ಬ್ರೇಕಿಂಗ್ ನ್ಯೂಸ್
29-11-24 11:09 pm Udupi Correspondent ಕರಾವಳಿ
ಉಡುಪಿ, ನ.29: ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಉದ್ಯಾವರದಲ್ಲಿ ನಡೆದಿದ್ದು, ಕುಟುಂಬಸ್ಥರು ಶಾಕ್ ಆಗಿದ್ದಾರೆ.
ಉದ್ಯಾವರ ಗ್ರಾಪಂ ಸದಸ್ಯರೂ ಆಗಿರುವ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ ಜೂಲಿಯಾನ ಡೇಸಾ (57) ಮೃತಪಟ್ಟವರು. ಜೂಲಿಯಾನ ಅವರು ನ.28ರ ಗುರುವಾರ ಬೆಳಗ್ಗೆ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದರು. ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಇರಿಸಲಾಗಿತ್ತು. ಆನಂತರ, ಲಾರೆನ್ಸ್ ಡೇಸಾ ಅವರೂ ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂಲಿಯಾನ ಗುರುವಾರ ಸಂಜೆ ಮೃತಪಟ್ಟರೆ, ಲಾರೆನ್ಸ್ ಶುಕ್ರವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಆಮೂಲಕ ಪತಿ- ಪತ್ನಿ ಇಬ್ಬರೂ ನ.28 ಮತ್ತು 29ರಂದು ಕೆಲವೇ ಗಂಟೆಗಳ ಅಂತರದಲ್ಲಿ ಸಾವು ಕಂಡಿದ್ದಾರೆ. ಉದ್ಯಾವರ ಗ್ರಾಪಂನಲ್ಲಿ ಹಿರಿಯ ಸದಸ್ಯರಾಗಿದ್ದ ಲಾರೆನ್ಸ್ ಡೇಸಾ ಉದ್ಯಾವರ ಚರ್ಚ್ ಕಮಿಟಿಯಲ್ಲಿ ಉಪಾಧ್ಯಕ್ಷರಾಗಿದ್ದರು. ಜೂಲಿಯಾನ ಅವರು ಬೈಲೂರಿನ ಸರ್ಕಾರಿ ಶಾಲೆ, ಉದ್ಯಾವರ ಫ್ರಾನ್ಸಿಸ್ ಕ್ಸೇವಿಯರ್ ಹೈಯರ್ ಸ್ಕೂಲ್ ಸೇರಿದಂತೆ ಕಾರ್ಕಳ ಆಸುಪಾಸಿನ ಶಾಲೆಗಳಲ್ಲಿ ಶಿಕ್ಷಕಿಯಾಗಿದ್ದರು.
ನ.28ರಂದು ಜೂಲಿಯಾನ ಅವರ ಮಗಳು ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಈ ವೇಳೆ, ತಾಯಿ ಅನಾರೋಗ್ಯಕ್ಕೀಡಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ದಂಪತಿ ಮಗ ಮತ್ತು ಪುತ್ರಿಯನ್ನು ಅಗಲಿದ್ದಾರೆ.
In a tragic incident, a couple from Udyavar passed away within a day's gap. Lawrence D'Sa, vice president of the Udyavar parish pastoral committee, and his wife Juliana D'Sa, a government primary school teacher are the deceased.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm