ಬ್ರೇಕಿಂಗ್ ನ್ಯೂಸ್
03-12-24 12:06 pm Mangalore Correspondent ಕರಾವಳಿ
ಮಂಗಳೂರು, ಡಿ.3: ಫೆಂಗಲ್ ಚಂಡಮಾರುತದ ಪ್ರಭಾವ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ತಟ್ಟಿದ್ದು ನಿನ್ನೆ ಸಂಜೆಯಿಂದ ರಾತ್ರಿಯಿಡೀ ಭಾರೀ ಮಳೆಯಾಗಿದೆ. ರಾಜ್ಯದಲ್ಲಿ ಎಂಟು ಜಿಲ್ಲೆಗಳಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆ ಸುರಿದಿದೆ.
ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಾತ್ರಿಯಿಡೀ ಮಳೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮಂಗಳವಾರ ಇಡೀ ದಿನ ಸಾಧಾರಣ ಮಳೆಯಾಗಲಿದ್ದು ಬುಧವಾರ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ.


ಮಂಗಳೂರು ಹೊರವಲಯದ ಏರ್ಪೋರ್ಟ್ ಬಳಿಯ ಅದ್ಯಪಾಡಿಯಲ್ಲಿ ರನ್ ವೇಯಿಂದ ಮಳೆ ನೀರು ಹರಿದು ಕೆಳಭಾಗದ ಉಮಾನಾಥ ಸಾಲ್ಯಾನ್ ಎಂಬವರ ಮನೆಗೆ ನೀರು ನುಗ್ಗಿದೆ. ಮನೆಯ ಅಂಗಳದಲ್ಲಿ ಪೂರ್ತಿಯಾಗಿ ಮಣ್ಣು ಬಿದ್ದಿದೆ. ಬಜ್ಪೆ - ಅದ್ಯಪಾಡಿ ಸಂಪರ್ಕ ರಸ್ತೆಯ ಮೇಲೂ ಕೆಸರು ಮಣ್ಣು ಬಿದ್ದು ಸ್ಥಳೀಯರು ಸಂಕಷ್ಟಕ್ಕೀಡಾಗಿದ್ದಾರೆ. ಮಂಗಳೂರಿನ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಜನರು ಬೆಳ್ಳಂಬೆಳಗ್ಗೆ ಕಷ್ಟ ಅನುಭವಿಸಿದ್ದಾರೆ.
ಉಡುಪಿಯಲ್ಲಿ ಬೈಂದೂರು, ಕುಂದಾಪುರ, ಹಾಲಾಡಿ, ಹೆಬ್ರಿ, ಕಾರ್ಕಳ, ಕೋಟ, ಸಾಲಿಗ್ರಾಮ, ಉಪ್ಪೂರು, ಬ್ರಹ್ಮಾವರ, ಹಿರಿಯಡ್ಕ, ಕಾಪು, ಕಟಪಾಡಿ, ಪಡುಬಿದ್ರಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಮಲ್ಪೆ ಬಂದರಿನಲ್ಲಿ ಬೋಟ್ಗಳು ಲಂಗರು ಹಾಕಿವೆ. ಮಂಗಳೂರು, ಉಡುಪಿ ಭಾಗದಲ್ಲಿ 20 ಸೆ.ಮೀ. ಹೆಚ್ಚು ಮಳೆಯಾಗಿದೆ. ಮಂಗಳೂರು 22, ಕಾರ್ಕಳ 26, ಕಾಪು ಹೆಜ್ಮಾಡಿಯಲ್ಲಿ 23 ಸೆ.ಮೀ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತಮಿಳುನಾಡು ಕಡೆಯಿಂದ ದಕ್ಷಿಣ ಕರ್ನಾಟಕ, ಉತ್ತರ ಕೇರಳದ ಮೂಲಕ ಅರಬ್ಬಿ ಸಮುದ್ರದತ್ತ ಚಂಡಮಾರುತ ಹಾದು ಹೋಗಿರುವ ಚಿತ್ರಣವನ್ನು ಹವಾಮಾನ ಇಲಾಖೆ ನೀಡಿದೆ. ಇದರ ಪರಿಣಾಮವಾಗಿ ಕರಾವಳಿ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಉತ್ತರ ಕೇರಳದ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಮಂಗಳೂರು ದಕ್ಕೆಯಲ್ಲಿ ನಿಲ್ಲಿಸಿದ್ದ ಪರ್ಶಿನ್ ಬೋಟ್ ಗಳಿಗೂ ಹಾನಿಯಾಗಿದೆ. ಚಂಡಮಾರುತದ ಅಬ್ಬರಕ್ಕೆ 10ಕ್ಕೂ ಹೆಚ್ಚು ಬೋಟ್ ನೀರುಪಾಲಾಗಿದೆ.
Cyclone Fengal, Torrential rains put Kerala Karnataka on edge,
Five districts of Karnataka locks down its schools. Cyclone Fengal, now weakened into a low-pressure area, continues to wreak havoc with heavy rainfall and disruptions across south India. The India Meteorological Department (IMD) has warned of intensified rainfall in Kerala as the system shifts toward the Arabian Sea near the Kerala and Karnataka coasts by December 3.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm