ಬ್ರೇಕಿಂಗ್ ನ್ಯೂಸ್
22-11-24 10:17 pm Mangalore Correspondent ಕರಾವಳಿ
ಉಳ್ಳಾಲ, ನ.22 : ದೇರಳಕಟ್ಟೆ ಬ್ಯಾರೀಸ್ ವಾಣಿಜ್ಯ ಕಟ್ಟಡದಿಂದ ಕುತ್ತಾರು ಪಂಡಿತ್ ಹೌಸ್ ವರೆಗಿನ ರಸ್ತೆಯನ್ನು ಅತಿಕ್ರಮಿಸಿದ್ದ ಅಂಗಡಿ, ಮಳಿಗೆಗಳನ್ನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪೊಲೀಸ್ ರಕ್ಷಣೆಯಲ್ಲಿ ಶುಕ್ರವಾರ ಜೆಸಿಬಿ ಬಳಸಿ ಕೆಡವಿ ಹಾಕಿದ್ದಾರೆ. ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳನ್ನ ವ್ಯಾಪಾರಿಗಳು ತರಾಟೆಗೆತ್ತಿಕೊಂಡಿದ್ದಾರೆ.
ಇದೇ ವೇಳೆ, ಲೋಕೋಪಯೋಗಿ ರಸ್ತೆ ಅತಿಕ್ರಮಿಸಿರುವ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ಬೋರ್ಡ್ ಗಳನ್ನ ಕೆಡವಲು ನಿಮಗೆ ತಾಕತ್ತಿಲ್ಲವೇ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ್ದಾರೆ. ಪೊಲೀಸರ ರಕ್ಷಣೆಯಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್ ಆರ್.ಬಿ, ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ರಸ್ತೆ ಅತಿಕ್ರಮಿತ ಅಂಗಡಿ, ಮಳಿಗೆಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ. ದೇರಳಕಟ್ಟೆಯಿಂದ ಕುತ್ತಾರು, ಪಂಡಿತ್ ಹೌಸ್ ತನಕದ ರಸ್ತೆ ಇಕ್ಕೆಲಗಳನ್ನ ಅತಿಕ್ರಮಿಸಿದ ಅಂಗಡಿ, ಮಳಿಗೆಗಳನ್ನ ಜೆಸಿಬಿ ಯಂತ್ರದಿಂದ ಕೆಡವಲಾಗಿದೆ. ಅಂಗಡಿ, ಮಳಿಗೆಗಳ ಮುಂದೆ ರಸ್ತೆ ಅತಿಕ್ರಮಿಸಿ ಅಳವಡಿಸಲಾಗಿದ್ದ ಶೀಟ್ ಛಾವಣಿ, ಆವರಣ ಗೋಡೆ, ಇಂಟರ್ ಲಾಕ್ ಗಳನ್ನ ಕೆಡವಲಾಗಿದೆ.



ಅಧಿಕಾರಿಗಳು ಅಂಗಡಿಗಳ ಮಾಲೀಕರಿಗೆ ನೋಟೀಸು ನೀಡದೆ ದಿಢೀರ್ ಕಾರ್ಯಾಚರಣೆ ನಡೆಸಿದ್ದು ಅಂಗಡಿಗಳಲ್ಲಿ ಬಾಡಿಗೆದಾರರಾಗಿ ವ್ಯಾಪಾರ ನಡೆಸುತ್ತಿರುವ ನಮ್ಮಂತಹ ಬಡ ವ್ಯಾಪಾರಿಗಳು ನಷ್ಟ, ಸಮಸ್ಯೆ ಅನುಭವಿಸುವಂತಾಗಿದೆ ಎಂದು ವ್ಯಾಪಾರಸ್ಥರು ದೂರಿದ್ದಾರೆ. ಪಕ್ಕದಲ್ಲೇ ಇರುವ ಖಾಸಗಿ ಆಸ್ಪತ್ರೆಯವರು ರಸ್ತೆಯನ್ನ ಅತಿಕ್ರಮಿಸಿ ದೊಡ್ಡ ದೊಡ್ಡ ಬೋರ್ಡ್ ಗಳನ್ನ ಹಾಕಿದ್ದು ಉಳ್ಳವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಾಕತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಲೋಕೋಪಯೋಗಿ ರಸ್ತೆ ಅತಿಕ್ರಮಿತ ಅಂಗಡಿ, ಮುಂಗಟ್ಟುಗಳಿಗೆ ನಾವು ಇಲಾಖೆಯಿಂದ ಕಳೆದ ಆರು ತಿಂಗಳಿಂದ ಮೂರು ಬಾರಿ ನೋಟೀಸು ನೀಡಿದ್ದೇವೆ. ಅಷ್ಟಲ್ಲದೆ ಅಂಗಡಿಗಳ ಗೋಡೆಗೂ ನೋಟೀಸನ್ನ ಅಂಟಿಸಿದ್ದೇವೆ. ಕೆಲ ಅಂಗಡಿ ಮಾಲೀಕರು ಅದನ್ನ ಲೆಕ್ಕಿಸದೆ ನೋಟೀಸ್ಗೆ ಪೈಂಟ್ ಬಳಿದಿದ್ದಾರೆ. ರಸ್ತೆ ಅತಿಕ್ರಮಿತ ಮಳಿಗೆಗಳನ್ನ ತೆರವುಗೊಳಿಸಲು ನಮಗೆ ಸುಪ್ರೀಂ ಕೋರ್ಟ್ ಆದೇಶವಿದೆ. ಹಾಗಾಗಿ ತೆರವು ಕಾರ್ಯಾಚರಣೆ ನಡೆಸಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ದಾಸ್ ಪ್ರಕಾಶ್ ತಿಳಿಸಿದ್ದಾರೆ.
Mangalore Kuthar Illegal buildings vandalised. People protest against officals for not touching illegal hospital building premises over encroachment
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm