ಬ್ರೇಕಿಂಗ್ ನ್ಯೂಸ್
11-11-24 10:23 pm Mangalore Correspondent ಕರಾವಳಿ
ಮಂಗಳೂರು, ನ.11: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಮುಲ್ಕಿ ಠಾಣೆಯಲ್ಲಿ ಮೃತ ಕಾರ್ತಿಕ್ ಭಟ್ ತಾಯಿ ಮತ್ತು ಅಕ್ಕನ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಾಗಿದ್ದು ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್ ಅವರ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಬಂಧಿತರು.
ಕಾರ್ತಿಕ್ ಆತ್ಮಹತ್ಯೆಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಆಧರಿಸಿ ತಾಯಿ ಮತ್ತು ಅಕ್ಕನ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿದ್ದು ಇದೀಗ ಇಬ್ಬರನ್ನೂ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಡೆತ್ ನೋಟ್ ನಲ್ಲಿ ತಂದೆ, ತಾಯಿ, ಸಹೋದರಿ ವಿರುದ್ದ ಆರೋಪ ಮಾಡಿದ್ದರು. ನಮ್ಮ ಸಂಸಾರ ಹಾಳು ಮಾಡಿದ್ದೆ ಈ ಮೂವರು ಎಂದಿದ್ದರು. ಅಲ್ಲದೆ, ಇಂತಹ ಅಪ್ಪ ಅಮ್ಮ ಯಾರಿಗೂ ಸಿಗಬಾರದೆಂದು ಬರೆದುಕೊಂಡಿದ್ದರು. ತಮ್ಮ ಶವಗಳನ್ನು ಕೂಡ ತಾಯಿ ಮತ್ತು ಅಕ್ಕ ಮುಟ್ಟಬಾರದು. ಅಂತ್ಯ ಸಂಸ್ಕಾರವನ್ನು ಅತ್ತೆ ಮಾವ ನಡೆಸಿಕೊಡಬೇಕೆಂದು ಬರೆದಿದ್ದರು.

ಸಾಯುವುದಕ್ಕೂ ಮುನ್ನ ನೀಡಿರುವ ಹೇಳಿಕೆ ಆಧರಿಸಿ ಸೋದರಿ ಹಾಗು ತಾಯಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು ವಿಚಾರಣೆಗೆ ಕರೆದು ಬಂಧಿಸಿದ್ದಾರೆ. ಇದಲ್ಲದೆ, ಪ್ರಿಯಾಂಕ ಪೋಷಕರು ಕೂಡ ಕಾರ್ತಿಕ್ ತಂದೆ, ತಾಯಿ ಹಾಗೂ ಸಹೋದರಿ ವಿರುದ್ಧ ದೂರು ನೀಡಿದ್ದರು. ಮೊನ್ನೆ ಅ.8ರಂದು ಮಧ್ಯಾಹ್ನ ಪಕ್ಷಿಕೆರೆಯ ಮನೆಯಲ್ಲಿ ಪತ್ನಿ ಪ್ರಿಯಾಂಕ, ನಾಲ್ಕು ವರ್ಷದ ಮಗುವನ್ನು ಕೊಂದು ಪತಿ ಕಾರ್ತಿಕ್ ಭಟ್ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದರು.
In the Mangalore Mulki murder case, the mother and sister of Karthik Bhat have been arrested by the police after their names were found in a death note linked to his suicide. The death note, written by Karthik, states that no one should have parents like his. He mentioned the names of both his mother and father, as well as his sister, in the note. Karthik, a 32-year-old man, allegedly murdered his wife and four-year-old son before taking his own life in Mangaluru.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm