ಬ್ರೇಕಿಂಗ್ ನ್ಯೂಸ್
28-11-24 01:56 pm Mangalore Correspondent ಕರಾವಳಿ
ಮಂಗಳೂರು, ನ.28: ರಸ್ತೆ ದುರವಸ್ಥೆ ಬಗ್ಗೆ ಪ್ರತಿಭಟನೆ ನಡೆಸಿದ್ದಕ್ಕೆ ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ವಿರುದ್ಧ ಎಫ್ಐಆರ್ ಹಾಕಿರುವುದನ್ನು ವಿರೋಧಿಸಿ ಮಾಜಿ ಸಚಿವ ರಮಾನಾಥ ರೈ ಮುಖ್ಯಮಂತ್ರಿಗೆ ದೂರು ಕೊಟ್ಟಿದ್ದಾರೆ. ಬುಧವಾರ ಬೆಂಗಳೂರಿಗೆ ತೆರಳಿದ್ದ ಅವರು ಮಂಗಳೂರು ಪೊಲೀಸ್ ಕಮಿಷನರ್ ವಿರುದ್ಧ ದೂರು ನೀಡಿದ್ದಾರೆಂದು ತಿಳಿದುಬಂದಿದೆ.
ಕಮ್ಯುನಿಸ್ಟ್ ಸಂಘಟನೆಯವರು ಕರಾವಳಿಯಲ್ಲಿ ನಮ್ಮ ಪರವಾಗಿರುವವರು. ಜನಪರ ವಿಚಾರದಲ್ಲಿ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಾರೆ. ಇಂಥ ಸಂದರ್ಭದಲ್ಲಿ ಅವರ ಮೇಲೆ ಪದೇ ಪದೇ ಎಫ್ಐಆರ್ ಹಾಕುವುದು ಸರಿಯಲ್ಲ. ನಮ್ಮ ಮಾತನ್ನು ಕೇಳದ ಕಮಿಷನರ್ ನಮಗೆ ಬೇಡ, ಅವರನ್ನು ವರ್ಗಾವಣೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾರೆ.
ಇದೇ ವೇಳೆ, ಮಂಗಳೂರಿನಲ್ಲಿ ಸ್ಪೀಕರ್ ಯುಟಿ ಖಾದರ್ ಅವರಲ್ಲಿ ಇದೇ ವಿಚಾರದ ಬಗ್ಗೆ ಪ್ರಶ್ನೆ ಹಾಕಲಾಯಿತು. ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ಮಾಡುವುದು ತಪ್ಪು. ಪೊಲೀಸರು ಅನುಮತಿ ನಿರಾಕರಿಸಿದ್ದರೆ ಏನಾದರೂ ಕಾರಣ ಇರಬೇಕಲ್ವಾ.. ಅನುಮತಿ ನಿರಾಕರಿಸಿದ್ದು ಯಾಕೆಂದು ಅವರಲ್ಲಿಯೇ ಲಿಖಿತವಾಗಿ ಕೇಳಬೇಕಿತ್ತು. ಅಥವಾ ಐಜಿಪಿ ಅದಕ್ಕಿಂತ ಮೇಲಿನವರಿಂದ ಅನುಮತಿ ಪಡೆಯಲೂ ಬಹುದಿತ್ತು. ಅದು ಬಿಟ್ಟು ಪೊಲೀಸರ ವಿರುದ್ಧವೇ ಪ್ರತಿಭಟನೆ ಮಾಡುವುದು ಸರಿಯಾ.. ಇದಕ್ಕಾಗಿ ಕೇಸು ಹಾಕಿದ್ದಾರೆ. ಕಾನೂನು ಉಲ್ಲಂಘಿಸಿದರೆ ಕೇಸು ಹಾಕೋದು ಫಾರ್ಮಾಲಿಟಿ. ಸಮಾಜದಲ್ಲಿ ಶಾಂತಿ, ಸೌಹಾರ್ದ ಇರಬೇಕಿದ್ದರೆ ಕಾನೂನು, ಪೊಲೀಸ್ ವ್ಯವಸ್ಥೆ ಬೇಕಲ್ವಾ ಎಂದು ಹೇಳಿದ್ದಾರೆ.
ಕುಳೂರಿನಲ್ಲಿ ರಸ್ತೆ ಬದಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳ ಕಾರ್ಯಕರ್ತರು, ನಾಯಕರು ಪಾಲ್ಗೊಂಡಿದ್ದರು. ಈ ವೇಳೆ, ಮುನೀರ್ ಕಾಟಿಪಳ್ಳ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತ, ಮಂಗಳೂರಿನ ಪೊಲೀಸ್ ಕಮಿಷನರ್ ದೋ ನಂಬರ್ ಬಿಸ್ನೆಸ್ ಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ, ಜನಪರ ವಿಚಾರಗಳಿಗೆ ವಿರೋಧ ಮಾಡುತ್ತಾರೆ ಎಂದಿದ್ದರು. ಅಲ್ಲದೆ, ಪೊಲೀಸರ ವಿರುದ್ಧವೇ ಧಿಕ್ಕಾರದ ಘೋಷಣೆ ಹಾಕಿದ್ದರು. ಇದನ್ನೇ ನೆಪವಾಗಿಸಿ ಕಾವೂರು ಠಾಣೆಯಲ್ಲಿ ಮುನೀರ್ ಕಾಟಿಪಳ್ಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
Complaint filed against police commissioner Anupam Agarwal to CM by Ramanath Rai for SUMOTO case against DFYI leader Muneer Katipalla.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm