ಬ್ರೇಕಿಂಗ್ ನ್ಯೂಸ್
28-11-24 01:56 pm Mangalore Correspondent ಕರಾವಳಿ
ಮಂಗಳೂರು, ನ.28: ರಸ್ತೆ ದುರವಸ್ಥೆ ಬಗ್ಗೆ ಪ್ರತಿಭಟನೆ ನಡೆಸಿದ್ದಕ್ಕೆ ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ವಿರುದ್ಧ ಎಫ್ಐಆರ್ ಹಾಕಿರುವುದನ್ನು ವಿರೋಧಿಸಿ ಮಾಜಿ ಸಚಿವ ರಮಾನಾಥ ರೈ ಮುಖ್ಯಮಂತ್ರಿಗೆ ದೂರು ಕೊಟ್ಟಿದ್ದಾರೆ. ಬುಧವಾರ ಬೆಂಗಳೂರಿಗೆ ತೆರಳಿದ್ದ ಅವರು ಮಂಗಳೂರು ಪೊಲೀಸ್ ಕಮಿಷನರ್ ವಿರುದ್ಧ ದೂರು ನೀಡಿದ್ದಾರೆಂದು ತಿಳಿದುಬಂದಿದೆ.
ಕಮ್ಯುನಿಸ್ಟ್ ಸಂಘಟನೆಯವರು ಕರಾವಳಿಯಲ್ಲಿ ನಮ್ಮ ಪರವಾಗಿರುವವರು. ಜನಪರ ವಿಚಾರದಲ್ಲಿ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಾರೆ. ಇಂಥ ಸಂದರ್ಭದಲ್ಲಿ ಅವರ ಮೇಲೆ ಪದೇ ಪದೇ ಎಫ್ಐಆರ್ ಹಾಕುವುದು ಸರಿಯಲ್ಲ. ನಮ್ಮ ಮಾತನ್ನು ಕೇಳದ ಕಮಿಷನರ್ ನಮಗೆ ಬೇಡ, ಅವರನ್ನು ವರ್ಗಾವಣೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾರೆ.
ಇದೇ ವೇಳೆ, ಮಂಗಳೂರಿನಲ್ಲಿ ಸ್ಪೀಕರ್ ಯುಟಿ ಖಾದರ್ ಅವರಲ್ಲಿ ಇದೇ ವಿಚಾರದ ಬಗ್ಗೆ ಪ್ರಶ್ನೆ ಹಾಕಲಾಯಿತು. ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ಮಾಡುವುದು ತಪ್ಪು. ಪೊಲೀಸರು ಅನುಮತಿ ನಿರಾಕರಿಸಿದ್ದರೆ ಏನಾದರೂ ಕಾರಣ ಇರಬೇಕಲ್ವಾ.. ಅನುಮತಿ ನಿರಾಕರಿಸಿದ್ದು ಯಾಕೆಂದು ಅವರಲ್ಲಿಯೇ ಲಿಖಿತವಾಗಿ ಕೇಳಬೇಕಿತ್ತು. ಅಥವಾ ಐಜಿಪಿ ಅದಕ್ಕಿಂತ ಮೇಲಿನವರಿಂದ ಅನುಮತಿ ಪಡೆಯಲೂ ಬಹುದಿತ್ತು. ಅದು ಬಿಟ್ಟು ಪೊಲೀಸರ ವಿರುದ್ಧವೇ ಪ್ರತಿಭಟನೆ ಮಾಡುವುದು ಸರಿಯಾ.. ಇದಕ್ಕಾಗಿ ಕೇಸು ಹಾಕಿದ್ದಾರೆ. ಕಾನೂನು ಉಲ್ಲಂಘಿಸಿದರೆ ಕೇಸು ಹಾಕೋದು ಫಾರ್ಮಾಲಿಟಿ. ಸಮಾಜದಲ್ಲಿ ಶಾಂತಿ, ಸೌಹಾರ್ದ ಇರಬೇಕಿದ್ದರೆ ಕಾನೂನು, ಪೊಲೀಸ್ ವ್ಯವಸ್ಥೆ ಬೇಕಲ್ವಾ ಎಂದು ಹೇಳಿದ್ದಾರೆ.
ಕುಳೂರಿನಲ್ಲಿ ರಸ್ತೆ ಬದಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳ ಕಾರ್ಯಕರ್ತರು, ನಾಯಕರು ಪಾಲ್ಗೊಂಡಿದ್ದರು. ಈ ವೇಳೆ, ಮುನೀರ್ ಕಾಟಿಪಳ್ಳ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತ, ಮಂಗಳೂರಿನ ಪೊಲೀಸ್ ಕಮಿಷನರ್ ದೋ ನಂಬರ್ ಬಿಸ್ನೆಸ್ ಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ, ಜನಪರ ವಿಚಾರಗಳಿಗೆ ವಿರೋಧ ಮಾಡುತ್ತಾರೆ ಎಂದಿದ್ದರು. ಅಲ್ಲದೆ, ಪೊಲೀಸರ ವಿರುದ್ಧವೇ ಧಿಕ್ಕಾರದ ಘೋಷಣೆ ಹಾಕಿದ್ದರು. ಇದನ್ನೇ ನೆಪವಾಗಿಸಿ ಕಾವೂರು ಠಾಣೆಯಲ್ಲಿ ಮುನೀರ್ ಕಾಟಿಪಳ್ಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
Complaint filed against police commissioner Anupam Agarwal to CM by Ramanath Rai for SUMOTO case against DFYI leader Muneer Katipalla.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm