರಂಜಿತಾ (28) ಮೃತ ಮಹಿಳೆ.
ಒಂದು ವರ್ಷದ ಹಿಂದೆ ಮುನಿಯಾಲಿನ ಪ್ರಕಾಶ್ ಆಚಾರ್ಯ ಮತ್ತು ರಂಜಿತಾ ಮದುವೆಯಾಗಿತ್ತು. ಆರು ತಿಂಗಳ ಗರ್ಭಿಣಿಯಾಗಿದ್ದ ರಂಜಿತಾಗೆ ಅತಿ ರಕ್ತದೊತ್ತಡ ಇದ್ದುದರಿಂದ ಅ.24ರಂದು ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಮಹಿಳೆಯ ಆರೋಗ್ಯಕ್ಕೆ ತೊಂದರೆ ಎದುರಾಗಿದ್ದರಿಂದ ಅ.29ರಂದು ಮಗುವನ್ನು ಸಿಸೇರಿಯನ್ ಮೂಲಕ ತೆಗೆಸಲಾಗಿತ್ತು. ನಾಲ್ಕು ದಿನಗಳ ಕಾಲ ಎನ್ಐಸಿಯುನಲ್ಲಿದ್ದ ಮಗು ಬಳಿಕ ಮೃತಪಟ್ಟಿತ್ತು.
ಕೆಲವು ಮಹಿಳೆಯರಿಗೆ ಬಾಣಂತಿ ಸಂದರ್ಭದಲ್ಲಿ ಮಾನಸಿಕ ಖಿನ್ನತೆ ಆವರಿಸುತ್ತದೆ. ಅದೇ ರೀತಿಯ ಖಿನ್ನತೆ ರಂಜಿತಾಗೂ ಇತ್ತು ಎನ್ನಲಾಗುತ್ತಿದೆ. ಮಗು ಮೃತಪಟ್ಟ ವಿಷಯ ತಿಳಿದೋ ಏನೋ ಮಾನಸಿಕವಾಗಿ ಕುಗ್ಗಿದ ರೀತಿ ಇದ್ದರು. ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಕ್ಕೆ ಪ್ರಕ್ರಿಯೆ ನಡೆದಿತ್ತು. ಪತಿ ಪ್ರಕಾಶ್ ಆಚಾರ್ಯ ಕಾರು ತೆಗೆದುಕೊಂಡು ಆಸ್ಪತ್ರೆ ಕಡೆಗೆ ಬರುತ್ತಿದ್ದರೆ, ಮಹಿಳೆಯ ತಮ್ಮ ಮತ್ತು ತಾಯಿ ಆಸ್ಪತ್ರೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಮಹಿಳೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿದ್ದು ದುರಂತ ಸಾವು ತಂದುಕೊಂಡಿದ್ದಾರೆ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman who recently gave birth and lost her newborn to illness ended her life by jumping from the fourth floor of Lady Goschen Hospital on Monday, November 11. The deceased has been identified as Ranjita (28), a resident of Karkala.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm