ಬ್ರೇಕಿಂಗ್ ನ್ಯೂಸ್
14-11-24 02:48 pm Udupi Correspondent ಕರಾವಳಿ
ಉಡುಪಿ, ನ.14: ಸಕಲೇಶಪುರ ಸುಬ್ರಹ್ಮಣ್ಯ ಘಾಟಿ ಭಾಗದಲ್ಲಿ ರೈಲಿನ ವೇಗ ಹೆಚ್ಚಿಸುವುದು, ಕ್ರಾಸಿಂಗ್ ನಿಲ್ದಾಣವಾಗಿ ಅರೆಬೆಟ್ಟದಲ್ಲಿ ಅಭಿವೃದ್ಧಿ ಪಡಿಸುವುದು ಸೇರಿದಂತೆ ಹಲವು ಸುಧಾರಣೆ ವಿಷಯದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ರೈಲ್ವೇ ಸಚಿವರ ಜತೆ ಮಾತುಕತೆ ನಡೆಸಿದ್ದು ಮುಂದಿನ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಸುದೀರ್ಘ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕರಾವಳಿಯ ರೈಲು ಸೇವೆಗಳು ಮತ್ತು ಹೆದ್ದಾರಿ ಸುಧಾರಣೆಗಳ ಕುರಿತು ಕುಂದಾಪುರ ರೈಲು ಸಮಿತಿ ಸಂಸದರಿಗೆ ಮನವಿ ಕೊಟ್ಟು ಚರ್ಚೆ ಮಾಡಿದೆ. ರೈಲು ಮತ್ತು ಹೆದ್ದಾರಿ ಸುಧಾರಣೆ ಕುರಿತು ಹಲವು ಮಾರ್ಗೋಪಾಯಗಳ ಕುರಿತು ವಿಸ್ತೃತ ಚರ್ಚೆ ನಡೆಸಲಾಗಿದೆ. ಈ ಸಂದರ್ಭ ಸಂಸದರು ಸಮಿತಿಯ ಬೇಡಿಕೆಗೆ ಪೂರಕವಾಗಿ ಸ್ಪಂದಿಸಿದರು.
ಪಂಚಗಂಗಾ ರೈಲು ಸೇರಿದಂತೆ ಹಲವು ವಿಶೇಷ ರೈಲು ಸೇವೆಗಳು ಪಶ್ಚಿಮ ಘಟ್ಟದ ಘಾಟಿ ಭಾಗದಲ್ಲಿ ನಿಧಾನಗತಿಯ ಕಾರಣದಿಂದ ಬೆಂಗಳೂರು ತಲುಪುವಾಗ ವಿಳಂಬವಾಗುವುದು, ಸರಿಯಾದ ಸಮಯಪಟ್ಟಿ ಸಿಗದೆ ಇರುವುದು, ಹೀಗೆ ಹಲವು ಸಮಸ್ಯೆಗಳಿಗೆ ಸಿಲುಕಿವೆ. ಅದರಲ್ಲೂ ಪಂಚಗಂಗಾ ರೈಲು ಕರಾವಳಿಯ ಜೀವನಾಡಿಯಾಗಿದ್ದು, ಈ ರೈಲು ಇನ್ನೂ ಬೇಗನೆ ಬೆಂಗಳೂರು ತಲುಪಿಸಲು ಬೇಡಿಕೆ ಇದೆ. ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಸಚಿವರ ಜತೆ ಚರ್ಚಿಸಲಾಗಿದೆ ಎಂದು ಸಂಸದರು ತಿಳಿಸಿದರು.
ಬ್ರಹ್ಮಾವರ, ಕುಂದಾಪುರ ಸೇರಿದಂತೆ ಹಲವೆಡೆ ಅಪಘಾತ ವಲಯಗಳು ತುಂಬಿರುವ ರಾಷ್ಟ್ರೀಯ ಹೆದ್ದಾರಿಯ ಸಮಗ್ರ ಸುಧಾರಣೆಗೆ ತಂತ್ರಜ್ಞರ ತಂಡವನ್ನು ಕುಂದಾಪುರ, ಬ್ರಹ್ಮಾವರ, ಉಡುಪಿ ಮಧ್ಯೆ ನೇರ ವೀಕ್ಷಣೆ ಮತ್ತು ಪರಿಹಾರೋಪಾಯಗಳ ಕುರಿತು ಪ್ರಸ್ತಾವ ರಚಿಸುವ ಕುರಿತು ನಿರ್ಧರಿಸಲಾಗಿದ್ದು, ಈ ಬಗ್ಗೆ ಕೆಲವೇ ದಿನಗಳಲ್ಲಿ ದಿಲ್ಲಿಗೆ ತೆರಳಲಿರುವುದಾಗಿ ಸಂಸದರು ತಿಳಿಸಿದ್ದಾರೆ.
Railway issue at Sakaleshpur ghat, Railway committee appeals to kota srinivas poojary in Udupi. discussion with the Minister of Railways regarding many improvements including increasing the speed of the train in the Sakaleshpura Subrahmanya Ghati section, developing Arebetta as a crossing station and said that they will hold a long discussion in the next winter session of Parliament.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 09:16 pm
Mangalore Correspondent
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm