ಬ್ರೇಕಿಂಗ್ ನ್ಯೂಸ್
14-11-24 02:48 pm Udupi Correspondent ಕರಾವಳಿ
ಉಡುಪಿ, ನ.14: ಸಕಲೇಶಪುರ ಸುಬ್ರಹ್ಮಣ್ಯ ಘಾಟಿ ಭಾಗದಲ್ಲಿ ರೈಲಿನ ವೇಗ ಹೆಚ್ಚಿಸುವುದು, ಕ್ರಾಸಿಂಗ್ ನಿಲ್ದಾಣವಾಗಿ ಅರೆಬೆಟ್ಟದಲ್ಲಿ ಅಭಿವೃದ್ಧಿ ಪಡಿಸುವುದು ಸೇರಿದಂತೆ ಹಲವು ಸುಧಾರಣೆ ವಿಷಯದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೇ ಸಚಿವರ ಜತೆ ಮಾತುಕತೆ ನಡೆಸಿದ್ದು ಮುಂದಿನ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಸುದೀರ್ಘ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕರಾವಳಿಯ ರೈಲು ಸೇವೆಗಳು ಮತ್ತು ಹೆದ್ದಾರಿ ಸುಧಾರಣೆಗಳ ಕುರಿತು ಕುಂದಾಪುರ ರೈಲು ಸಮಿತಿ ಸಂಸದರಿಗೆ ಮನವಿ ಕೊಟ್ಟು ಚರ್ಚೆ ಮಾಡಿದೆ. ರೈಲು ಮತ್ತು ಹೆದ್ದಾರಿ ಸುಧಾರಣೆ ಕುರಿತು ಹಲವು ಮಾರ್ಗೋಪಾಯಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ. ಈ ಸಂದರ್ಭ ಸಂಸದರು ಸಮಿತಿಯ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದರು.
ಪಂಚಗಂಗಾ ರೈಲು ಸೇರಿದಂತೆ ಹಲವು ವಿಶೇಷ ರೈಲು ಸೇವೆಗಳು ಪಶ್ಚಿಮ ಘಟ್ಟದ ಘಾಟಿ ಭಾಗದಲ್ಲಿ ನಿಧಾನಗತಿಯ ಕಾರಣದಿಂದ ಬೆಂಗಳೂರು ತಲುಪುವಾಗ ವಿಳಂಬವಾಗುವುದು, ಸರಿಯಾದ ಸಮಯಪಟ್ಟಿ ಸಿಗದೆ ಇರುವುದು, ಹೀಗೆ ಹಲವು ಸಮಸ್ಯೆಗಳಿಗೆ ಸಿಲುಕಿವೆ. ಅದರಲ್ಲೂ ಪಂಚಗಂಗಾ ರೈಲು ಕರಾವಳಿಯ ಜೀವನಾಡಿಯಾಗಿದ್ದು, ಈ ರೈಲು ಇನ್ನೂ ಬೇಗನೆ ಬೆಂಗಳೂರು ತಲುಪಿಸಲು ಬೇಡಿಕೆ ಇದೆ. ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಸಚಿವರ ಜತೆ ಚರ್ಚಿಸಲಾಗಿದೆ ಎಂದು ಸಂಸದರು ತಿಳಿಸಿದರು.
ಬ್ರಹ್ಮಾವರ, ಕುಂದಾಪುರ ಸೇರಿದಂತೆ ಹಲವೆಡೆ ಅಪಘಾತ ವಲಯಗಳು ತುಂಬಿರುವ ರಾಷ್ಟ್ರೀಯ ಹೆದ್ದಾರಿಯ ಸಮಗ್ರ ಸುಧಾರಣೆಗೆ ತಂತ್ರಜ್ಞರ ತಂಡವನ್ನು ಕುಂದಾಪುರ, ಬ್ರಹ್ಮಾವರ, ಉಡುಪಿ ಮಧ್ಯೆ ನೇರ ವೀಕ್ಷಣೆ ಮತ್ತು ಪರಿಹಾರೋಪಾಯಗಳ ಕುರಿತು ಪ್ರಸ್ತಾವ ರಚಿಸುವ ಕುರಿತು ನಿರ್ಧರಿಸಲಾಗಿದ್ದು, ಈ ಬಗ್ಗೆ ಕೆಲವೇ ದಿನಗಳಲ್ಲಿ ದಿಲ್ಲಿಗೆ ತೆರಳಲಿರುವುದಾಗಿ ಸಂಸದರು ತಿಳಿಸಿದ್ದಾರೆ.
Railway issue at Sakaleshpur ghat, Railway committee appeals to kota srinivas poojary in Udupi. discussion with the Minister of Railways regarding many improvements including increasing the speed of the train in the Sakaleshpura Subrahmanya Ghati section, developing Arebetta as a crossing station and said that they will hold a long discussion in the next winter session of Parliament.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am