ಬ್ರೇಕಿಂಗ್ ನ್ಯೂಸ್
26-11-24 08:23 pm Udupi Correspondent ಕರಾವಳಿ
ಉಡುಪಿ, ನ 26: ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ದೇಶದ ಮೂಲೆ ಮೂಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಕೇವಲ ಜನಸಾಮಾನ್ಯರು ಮಾತ್ರವಲ್ಲದೇ, ಖ್ಯಾತ ಸೆಲೆಬ್ರಿಟಿಗಳು ಕೂಡಾ ಇಲ್ಲಿಗೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ. ಅದರಂತೆ ತಮಿಳು ಚಿತ್ರರಂಗದ ಖ್ಯಾತ ತಾರಾ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ದಂಪತಿ ಭಾಗಿಯಾದರು. ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿ ಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು. ನಟ ಸೂರ್ಯ ಹಾಗೂ ಜ್ಯೋತಿಕಾ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.

ಸೌತ್ ಸೂಪರ್ ಸ್ಟಾರ್ ಸೂರ್ಯ ಲೇಟೆಸ್ಟ್ ಸಿನಿಮಾ 'ಕಂಗುವ' ಬಿಡುಗಡೆಯಾದಾಗಿನಿಂದಲೂ ಬಾಕ್ಸ್ ಆಫೀಸ್ನಲ್ಲಿ ನಿರಾಶಾದಾಯಕ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆಗಳಿತ್ತು. ಬಿಡುಗಡೆಗೂ ಮುನ್ನ ಇದ್ದ ಸದ್ದು ಈಗಿಲ್ಲ. ಭವ್ಯ ದೃಶ್ಯಗಳು, ಸ್ಟಾರ್ ಪವರ್ನಿಂದ ಕೂಡಿದ್ದರೂ ಚಿತ್ರದ ಕಲೆಕ್ಷನ್ ವೇಗ ನಿರೀಕ್ಷಿತ ಮಟ್ಟದಲ್ಲಿಲ್ಲ. ತೆರೆಕಂಡ 12ನೇ ದಿನದಂದು, ಕಂಗುವ ಬಾಕ್ಸ್ ಆಫೀಸ್ ಕಲೆಕ್ಷನ್ನಲ್ಲಿ ಹೆಚ್ಚಿನ ಕುಸಿತ ಕಂಡಿದೆ.
ಸ್ಯಾಕ್ನಿಲ್ಕ್ ಮಾಹಿತಿ ಪ್ರಕಾರ, ಕಂಗುವ ಕಳೆದ ದಿನ 37 ಲಕ್ಷ ರೂ. ಕಲೆಕ್ಷನ್ ಮಾಡಿದೆ. ಚಿತ್ರದ ಪ್ರಮುಖ ಮಾರುಕಟ್ಟೆಯಾಗಿರುವ ತಮಿಳು ಆವೃತ್ತಿಯಿಂದ 16 ಲಕ್ಷ ರೂಪಾಯಿ ಬಂದಿದೆ. ಕಂಗುವ ತನ್ನ ಮೊದಲ 12 ದಿನಗಳಲ್ಲಿ, ಭಾರತದಲ್ಲಿ ಒಟ್ಟು 67.87 ಕೋಟಿ ರೂಪಾಯಿ ಗಳಿಸಿದೆ. ಚಿತ್ರದ ಮೊದಲ ವಾರದ ಪ್ರದರ್ಶನ ನಿರೀಕ್ಷೆಗಿಂತಲೂ ಕಡಿಮೆ ಆಗಿದ್ದು, 64.3 ಕೋಟಿ ರೂ. ವ್ಯವಹಾರ ನಡೆಸಿದೆ. ತಮಿಳುನಾಡಿನಿಂದಲೇ ಒಟ್ಟು 35.63 ಕೋಟಿ ರೂ. ಬಂದಿದೆ. ಎರಡನೇ ವಾರದಲ್ಲಿ, ವಿಶೇಷವಾಗಿ 12ನೇ ದಿನದಂದು ಕಲೆಕ್ಷನ್ನಲ್ಲಿ ಕುಸಿತ ಕಂಡಿದ್ದು, 100 ಕೋಟಿ ರೂ. ದಾಟುತ್ತೋ ಇಲ್ವೋ ಅನ್ನೋ ಗೊಂದಲದಲ್ಲಿ ಅಭಿಮಾನಿಗಳಿದ್ದಾರೆ.
ಈಗ ಸಿನಿಮಾದ ಯಶಸ್ಸಿಗಾಗಿ ಸ್ಟಾರ್ ದಂಪತಿಗಳು ದೇಶದ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
Renowned Tamil actor Suriya and his wife, actress Jyothika, were spotted at the Kollur Mookambika Temple in Udupi's Baindoor taluk on Tuesday.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm