ಬ್ರೇಕಿಂಗ್ ನ್ಯೂಸ್
26-11-24 08:23 pm Udupi Correspondent ಕರಾವಳಿ
ಉಡುಪಿ, ನ 26: ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲು ದೇಶದ ಮೂಲೆ ಮೂಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಕೇವಲ ಜನಸಾಮಾನ್ಯರು ಮಾತ್ರವಲ್ಲದೇ, ಖ್ಯಾತ ಸೆಲೆಬ್ರಿಟಿಗಳು ಕೂಡಾ ಇಲ್ಲಿಗೆ ಆಗಮಿಸಿ ದೇವಿಯ ದರ್ಶನ ಪಡೆಯುತ್ತಾರೆ. ಅದರಂತೆ ತಮಿಳು ಚಿತ್ರರಂಗದ ಖ್ಯಾತ ತಾರಾ ದಂಪತಿ ಸೂರ್ಯ ಹಾಗೂ ಜ್ಯೋತಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ದಂಪತಿ ಭಾಗಿಯಾದರು. ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿ ಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು. ನಟ ಸೂರ್ಯ ಹಾಗೂ ಜ್ಯೋತಿಕಾ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.

ಸೌತ್ ಸೂಪರ್ ಸ್ಟಾರ್ ಸೂರ್ಯ ಲೇಟೆಸ್ಟ್ ಸಿನಿಮಾ 'ಕಂಗುವ' ಬಿಡುಗಡೆಯಾದಾಗಿನಿಂದಲೂ ಬಾಕ್ಸ್ ಆಫೀಸ್ನಲ್ಲಿ ನಿರಾಶಾದಾಯಕ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆಗಳಿತ್ತು. ಬಿಡುಗಡೆಗೂ ಮುನ್ನ ಇದ್ದ ಸದ್ದು ಈಗಿಲ್ಲ. ಭವ್ಯ ದೃಶ್ಯಗಳು, ಸ್ಟಾರ್ ಪವರ್ನಿಂದ ಕೂಡಿದ್ದರೂ ಚಿತ್ರದ ಕಲೆಕ್ಷನ್ ವೇಗ ನಿರೀಕ್ಷಿತ ಮಟ್ಟದಲ್ಲಿಲ್ಲ. ತೆರೆಕಂಡ 12ನೇ ದಿನದಂದು, ಕಂಗುವ ಬಾಕ್ಸ್ ಆಫೀಸ್ ಕಲೆಕ್ಷನ್ನಲ್ಲಿ ಹೆಚ್ಚಿನ ಕುಸಿತ ಕಂಡಿದೆ.
ಸ್ಯಾಕ್ನಿಲ್ಕ್ ಮಾಹಿತಿ ಪ್ರಕಾರ, ಕಂಗುವ ಕಳೆದ ದಿನ 37 ಲಕ್ಷ ರೂ. ಕಲೆಕ್ಷನ್ ಮಾಡಿದೆ. ಚಿತ್ರದ ಪ್ರಮುಖ ಮಾರುಕಟ್ಟೆಯಾಗಿರುವ ತಮಿಳು ಆವೃತ್ತಿಯಿಂದ 16 ಲಕ್ಷ ರೂಪಾಯಿ ಬಂದಿದೆ. ಕಂಗುವ ತನ್ನ ಮೊದಲ 12 ದಿನಗಳಲ್ಲಿ, ಭಾರತದಲ್ಲಿ ಒಟ್ಟು 67.87 ಕೋಟಿ ರೂಪಾಯಿ ಗಳಿಸಿದೆ. ಚಿತ್ರದ ಮೊದಲ ವಾರದ ಪ್ರದರ್ಶನ ನಿರೀಕ್ಷೆಗಿಂತಲೂ ಕಡಿಮೆ ಆಗಿದ್ದು, 64.3 ಕೋಟಿ ರೂ. ವ್ಯವಹಾರ ನಡೆಸಿದೆ. ತಮಿಳುನಾಡಿನಿಂದಲೇ ಒಟ್ಟು 35.63 ಕೋಟಿ ರೂ. ಬಂದಿದೆ. ಎರಡನೇ ವಾರದಲ್ಲಿ, ವಿಶೇಷವಾಗಿ 12ನೇ ದಿನದಂದು ಕಲೆಕ್ಷನ್ನಲ್ಲಿ ಕುಸಿತ ಕಂಡಿದ್ದು, 100 ಕೋಟಿ ರೂ. ದಾಟುತ್ತೋ ಇಲ್ವೋ ಅನ್ನೋ ಗೊಂದಲದಲ್ಲಿ ಅಭಿಮಾನಿಗಳಿದ್ದಾರೆ.
ಈಗ ಸಿನಿಮಾದ ಯಶಸ್ಸಿಗಾಗಿ ಸ್ಟಾರ್ ದಂಪತಿಗಳು ದೇಶದ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
Renowned Tamil actor Suriya and his wife, actress Jyothika, were spotted at the Kollur Mookambika Temple in Udupi's Baindoor taluk on Tuesday.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm