ಬ್ರೇಕಿಂಗ್ ನ್ಯೂಸ್
29-11-24 11:09 pm Udupi Correspondent ಕರಾವಳಿ
ಉಡುಪಿ, ನ.29: ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಉದ್ಯಾವರದಲ್ಲಿ ನಡೆದಿದ್ದು, ಕುಟುಂಬಸ್ಥರು ಶಾಕ್ ಆಗಿದ್ದಾರೆ.
ಉದ್ಯಾವರ ಗ್ರಾಪಂ ಸದಸ್ಯರೂ ಆಗಿರುವ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ ಜೂಲಿಯಾನ ಡೇಸಾ (57) ಮೃತಪಟ್ಟವರು. ಜೂಲಿಯಾನ ಅವರು ನ.28ರ ಗುರುವಾರ ಬೆಳಗ್ಗೆ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದರು. ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಇರಿಸಲಾಗಿತ್ತು. ಆನಂತರ, ಲಾರೆನ್ಸ್ ಡೇಸಾ ಅವರೂ ಅನಾರೋಗ್ಯಕ್ಕೆ ತುತ್ತಾಗಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂಲಿಯಾನ ಗುರುವಾರ ಸಂಜೆ ಮೃತಪಟ್ಟರೆ, ಲಾರೆನ್ಸ್ ಶುಕ್ರವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.
ಆಮೂಲಕ ಪತಿ- ಪತ್ನಿ ಇಬ್ಬರೂ ನ.28 ಮತ್ತು 29ರಂದು ಕೆಲವೇ ಗಂಟೆಗಳ ಅಂತರದಲ್ಲಿ ಸಾವು ಕಂಡಿದ್ದಾರೆ. ಉದ್ಯಾವರ ಗ್ರಾಪಂನಲ್ಲಿ ಹಿರಿಯ ಸದಸ್ಯರಾಗಿದ್ದ ಲಾರೆನ್ಸ್ ಡೇಸಾ ಉದ್ಯಾವರ ಚರ್ಚ್ ಕಮಿಟಿಯಲ್ಲಿ ಉಪಾಧ್ಯಕ್ಷರಾಗಿದ್ದರು. ಜೂಲಿಯಾನ ಅವರು ಬೈಲೂರಿನ ಸರ್ಕಾರಿ ಶಾಲೆ, ಉದ್ಯಾವರ ಫ್ರಾನ್ಸಿಸ್ ಕ್ಸೇವಿಯರ್ ಹೈಯರ್ ಸ್ಕೂಲ್ ಸೇರಿದಂತೆ ಕಾರ್ಕಳ ಆಸುಪಾಸಿನ ಶಾಲೆಗಳಲ್ಲಿ ಶಿಕ್ಷಕಿಯಾಗಿದ್ದರು.
ನ.28ರಂದು ಜೂಲಿಯಾನ ಅವರ ಮಗಳು ಬೆಂಗಳೂರಿನಿಂದ ಮನೆಗೆ ಬಂದಿದ್ದರು. ಈ ವೇಳೆ, ತಾಯಿ ಅನಾರೋಗ್ಯಕ್ಕೀಡಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ದಂಪತಿ ಮಗ ಮತ್ತು ಪುತ್ರಿಯನ್ನು ಅಗಲಿದ್ದಾರೆ.
In a tragic incident, a couple from Udyavar passed away within a day's gap. Lawrence D'Sa, vice president of the Udyavar parish pastoral committee, and his wife Juliana D'Sa, a government primary school teacher are the deceased.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
04-12-25 06:39 pm
Mangalore Correspondent
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
Cm Siddaramaiah Mangalore: ಆಹ್ವಾನ ಇಲ್ಲದೆ ನಾನೇ...
03-12-25 10:35 pm
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm