ಬ್ರೇಕಿಂಗ್ ನ್ಯೂಸ್
18-11-24 09:51 pm Mangalore Correspondent ಕರಾವಳಿ
ಉಳ್ಳಾಲ, ನ.18: ದೇವರು ನಮ್ಮ ಕಣ್ಣಿಗೆ ನೇರವಾಗಿ ಕಾಣಲ್ಲ. ಆದರೆ ನಮ್ಮ ಸಂಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುವವರೇ ನಮಗೆ ದೇವರ ಸ್ವರೂಪಿಗಳಾಗುತ್ತಾರೆ ಎಂದು ಮುಳುಗು ತಜ್ಞ, ಜೀವರಕ್ಷಕ ಈಶ್ವರ್ ಮಲ್ಪೆ ಅಭಿಪ್ರಾಯಪಟ್ಟರು.
ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ವತಿಯಿಂದ ಭಾನುವಾರ ತೊಕ್ಕೊಟ್ಟು, ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ನಡೆದ 200 ಅರ್ಹ ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತಾಯಂದಿರು ತಮ್ಮ ಮಕ್ಕಳಿಗೆ ಸಣ್ಣ ಪ್ರಾಯದಲ್ಲಿ ಮೊಬೈಲ್ ಕೊಡಬೇಡಿ. ಮಕ್ಕಳು ಮೊಬೈಲ್ ಗೀಳಿಗೆ ದಾಸರಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಪೋಷಕರು ತಮ್ಮ ಮಕ್ಕಳಲ್ಲಿ ಹೊಸತನ ಬೆಳೆಸಲು ಈಜು ಕಲಿಸಿ. ಈಜು ಆತ್ಮ ರಕ್ಷಣೆಗೂ ಸಹಕಾರಿಯಾಗುವುದಲ್ಲದೆ ಮಕ್ಕಳ ದೈಹಿಕ, ಮಾನಸಿಕ ಕ್ಷಮತೆಗೆ ಅತ್ಯುತ್ತಮವಾದ ವ್ಯಾಯಾಮವಾಗಿದೆ ಎಂದರು.
ಸಮಾಜಕ್ಕೆ ನಾನು ಮಾಡಿದ ಸಣ್ಣ ಸೇವೆಯ ಪುಣ್ಯದ ಫಲವಾಗಿ ನನ್ನ ಮೂರು ವಿಶೇಷ ಚೇತನ ಮಕ್ಕಳಲ್ಲಿ ಇಬ್ಬರು ಗುಣಮುಖರಾಗಿದ್ದಾರೆ. ಕೇರಳದ ದಾನಿಗಳ ಸಹಕಾರದಿಂದ ಇಪ್ಪತ್ತಮೂರು ವರುಷದಿಂದ ಮಲಗಿದ್ದಲ್ಲೇ ಇದ್ದ ಮಗು ವೀಲ್ ಚೆಯರಲ್ಲಿ ಹೋಗುವಂತಾಗಿದೆ. ಏಳು ವರುಷಗಳಿಂದ ನಡೆದಾಡದ ಮತ್ತೊಬ್ಬಳು ಈಗ ನಡೆದಾಡುತ್ತಿದ್ದಾಳೆ ಎಂದು ಈಶ್ವರ್ ಮಲ್ಪೆ ಹೇಳಿದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಳ್ಳಾಲ ಮಾರುತಿ ಯುವಕ ಮಂಡಲದ ಗೌರವಾಧ್ಯಕ್ಷ ವರದರಾಜ್ ಬಂಗೇರ ಮಾತನಾಡಿ, ಸಾಯಿ ಪರಿವಾರ್ ಟ್ರಸ್ಟ್ ಅತ್ಯಂತ ಕಡಿಮೆ ಅವಧಿಯಲ್ಲಿ ದೊಡ್ಡ ಸಾಧನೆ ಮಾಡಿದ ಸಂಸ್ಥೆಯಾಗಿದೆ. ಸಂಸ್ಥೆಗೆ ಆದಷ್ಟು ಶೀಘ್ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯೂ ಲಭಿಸಲಿ ಎಂದು ಹಾರೈಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿದ್ದರು. ಬರ್ಕೆ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ಯಜ್ಞೇಶ್ವರ್ ಶೆಟ್ಟಿ ಬರ್ಕೆ, ಅಸ್ತೃ ಗ್ರೂಪ್ ಸಿಇಒ ಲಾಂಚುಲಾಲ್ ಕೆ.ಎಸ್ ಮೂಕಾಂಬಿಕ ಕನ್ಸ್ಟ್ರಕ್ಷನ್ಸ್ ಮಾಲಕರಾದ ಚಂದ್ರಹಾಸ್ ಪಂಡಿತ್ ಹೌಸ್, ರಂಗಭೂಮಿ ಮತ್ತು ಚಲನಚಿತ್ರ ನಟ ಸ್ವರಾಜ್ ಶೆಟ್ಟಿ, ಅನ್ವಿತ್ ಇಲೆಕ್ಟ್ರಾನಿಕ್ಸ್ ಮಾಲಕರಾದ ಪ್ರಕಾಶ್, ಕದ್ರಿ ಈವೆಂಟ್ಸ್ ಜಗದೀಶ್ ಕದ್ರಿ ವಿಶೇಷ ಅತಿಥಿಗಳಾಗಿದ್ದರು.
Mangalore Eshwar maple encourages parents to send their children to swimming class after Drowning incident at resort.
24-07-25 10:52 pm
HK News Desk
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
Lokayukta Raid, IAS Vasanthi: ಐಎಎಸ್ ಅಧಿಕಾರಿ ಮ...
24-07-25 07:29 pm
ಜಿಎಸ್ಟಿ ಬಾಕಿ ಪಾವತಿ ನೋಟಿಸ್ ವಾಪಸ್ ; ಆತಂಕಗೊಂಡಿದ...
24-07-25 05:01 pm
ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು...
23-07-25 08:03 pm
24-07-25 09:06 pm
HK News Desk
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
24-07-25 10:26 pm
Mangalore Correspondent
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
ಕರಾವಳಿ ಜಿಲ್ಲೆಗಳಿಗೆ ಜುಲೈ 26ರ ವರೆಗೆ ಭಾರೀ ಮಳೆಯ ರ...
23-07-25 10:49 pm
Mangalore Extortion Jail, Sudheer Kumar Reddy...
23-07-25 10:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am