ಬ್ರೇಕಿಂಗ್ ನ್ಯೂಸ್
13-12-20 07:55 pm Mangaluru Correspondent ಕರಾವಳಿ
ಸುಳ್ಯ, ಡಿ.12: ಶಾಲಾ ಮೈದಾನಕ್ಕೆ ಸೈಕಲ್ ಕಲಿಯಲು ಬಂದಿದ್ದ ಎಂಟು ವರ್ಷದ ಬಾಲಕಿಯನ್ನು ಕೊಠಡಿಗೆ ಕರೆದೊಯ್ದ ಶಾಲೆಯ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಸುಳ್ಯದ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು ಹೆತ್ತವರ ದೂರಿನ ಮೇರೆಗೆ ಆಡಳಿತಾಧಿಕಾರಿಯನ್ನು ವಜಾಗೊಳಿಸಿದ್ದಾರೆ ಎನ್ನಲಾಗುತ್ತಿದೆ.
ದೇವಚಳ್ಳ ಗ್ರಾಮದ ಎಲಿಮಲೆಯ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ತನ್ನ ಗೆಳತಿಯರೊಂದಿಗೆ ಸೈಕಲ್ ಕಲಿಯುತ್ತಿದ್ದ ವೇಳೆ ಶಾಲೆಯ ಆವರಣದಲ್ಲಿದ್ದ ಆಡಳಿತಾಧಿಕಾರಿ ಬಾಲಕಿಯನ್ನು ಕರೆದು ಸೈಕಲ್ ಕೊಡಿಸುವುದಾಗಿ ಹೇಳಿದ್ದಾನೆ. ಈ ವೇಳೆ ಆಕೆಯನ್ನು ಪುಸಲಾಯಿಸಿ ತನ್ನ ಕೊಠಡಿಗೆ ಕರೆದೊಯ್ದು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಹೇಳಲಾಗುತ್ತಿದೆ. ನಂತರ ಮನೆಗೆ ತೆರಳಿದ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಅವರು ಶಾಲೆಯ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.

ಘಟನೆಯ ಕುರಿತು ಆರೋಪಿ ವ್ಯಕ್ತಿಯನ್ನು ಆಡಳಿತ ಮಂಡಳಿಯವರು ವಿಚಾರಿಸಿದ್ದು, ಆತನನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮನೆಯವರು ಪೊಲೀಸ್ ದೂರು ನೀಡದಂತೆ ಶಾಲೆಯ ಆಡಳಿತ ಮಂಡಳಿ ಮನವೊಲಿಸಿದ್ದಾರೆ. ಹೀಗಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಈ ವಿಚಾರ ಮಾಧ್ಯಮದಲ್ಲಿ ಬರುತ್ತಿದ್ದಂತೆ, ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ. ಚೈಲ್ಡ್ ಲೈನ್ ಸಂಸ್ಥೆಯವರು ಸಂತ್ರಸ್ತ ಬಾಲಕಿಯನ್ನು ಪರೀಕ್ಷೆಗೊಳಪಡಿಸಿ ವರದಿ ನೀಡಲಿದ್ದು ಕಿರುಕುಳ ಕಂಡುಬಂದರೆ ಪೊಲೀಸ್ ದೂರು ದಾಖಲಾಗುವ ಸಾಧ್ಯತೆ ಇದೆ.
ಇದು ಮೂರನೇ ಪ್ರಕರಣ !!
ಇದೇ ಶಾಲೆಯಲ್ಲಿ ಈ ಹಿಂದೆಯೂ ಇದೇ ರೀತಿಯದ್ದೇ ಪ್ರಕರಣ ನಡೆದಿತ್ತು ಎಂದು ಸ್ಥಳೀಯರು ಹೇಳುತ್ತಾರೆ. ಎರಡು ವರ್ಷಗಳ ಹಿಂದೆ ಇದೇ ಶಾಲೆಯ ಶಿಕ್ಷಕರಾಗಿದ್ದವರು ಸುಳ್ಯದಲ್ಲಿ ಬಾತ್ ರೂಮ್ ಒಂದರಲ್ಲಿ ಫೋಟೊ ಕ್ಲಿಕ್ಕಿಸಿ ಸಿಕ್ಕಿಬಿದ್ದಿದ್ದರು. ಆನಂತರ ಅವರನ್ನು ವಜಾ ಮಾಡಲಾಗಿತ್ತು. ಐದು ವರ್ಷಗಳ ಹಿಂದೆ ಶಿಕ್ಷಕಿಯೊಬ್ಬರು ಬೇರೊಬ್ಬರ ಜೊತೆ ಹೋಗಿದ್ದರೆಂದು ವಿವಾದ ಆಗಿತ್ತು. ಸಂಸ್ಕಾರದ ಶಿಕ್ಷಣ ನೀಡುವ ಶಾಲೆಯೊಂದು ಈ ರೀತಿಯ ಪ್ರಕರಣಗಳಿಂದ ಸುದ್ದಿಯಾಗಿರುವುದು ವಿಪರ್ಯಾಸ.
Eight-year-old Girl has been sexually Harassed by the School Administrator in Sullia, Dakshina Kannada. It is said the cruel act was done while the girl was cycling in the school ground.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm