ಬ್ರೇಕಿಂಗ್ ನ್ಯೂಸ್
13-12-20 07:55 pm Mangaluru Correspondent ಕರಾವಳಿ
ಸುಳ್ಯ, ಡಿ.12: ಶಾಲಾ ಮೈದಾನಕ್ಕೆ ಸೈಕಲ್ ಕಲಿಯಲು ಬಂದಿದ್ದ ಎಂಟು ವರ್ಷದ ಬಾಲಕಿಯನ್ನು ಕೊಠಡಿಗೆ ಕರೆದೊಯ್ದ ಶಾಲೆಯ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿಬಂದಿದೆ. ಸುಳ್ಯದ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು ಹೆತ್ತವರ ದೂರಿನ ಮೇರೆಗೆ ಆಡಳಿತಾಧಿಕಾರಿಯನ್ನು ವಜಾಗೊಳಿಸಿದ್ದಾರೆ ಎನ್ನಲಾಗುತ್ತಿದೆ.
ದೇವಚಳ್ಳ ಗ್ರಾಮದ ಎಲಿಮಲೆಯ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ತನ್ನ ಗೆಳತಿಯರೊಂದಿಗೆ ಸೈಕಲ್ ಕಲಿಯುತ್ತಿದ್ದ ವೇಳೆ ಶಾಲೆಯ ಆವರಣದಲ್ಲಿದ್ದ ಆಡಳಿತಾಧಿಕಾರಿ ಬಾಲಕಿಯನ್ನು ಕರೆದು ಸೈಕಲ್ ಕೊಡಿಸುವುದಾಗಿ ಹೇಳಿದ್ದಾನೆ. ಈ ವೇಳೆ ಆಕೆಯನ್ನು ಪುಸಲಾಯಿಸಿ ತನ್ನ ಕೊಠಡಿಗೆ ಕರೆದೊಯ್ದು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಹೇಳಲಾಗುತ್ತಿದೆ. ನಂತರ ಮನೆಗೆ ತೆರಳಿದ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಅವರು ಶಾಲೆಯ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.

ಘಟನೆಯ ಕುರಿತು ಆರೋಪಿ ವ್ಯಕ್ತಿಯನ್ನು ಆಡಳಿತ ಮಂಡಳಿಯವರು ವಿಚಾರಿಸಿದ್ದು, ಆತನನ್ನು ಕೆಲಸದಿಂದ ವಜಾಗೊಳಿಸಿರುವುದಾಗಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮನೆಯವರು ಪೊಲೀಸ್ ದೂರು ನೀಡದಂತೆ ಶಾಲೆಯ ಆಡಳಿತ ಮಂಡಳಿ ಮನವೊಲಿಸಿದ್ದಾರೆ. ಹೀಗಾಗಿ ಸುಬ್ರಹ್ಮಣ್ಯ ಠಾಣೆಯಲ್ಲಿ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಈ ವಿಚಾರ ಮಾಧ್ಯಮದಲ್ಲಿ ಬರುತ್ತಿದ್ದಂತೆ, ಬಿಇಓ ಕಚೇರಿಯಿಂದ ಚೈಲ್ಡ್ ಲೈನ್ ಸಂಸ್ಥೆಗೆ ತನಿಖೆ ನಡೆಸುವಂತೆ ಸೂಚನೆ ನೀಡಲಾಗಿದೆ. ಚೈಲ್ಡ್ ಲೈನ್ ಸಂಸ್ಥೆಯವರು ಸಂತ್ರಸ್ತ ಬಾಲಕಿಯನ್ನು ಪರೀಕ್ಷೆಗೊಳಪಡಿಸಿ ವರದಿ ನೀಡಲಿದ್ದು ಕಿರುಕುಳ ಕಂಡುಬಂದರೆ ಪೊಲೀಸ್ ದೂರು ದಾಖಲಾಗುವ ಸಾಧ್ಯತೆ ಇದೆ.
ಇದು ಮೂರನೇ ಪ್ರಕರಣ !!
ಇದೇ ಶಾಲೆಯಲ್ಲಿ ಈ ಹಿಂದೆಯೂ ಇದೇ ರೀತಿಯದ್ದೇ ಪ್ರಕರಣ ನಡೆದಿತ್ತು ಎಂದು ಸ್ಥಳೀಯರು ಹೇಳುತ್ತಾರೆ. ಎರಡು ವರ್ಷಗಳ ಹಿಂದೆ ಇದೇ ಶಾಲೆಯ ಶಿಕ್ಷಕರಾಗಿದ್ದವರು ಸುಳ್ಯದಲ್ಲಿ ಬಾತ್ ರೂಮ್ ಒಂದರಲ್ಲಿ ಫೋಟೊ ಕ್ಲಿಕ್ಕಿಸಿ ಸಿಕ್ಕಿಬಿದ್ದಿದ್ದರು. ಆನಂತರ ಅವರನ್ನು ವಜಾ ಮಾಡಲಾಗಿತ್ತು. ಐದು ವರ್ಷಗಳ ಹಿಂದೆ ಶಿಕ್ಷಕಿಯೊಬ್ಬರು ಬೇರೊಬ್ಬರ ಜೊತೆ ಹೋಗಿದ್ದರೆಂದು ವಿವಾದ ಆಗಿತ್ತು. ಸಂಸ್ಕಾರದ ಶಿಕ್ಷಣ ನೀಡುವ ಶಾಲೆಯೊಂದು ಈ ರೀತಿಯ ಪ್ರಕರಣಗಳಿಂದ ಸುದ್ದಿಯಾಗಿರುವುದು ವಿಪರ್ಯಾಸ.
Eight-year-old Girl has been sexually Harassed by the School Administrator in Sullia, Dakshina Kannada. It is said the cruel act was done while the girl was cycling in the school ground.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm