ಬ್ರೇಕಿಂಗ್ ನ್ಯೂಸ್
22-11-24 10:33 pm Mangalore Correspondent ಕರಾವಳಿ
ಉಳ್ಳಾಲ, ನ.22: ಗ್ರಾಮೀಣ ಪ್ರದೇಶ ಸಜಿಪದಿಂದ ಕಲ್ಲಾಪು ನಗರ ಪ್ರದೇಶಕ್ಕೆ ನೇತ್ರಾವತಿ ನದಿ ತೀರದಲ್ಲಿ ತಡೆಗೋಡೆ ಕಮ್ ನೇರ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಯ ಎರಡನೇ ಹಂತದ ಕಾಮಗಾರಿಗೆ ಸ್ಪೀಕರ್ ಯು.ಟಿ ಖಾದರ್ ಹರೇಕಳದಲ್ಲಿ ಶಿಲಾನ್ಯಾಸ ನೆರವೇರಿಸಿದರು.
ಸಜಿಪ ಗ್ರಾಮ ಮತ್ತು ಉಳ್ಳಾಲ ನಗರ ಪ್ರದೇಶ ಸಂಪರ್ಕ ರಸ್ತೆಯ ದೂರದೃಷ್ಟಿಯ ಯೋಜನೆಯ ಎರಡನೇ ಹಂತದ ಕಾಮಗಾರಿಗೆ ಶಿಲಾನ್ಯಾಸಗೈದ ಸ್ಪೀಕರ್ ಖಾದರ್ ಮಾತನಾಡಿ, ನೇತ್ರಾವತಿ ನದಿ ತೀರದಲ್ಲಿ ಹರೇಕಳದಿಂದ ಕಲ್ಲಾಪು ಸಂಪರ್ಕದ ತಡೆಗೋಡೆ ಮತ್ತು ರಸ್ತೆ ನಿರ್ಮಾಣ ಯೋಜನೆಯ ಮೊದಲ ಹಂತದ ಕಾಮಗಾರಿ ಈಗಾಗಲೇ ಆರಂಭವಾಗಿದೆ.ಇದೀಗ ಹರೇಕಳ-ಪಾವೂರು-ಸಜಿಪಕ್ಕೆ ನೇರ ಸಂಪರ್ಕದ ತಡೆಗೋಡೆ ಮತ್ತು ರಸ್ತೆ ನಿರ್ಮಾಣದ ಎರಡನೇ ಹಂತದ ಕಾಮಗಾರಿಯು ಹನ್ನೆರಡು ಕೋಟಿ ರೂಪಾಯಿ ಅನುದಾನದಿಂದ ನಡೆಯಲಿದೆ. ಕಲ್ಲಾಪುವಿನಿಂದ ಸಜಿಪದ ವರೆಗಿನ ತಡೆಗೋಡೆ ಕಮ್ ರಸ್ತೆ ನಿರ್ಮಾಣ ಕಾಮಗಾರಿಗೆ ನೂರು ಕೋಟಿ ರೂಪಾಯಿ ಹೆಚ್ಚುವರಿ ಅನುದಾನದ ಪ್ರಸ್ತಾವನೆಯನ್ನ ಸಣ್ಣ ನೀರಾವರಿ ಸಚಿವರಿಗೆ ಸಲ್ಲಿಸಿದ್ದೇನೆ.


ನನ್ನ ಕ್ಷೇತ್ರದ ಎರಡು ಮಹತ್ತರ ಯೋಜನೆಗಳ ಪ್ರಸ್ತಾವನೆಯು ಅಂಗೀಕಾರವಾದ ನಂತರ, ಕಲ್ಲಾಪು-ಸಜಿಪ ರಸ್ತೆ ನಿರ್ಮಾಣ ಯೋಜನೆಗೆ ಹೆಚ್ಚುವರಿ ನೂರು ಕೋಟಿ ಅನುದಾನ ಬಿಡುಗಡೆಯಾಗುವ ವಿಶ್ವಾಸವಿದೆ. ಹಂತ ಹಂತವಾಗಿ ರಸ್ತೆ ನಿರ್ಮಾಣದ ಕೆಲಸ ಪೂರ್ಣಗೊಳ್ಳಲಿದೆ.ನೇತ್ರಾವತಿ ನದಿ ಪಾತ್ರದ ಜನರು ಮಳೆಗಾಲದ ನೆರೆಯಿಂದ ಬಹಳಷ್ಟು ಸಮಸ್ಯೆ ಅನುಭವಿಸಿದ್ದಾರೆ.ಅವರ ಸಹನೆ ಸಹಕಾರ ಎಂದಿಗೂ ಮರೆಯಲು ಸಾಧ್ಯವಿಲ್ಲ.
ನದಿ ತೀರದ ರಸ್ತೆ ನಿರ್ಮಾಣ ಯೋಜನೆ ಸಂಪೂರ್ಣಗೊಂಡ ಬಳಿಕ ಪಾವೂರು, ಹರೇಕಳ, ಸಜಿಪದಂತಹ ಗ್ರಾಮೀಣ ಭಾಗವು ನಗರ ಪ್ರದೇಶಕ್ಕೆ ಹತ್ತಿರವಾಗಿ ಚಿತ್ರಣವೇ ಬದಲಾಗಲಿದೆ. ಭವಿಷ್ಯದಲ್ಲಿ ಈ ರಸ್ತೆಯು ಜನರಿಗೆ ಬಹಳಷ್ಟು ಉಪಯೋಗಕಾರಿಯಾಗಲಿದ್ದು,ಹೊಸ ಯೋಜನೆಗಳು ಬಂದು ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಕಾಣಲಿದೆ ಎಂದರು.
ನಗರದಿಂದ ಪಾವೂರು ಉಳಿಯ ದ್ವೀಪ ಸಂಪರ್ಕದ ತೂಗುಸೇತುವೆ ನಿರ್ಮಾಣ ಯೋಜನೆಯೂ ಅಂತಿಮ ಹಂತದಲ್ಲಿದೆ. ಕಡತಗಳ ಕೆಲಸಗಳೆಲ್ಲವೂ ಮುಗಿದಿದ್ದು, ಶೀಘ್ರವೇ ಉಳಿಯ ಪ್ರದೇಶ ಸಂಪರ್ಕದ ತೂಗು ಸೇತುವೆಯೂ ನಿರ್ಮಾಣಗೊಳ್ಳಲಿದೆ ಎಂದು ಯು.ಟಿ.ಖಾದರ್ ಹೇಳಿದರು.
ಹರೇಕಳದಿಂದ ಸಜಿಪದ ವರೆಗೆ ದೋಣಿ ಮೂಲಕ ಸಾಗಿದ ಸ್ಪೀಕರ್ ಖಾದರ್ ಅವರು ತಡೆಗೋಡೆ ಕಮ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುವ ಪ್ರದೇಶದ ಸ್ಥಳ ಪರಿಶೀಲನೆ ನಡೆಸಿದರು. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು , ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಶೆಟ್ಟಿ ಬೋಳಿಯಾರ್, ಪಾವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ಮಜೀದ್ ಮೊದಲಾದವರು ಉಪಸ್ಥಿತರಿದ್ದರು.
Barrier cum-road construction along Netravati banks from Sajipa village to Kallap, Speaker Khader inspects site by boat.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm