ಬ್ರೇಕಿಂಗ್ ನ್ಯೂಸ್
11-11-24 11:03 pm Udupi Correspondent ಕರಾವಳಿ
ಉಡುಪಿ, ನ.11: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಪೊಲೀಸರನ್ನು ಉಡುಪಿ ಎಸ್ಪಿ ಡಾ.ಅರುಣ್ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.
ಚೇರ್ಕಾಡಿ ಗ್ರಾಮದ ಮಹಿಳೆಗೆ ಶನಿವಾರ ರಾತ್ರಿ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋಹನ್ (45) ಎಂಬಾತನನ್ನು ಸ್ಥಳೀಯರು ಹಲ್ಲೆಗೈದು ಪೊಲೀಸರ ವಶಕ್ಕೆ ಒಪ್ಪಿಸಿದ್ದರು. ಆತನನ್ನು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆತಂದು ಪ್ರಕರಣ ದಾಖಲಿಸಿದ್ದರು. ಆದರೆ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಲ್ಲ ಎನ್ನಲಾಗುತ್ತಿದೆ. ಆರೋಪಿ ಬಂಧನ ವೇಳೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪಾಲಿಸಿಲ್ಲವೆಂದು ಬ್ರಹ್ಮಾವರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿ ಹೆಡ್ ಕಾನ್ಸ್ಟೇಬಲ್ ಸುಜಾತ ಅವರನ್ನು ಅಮಾನತು ಮಾಡಲಾಗಿದೆ.
ಲಾಕಪ್ ಡೆತ್ ಪ್ರಕರಣದ ತನಿಖೆಗಾಗಿ ಬೆಂಗಳೂರಿನ ಸಿಐಡಿ ಪೊಲೀಸ್ ಅಧೀಕ್ಷಕರು ಹಾಗೂ ಅವರ ತಂಡ ಸೋಮವಾರ ಉಡುಪಿಗೆ ಆಗಮಿಸಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಅದೇ ರೀತಿ ಬ್ರಹ್ಮಾವರ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಶವಗಾರದಲ್ಲಿ ಮೃತದೇಹವನ್ನು ಪರಿಶೀಲನೆ ನಡೆಸಿ, ವೈದ್ಯಾಧಿಕಾರಿಗಳ ಜೊತೆ ಮಾತುಕತೆ ನಡೆಸಿದೆ ಎನ್ನಲಾಗಿದೆ. ಬಿಜು ಮೋಹನ್ ಲಾಕಪ್ನಲ್ಲಿ ಮೃತಪಟ್ಟಿರುವ ಮಾಹಿತಿಯನ್ನು ಪೊಲೀಸರು ನ.10ರಂದು ಬೆಳಗ್ಗೆ ಕೊಲ್ಲಂನಲ್ಲಿರುವ ಆತನ ಕುಟುಂಬಸ್ಥರಿಗೆ ನೀಡಿದ್ದರು. ಅದರಂತೆ ಅಲ್ಲಿಂದ ಹೊರಟ ಕುಟುಂಬಸ್ಥರು ಬ್ರಹ್ಮಾವರ ತಲುಪಿ ಶವಾಗಾರಕ್ಕೆ ಆಗಮಿಸಿದ ಕುಟುಂಬಸ್ಥರು ಬಿಜು ಮೋನು ಅವರ ಮೃತ ದೇಹವನ್ನು ಪರಿಶೀಲಿಸಿದ್ದರು. ಬಳಿಕ ಬ್ರಹ್ಮಾವರ ಪೊಲೀಸ್ ಠಾಣೆಗೆ ತೆರಳಿದ ಮೃತ ಬಿಜು ಮೋಹನ್ ಅವರ ಚಿಕ್ಕಪ್ಪನ ಮಗ ಅನೀಶ್ ಡೆನಿಲ್ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Madhu B E, police sub-inspector of Brahmavar police station, and Sujatha, head constable, have been suspended following the lockup death incident that occurred at Brahmavar station in the early hours of November 10.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm