ಬ್ರೇಕಿಂಗ್ ನ್ಯೂಸ್
28-11-24 01:56 pm Mangalore Correspondent ಕರಾವಳಿ
ಮಂಗಳೂರು, ನ.28: ರಸ್ತೆ ದುರವಸ್ಥೆ ಬಗ್ಗೆ ಪ್ರತಿಭಟನೆ ನಡೆಸಿದ್ದಕ್ಕೆ ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ವಿರುದ್ಧ ಎಫ್ಐಆರ್ ಹಾಕಿರುವುದನ್ನು ವಿರೋಧಿಸಿ ಮಾಜಿ ಸಚಿವ ರಮಾನಾಥ ರೈ ಮುಖ್ಯಮಂತ್ರಿಗೆ ದೂರು ಕೊಟ್ಟಿದ್ದಾರೆ. ಬುಧವಾರ ಬೆಂಗಳೂರಿಗೆ ತೆರಳಿದ್ದ ಅವರು ಮಂಗಳೂರು ಪೊಲೀಸ್ ಕಮಿಷನರ್ ವಿರುದ್ಧ ದೂರು ನೀಡಿದ್ದಾರೆಂದು ತಿಳಿದುಬಂದಿದೆ.
ಕಮ್ಯುನಿಸ್ಟ್ ಸಂಘಟನೆಯವರು ಕರಾವಳಿಯಲ್ಲಿ ನಮ್ಮ ಪರವಾಗಿರುವವರು. ಜನಪರ ವಿಚಾರದಲ್ಲಿ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಾರೆ. ಇಂಥ ಸಂದರ್ಭದಲ್ಲಿ ಅವರ ಮೇಲೆ ಪದೇ ಪದೇ ಎಫ್ಐಆರ್ ಹಾಕುವುದು ಸರಿಯಲ್ಲ. ನಮ್ಮ ಮಾತನ್ನು ಕೇಳದ ಕಮಿಷನರ್ ನಮಗೆ ಬೇಡ, ಅವರನ್ನು ವರ್ಗಾವಣೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾರೆ.

ಇದೇ ವೇಳೆ, ಮಂಗಳೂರಿನಲ್ಲಿ ಸ್ಪೀಕರ್ ಯುಟಿ ಖಾದರ್ ಅವರಲ್ಲಿ ಇದೇ ವಿಚಾರದ ಬಗ್ಗೆ ಪ್ರಶ್ನೆ ಹಾಕಲಾಯಿತು. ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ಮಾಡುವುದು ತಪ್ಪು. ಪೊಲೀಸರು ಅನುಮತಿ ನಿರಾಕರಿಸಿದ್ದರೆ ಏನಾದರೂ ಕಾರಣ ಇರಬೇಕಲ್ವಾ.. ಅನುಮತಿ ನಿರಾಕರಿಸಿದ್ದು ಯಾಕೆಂದು ಅವರಲ್ಲಿಯೇ ಲಿಖಿತವಾಗಿ ಕೇಳಬೇಕಿತ್ತು. ಅಥವಾ ಐಜಿಪಿ ಅದಕ್ಕಿಂತ ಮೇಲಿನವರಿಂದ ಅನುಮತಿ ಪಡೆಯಲೂ ಬಹುದಿತ್ತು. ಅದು ಬಿಟ್ಟು ಪೊಲೀಸರ ವಿರುದ್ಧವೇ ಪ್ರತಿಭಟನೆ ಮಾಡುವುದು ಸರಿಯಾ.. ಇದಕ್ಕಾಗಿ ಕೇಸು ಹಾಕಿದ್ದಾರೆ. ಕಾನೂನು ಉಲ್ಲಂಘಿಸಿದರೆ ಕೇಸು ಹಾಕೋದು ಫಾರ್ಮಾಲಿಟಿ. ಸಮಾಜದಲ್ಲಿ ಶಾಂತಿ, ಸೌಹಾರ್ದ ಇರಬೇಕಿದ್ದರೆ ಕಾನೂನು, ಪೊಲೀಸ್ ವ್ಯವಸ್ಥೆ ಬೇಕಲ್ವಾ ಎಂದು ಹೇಳಿದ್ದಾರೆ.
![]()
ಕುಳೂರಿನಲ್ಲಿ ರಸ್ತೆ ಬದಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳ ಕಾರ್ಯಕರ್ತರು, ನಾಯಕರು ಪಾಲ್ಗೊಂಡಿದ್ದರು. ಈ ವೇಳೆ, ಮುನೀರ್ ಕಾಟಿಪಳ್ಳ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತ, ಮಂಗಳೂರಿನ ಪೊಲೀಸ್ ಕಮಿಷನರ್ ದೋ ನಂಬರ್ ಬಿಸ್ನೆಸ್ ಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ, ಜನಪರ ವಿಚಾರಗಳಿಗೆ ವಿರೋಧ ಮಾಡುತ್ತಾರೆ ಎಂದಿದ್ದರು. ಅಲ್ಲದೆ, ಪೊಲೀಸರ ವಿರುದ್ಧವೇ ಧಿಕ್ಕಾರದ ಘೋಷಣೆ ಹಾಕಿದ್ದರು. ಇದನ್ನೇ ನೆಪವಾಗಿಸಿ ಕಾವೂರು ಠಾಣೆಯಲ್ಲಿ ಮುನೀರ್ ಕಾಟಿಪಳ್ಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
Complaint filed against police commissioner Anupam Agarwal to CM by Ramanath Rai for SUMOTO case against DFYI leader Muneer Katipalla.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm