ಬ್ರೇಕಿಂಗ್ ನ್ಯೂಸ್
24-11-24 09:13 pm Mangalore Correspondent ಕರಾವಳಿ
ಪುತ್ತೂರು, ನ.24: ನವೆಂಬರ್ 27 ರಿಂದ ಡಿಸೆಂಬರ್ 12ರ ವರೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ವೇಳೆ ಸರ್ಪ ಸಂಸ್ಕಾರ ಸೇವೆ, ಇನ್ನಿತರ ಪ್ರಮುಖ ಸೇವೆಗಳು ನಡೆಯುವುದಿಲ್ಲ.
ನವೆಂಬರ್ 25ರಿಂದ ಡಿಸೆಂಬರ್ 12ರ ವರೆಗೆ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಉಳಿದಂತೆ ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವು ಸೇವೆಗಳು ನೆರವೇರುವುದಿಲ್ಲ. ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6) ದಿನ ರಾತ್ರಿ ಹೊತ್ತಿನಲ್ಲಿ ಪ್ರಾರ್ಥನೆ ಸೇವೆ ಇರುವುದಿಲ್ಲ.
ಚಂಪಾಷಷ್ಠಿ ದಿನ (ಡಿ.7) ಮಧ್ಯಾಹ್ನ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಚಂಪಾಷಷ್ಠಿ ದಿನ ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ನೆರವೇರುವುದಿಲ್ಲ. ಲಕ್ಷದೀಪೋತ್ಸವ (ನ.30), ಚೌತಿ (ಡಿ.5), ಪಂಚಮಿ (ಡಿ.6), ಚಂಪಾಷಷ್ಠಿ (ಡಿ.7) ಮತ್ತು ಕೊಪ್ಪರಿಗೆ ಇಳಿಯುವ ಮಹಾಸಂಪ್ರೋಕ್ಷಣೆಯ ದಿನ (ಡಿ.12)ದಂದು ಪಂಚಾಮೃತ ಮಹಾಭಿಷೇಕ ಸೇವೆ ನಡೆಯುವುದಿಲ್ಲ. ನ.27ರಿಂದ ಡಿ.12ರ ವರೆಗೆ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ.
ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ನವೆಂಬರ್ 26ರಂದು ಮೂಲ ಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯ ಇರುವುದರಿಂದ ಅಂದು ಬೆಳಗ್ಗಿನಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಭಕ್ತರಿಗೆ ದೇವರ ದರ್ಶನ, ಸೇವೆ ನೆರವೇರಿಸಲು ಅವಕಾಶ ಇರುವುದಿಲ್ಲ. ಮಧ್ಯಾಹ್ನ 2 ಗಂಟೆಯ ನಂತರ ಅವಕಾಶ ನೀಡಲಾಗುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.
The annual Champashashti Jatra Mahotsava of the Kukke Sri Subrahmanya Temple is scheduled to take place from November 27 to December 12. Due to this festival, one of the temple’s significant services, Sarpa Samskara, will not be conducted from November 25 to December 12. However, other regular services will continue as usual, according to a temple statement.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm