ಬ್ರೇಕಿಂಗ್ ನ್ಯೂಸ್
21-11-24 03:50 pm Mangalore Correspondent ಕರಾವಳಿ
ಮಂಗಳೂರು, ನ.21: ಲೋಕಾಯುಕ್ತ ಅಧಿಕಾರಿಗಳು ಮತ್ತೆ ಭ್ರಷ್ಟರ ಬೇಟೆ ಆರಂಭಿಸಿದ್ದು ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಎಂಸಿ ಕೃಷ್ಣವೇಣಿ ಅವರ ಬೆಂಗಳೂರು, ಚಿಕ್ಕಬಳ್ಳಾಪುರದ ಮನೆಗಳು ಮತ್ತು ಮಂಗಳೂರಿನ ಮನೆ, ಕಚೇರಿಗೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಕೃಷ್ಣವೇಣಿ ಎರಡು ತಿಂಗಳ ಹಿಂದಷ್ಟೇ ವರ್ಗಾವಣೆ ಆಗಿ ಮಂಗಳೂರಿಗೆ ಬಂದಿದ್ದರು. ಇವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಗಣಿ ಇಲಾಖೆ ಅಧಿಕಾರಿಯಾಗಿದ್ದರು. ಚಿಕ್ಕಬಳ್ಳಾಪುರದಲ್ಲಿ ಕೃಷ್ಣವೇಣಿ ವಿರುದ್ಧ ದೂರು ದಾಖಲಾದ ಹಿನ್ನೆಲೆ ಈ ದಾಳಿ ನಡೆದಿದೆ. ಮಂಗಳೂರು ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಮಂಗಳೂರಿನ ವೆಲೆನ್ಸಿಯಾದ ಮನೆಗೆ ಹಾಗೂ ಮಲ್ಲಿಕಟ್ಟೆಯಲ್ಲಿರುವ ಗಣಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಕೃಷ್ಣವೇಣಿ ಅವರು ವೇಲೆನ್ಸಿಯಾದಲ್ಲಿ ಫ್ರೆಡ್ ರೋಸ್ ಎನ್ಕಲೇವ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಮೂರು ವಾಹನಗಳಲ್ಲಿ ಆಗಮಿಸಿದ್ದರು.
ಬೆಂಗಳೂರಿನಲ್ಲಿ ಬಿಬಿಎಂಪಿ ನಗರ ಯೋಜನಾ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಬಕಾರಿ ಇಲಾಖೆ ಎಸ್ಪಿ ಮೋಹನ್ ಮನೆ ಮೇಲೆಯೂ ರೇಡ್ ನಡೆದಿದೆ. ಕಾವೇರಿ ನೀರಾವರಿ ನಿಗಮ ಎಂಡಿ ಮಹೇಶ್, ಸಂಬಂಧಿಕರ ಮನೆ ಮೇಲೆ ದಾಳಿ ಮಾಡಲಾಗಿದೆ. ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಹೇಶ್ ಮನೆ, ಸಂಬಂಧಿಕರ ಮನೆಗಳಿಗೆ ದಾಳಿ ನಡೆದಿದೆ.
A team of Lokayukta officers from the city and Chikkaballapur raided the residence and office of Krishnaveni, an officer in the mines and geology department, in the early hours of Thursday.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm