ಬ್ರೇಕಿಂಗ್ ನ್ಯೂಸ್
13-11-24 08:17 pm Mangaluru corespondent ಕರಾವಳಿ
ಮಂಗಳೂರು, ನ.13: ನಗರದ ಅಲೋಶಿಯಸ್ ಪದವಿ ಕಾಲೇಜಿನಲ್ಲಿ ಯುವ ಉಪನ್ಯಾಸಕಿಯಾಗಿದ್ದ ಗ್ಲೋರಿಯಾ ಆಶಾ ರೋಡ್ರಿಗಸ್ (23) ಅವರು ಕಾಲೇಜಿನ ಮೆಟ್ಟಿಲಿನಲ್ಲಿ ಅಕಸ್ಮಾತ್ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದವರು ಮೃತಪಟ್ಟಿದ್ದಾರೆ.
ಬಜ್ಪೆ ಪಡು ಪೆರಾರ ನಿವಾಸಿ ಗ್ರೇಶನ್ ಅಲೆಕ್ಸ್ ರೋಡ್ರಿಗಸ್ ಮತ್ತು ಗ್ರೆಟ್ಟಾ ಫ್ಲೇವಿಯಾ ದಂಪತಿಯ ಪುತ್ರಿಯಾಗಿರುವ ಗ್ಲೋರಿಯಾ ಒಂದು ವರ್ಷದ ಹಿಂದಷ್ಟೇ ಅಲೋಶಿಯಸ್ ಕಾಲೇಜಿನಲ್ಲಿಯೇ ಸ್ನಾತಕೋತ್ತರ ಪದವಿ ಪೂರೈಸಿ ಕೆಲಸಕ್ಕೆ ಸೇರಿದ್ದರು. ನ.9ರಂದು ಕಾಲೇಜಿನಲ್ಲಿ ಮೆಟ್ಟಲು ಇಳಿಯುತ್ತಿದ್ದಾಗ ತಲೆಸುತ್ತು ಬಂದು ಅಕಸ್ಮಾತ್ ಬಿದ್ದು ತಲೆಗೆ ಪೆಟ್ಟು ಆಗಿತ್ತೆನ್ನಲಾಗಿದೆ. ಕೂಡಲೇ ಅವರನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಸೇರಿಸಲಾಗಿತ್ತು.
ಕೋಮಾ ಸ್ಥಿತಿಯಲ್ಲಿದ್ದ ಗ್ಲೋರಿಯಾ ಅವರು ನ.13ರ ಬುಧವಾರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಈ ನಡುವೆ, ಅ.11ರಂದು ಕಾಲೇಜು ಕ್ಯಾಂಪಸಿನ ಅಲೋಶಿಯಸ್ ಚಾಪೆಲ್ ನಲ್ಲಿ ಗ್ಲೋರಿಯಾ ಚೇತರಿಕೆ ಆಗಲೆಂದು ಹಾರೈಸಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗಿತ್ತು. ಅವರ ಅಂತ್ಯಕ್ರಿಯೆ ನ.14ರ ಮಧ್ಯಾಹ್ನ ಬಜ್ಪೆಯ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಡೆಯಲಿದೆ. ಗ್ಲೋರಿಯಾ ಅವರು ಬಿಕಾಂ ಪದವಿಗೆ ಕಾಮರ್ಸ್ ವಿಷಯದಲ್ಲಿ ಉಪನ್ಯಾಸಕಿಯಾಗಿದ್ದರು.

ಅಲರ್ಜಿ ಕಾಯಿಲೆಯಿಂದ ಸಾವು; ಐವರಿಗೆ ಅಂಗಾಂಗ ದಾನ
ಮೃತಪಟ್ಟ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗಳನ್ನು ಐವರಿಗೆ ದಾನ ಮಾಡಲಾಗಿದೆ ಎಂದು ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಗ್ಲೋರಿಯಾ ಅವರಿಗೆ anaphylactic reaction ಸಮಸ್ಯೆ ಉಂಟಾಗಿದ್ದು ಇದರ ಪರಿಣಾಮ ಮೆದುಳು ನಿಷ್ಕ್ರಿಯಗೊಂಡಿತ್ತು. ವೈದ್ಯರ ತಂಡ ಮೆದುಳು ನಿಷ್ಕ್ರಿಯವಾಗಿರುವ ಬಗ್ಗೆ ನ.11ರಂದು ಸಂಜೆ ನಾಲ್ಕು ಗಂಟೆಗೆ ಘೋಷಣೆ ಮಾಡಿತ್ತು. ಆನಂತರ ಆಕೆಯ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದರು. ಅದರಂತೆ, ಎಜೆ ಆಸ್ಪತ್ರೆಗೆ ಲಿವರ್, ಬೆಂಗಳೂರು ಬಿಜಿಎಸ್ ಆಸ್ಪತ್ರೆಗೆ ಶ್ವಾಸಕೋಶ, ನಾರಾಯಣ ಹೃದಯಾಲಯಕ್ಕೆ ಹಾರ್ಟ್, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕಿಡ್ನಿ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚರ್ಮ ಮತ್ತು ಕಣ್ಣಿನ ಕಾರ್ನಿಯಾವನ್ನು ಉಳಿಸಿಕೊಳ್ಳಲಾಗಿದೆ.
anaphylactic reaction ಎನ್ನುವುದು ಮಾರಣಾಂತಿಕ ಅಲರ್ಜಿ ಕಾಯಿಲೆಯಾಗಿದ್ದು ಇದರಿಂದ ಬಹು ಅಂಗಾಂಗ ವೈಫಲ್ಯ ಉಂಟಾಗುತ್ತದೆ. ಗ್ಲೋರಿಯಾ ಅವರಿಗೆ ಯಾವುದೋ ಆಹಾರ ಸೇವನೆ ಬಳಿಕ ಈ ರೀತಿಯ ಅಲರ್ಜಿ ಉಂಟಾಗಿತ್ತು ಎಂದು ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯರ ಪ್ರಕಟಣೆ ತಿಳಿಸಿದೆ.
23-year-old Aloysius College assistant professor Gloria Rodrigues has died following a head injury sustained from a fall down the staircase. She had been receiving treatment at Fr. Muller's Hospital but breathed her last on November 13, 2024.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm