ಬ್ರೇಕಿಂಗ್ ನ್ಯೂಸ್
13-12-20 02:35 pm Mangaluru Correspondent ಕರಾವಳಿ
ಉಳ್ಳಾಲ, ಡಿ.13: ಕುಂಪಲದಲ್ಲಿ ನಡೆಯುತ್ತಿರುವ ತಂಬೂರಿ ತುಳು ಭಜನಾ ಸ್ಪರ್ಧೆಯ ಎರಡನೇ ಸುತ್ತಿನ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸಿದ್ದಾರೆ. ಭಜನಾ ಸ್ಪರ್ಧೆಯಲ್ಲಿ ಭಜಕರೊಂದಿಗೆ ಕುಳಿತ ನಳಿನ್ ಕುಮಾರ್, ಭಜನೆಗೆ ತಾಳ ಹಾಕಿ ಗಮನಸೆಳೆದರು.
ಕುಂಪಲ ಬಾಲಕೃಷ್ಣ ಮಂದಿರದ ನೆರಳಲ್ಲಿ ದ.ಕ. ಜಿಲ್ಲೆಯಲ್ಲೇ ಮೊಟ್ಟ ಮೊದಲ ಬಾರಿಗೆ ನಡೆಯುತ್ತಿರುವ ಜಿಲ್ಲಾ ಮಟ್ಟದ ತಂಬೂರಿ ತುಳು ಭಜನಾ ಸ್ಫರ್ಧೆಯ ಎರಡನೇ ಸುತ್ತನ್ನು ಅವರು ಉದ್ಘಾಟಿಸಿ ಮಾತನಾಡಿದರು. ತುಳು ಭಜನೆ ಕೇಳಲೆಂದೇ ರಾಯಚೂರಿನಿಂದ ಇಲ್ಲಿಯವರೆಗೆ ಬಂದಿದ್ದೇನೆ. ಬಾಲಕೃಷ್ಣ ಮಂದಿರದ ಪ್ರತಿಯೊಂದು ಕಾರ್ಯಕ್ರಮಗಳು ಇತಿಹಾಸ ಸೃಷಿಸಲು ಇಲ್ಲಿನ ಸಂಸ್ಕಾರ, ಬದ್ಧತೆ, ಶಿಸ್ತೇ ಕಾರಣವಾಗಿದೆ. ತಂಬೂರಿ ಎಂಬುದೇ ಭಜನೆಯತ್ತ ಆಕರ್ಷಿತವನ್ನಾಗಿಸುವ ಹೆಸರಾಗಿದೆ. ಭಜನೆಗೆ ಭಾವ, ಸಂಗೀತ, ಲಯಗಳ ಅಗತ್ಯವಿರುವುದಿಲ್ಲ. ಹೃದಯದೊಳಗಿನ ಭಕ್ತಿಯ ಭಾವನೆಗಳೇ ಹೊರಬಂದು ಭಜನೆಯಾಗಬೇಕೆಂದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಈ ಭಜನಾ ಸ್ಫರ್ಧೆಯು ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಕರ್ನಾಟಕ ರಾಜ್ಯದಲ್ಲಿ ಭಜನಾ ಮಂಡಳಿ ಮಾಡಬೇಕು ಎಂದು ಧಾರ್ಮಿಕ ದತ್ತಿ ಇಲಾಖೆಯಲ್ಲಿ ಪ್ರಸ್ತಾಪನೆ ಇದೆ. ತಕ್ಷಣ ಆ ಪ್ರಸ್ತಾಪಕ್ಕೆ ಸ್ವರೂಪ ಕೊಡುವ ಕಾರ್ಯಕ್ಕೆ ಮುಂದಾಗಲು ಈ ಕಾರ್ಯಕ್ರಮ ಪ್ರೇರಣೆ ನೀಡಿದೆ ಎಂದರು.
ಕಳೆದ ವಾರ ನಡೆದ ಪುರುಷರ ಭಜನಾ ಸ್ಪರ್ಧೆಯಲ್ಲಿ ವಿಜೇತರಾದ ತಂಡದವರಿಗೆ ನಳಿನ್ ಕುಮಾರ್ ಕಟೀಲ್ ಪ್ರಶಸ್ತಿ ವಿತರಿಸಿದರು. ಕಾರ್ಯಕ್ರಮದ ಯಶಸ್ಸಿನ ಮುಖ್ಯ ರೂವಾರಿ ಪ್ರವೀಣ್ ಎಸ್. ಕುಂಪಲ ಅವರನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅಭಿನಂದಿಸಿದರು.
ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, MEIL ಅಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮುಖಂಡರಾದ ರಾಜೇಶ್ ಕಾವೇರಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ವೀಣಾ ಮಂಗಳ, ಚಂದ್ರಹಾಸ್ ಉಳ್ಳಾಲ್, ಉದ್ಯಮಿ ನಿಶಾಂತ್ ಮೊದಲಾದವರು ಇದ್ದರು.
ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸತೀಶ್ ಕುಂಪಲ ಸ್ವಾಗತಿಸಿದರು. ಪ್ರವೀಣ್ ಕುಂಪಲ ನಿರೂಪಿಸಿದರು.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm