ಬ್ರೇಕಿಂಗ್ ನ್ಯೂಸ್
03-12-24 06:18 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಕೆ ಒಡ್ಡಲಾಗಿದೆ. ನ.30ರಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಅಕ್ರಮ್ ವಾಯ್ಕರ್ ಎನ್ನುವ ಹೆಸರಲ್ಲಿದ್ದ ಇಮೇಲ್ ನಿಂದ ಬೆದರಿಕೆ ಸಂದೇಶ ಬಂದಿದೆ. ಈ ಬಗ್ಗೆ ಬಜ್ಪೆ ಠಾಣೆಗೆ ಸಿಐಎಸ್ಎಫ್ ಸಿಬಂದಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್ ಪಿನ್ ಎನ್ನಲಾದ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಅವರ ಪತ್ನಿ, ಚಿತ್ರ ನಿರ್ಮಾಪಕಿ ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್ ಎಲ್ ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬುದಾಗಿ ಬೇಡಿಕೆ ಮುಂದಿಡಲಾಗಿದೆ.
ರಾಮೇಶ್ವರ ಕೆಫೆ ಬ್ಲಾಸ್ಟ್ ಅನ್ನು ಪಾಕ್ ಐಎಸ್ಐ ನವರು ತಮಿಳುನಾಡು ಡಿಜಿಪಿಯ ಪುತ್ರಿ ದೌಡಿ ಜೀವಾಲ್ ಎಂಬವರನ್ನು ಬಳಸಿಕೊಂಡು ಮಾಡಿದ್ದಾರೆ. ಜಮೇಶಾ ಮುಬೀನ್ ಎಂಬಾತ ಇದಕ್ಕೆ ಸಹಕಾರ ನೀಡಿದ್ದಾನೆ ಎಂದು ಇಮೇಲ್ ಸಂದೇಶದಲ್ಲಿ ಬರೆದಿರುವುದಲ್ಲದೆ, ವಿ.ಬಾಲಕೃಷ್ಣನ್ ಐಪಿಎಸ್, ಎಡ್ವಕೇಟ್ ಶ್ವೇತಾ, ವರುಣ್ ಐಪಿಎಸ್ ಎಂಬ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ಇದಲ್ಲದೆ, ರಾಮೇಶ್ವರ ಕೆಫೆ ಪ್ರಕರಣವನ್ನು ಐಎಸ್ಐನವರು ಮಾತ್ರ ಮಾಡಿದ್ದಾಗಿ ಬಿಂಬಿಸಲಾಗಿದೆ.. ಹೀಗೆ ಹಲವು ವಿಚಾರಗಳನ್ನು ಅರೆಬರೆ ಇಂಗ್ಲಿಷ್ ನಲ್ಲಿರುವ ಬೆದರಿಕೆ ಸಂದೇಶದಲ್ಲಿ ಬರೆಯಲಾಗಿದೆ.
ಇದೇ ರೀತಿಯ ಬೆದರಿಕೆ ಸಂದೇಶ ಕಳೆದ ಅಕ್ಟೋಬರ್ 25ರಂದು ತಿರುಪತಿಯ ಎರಡು ಹೆಸರಾಂತ ಹೊಟೇಲ್ ಗಳಿಗೆ ಬಂದಿತ್ತು. ಅದರಲ್ಲಿಯೂ ಜಾಫರ್ ಸಾದಿಕ್ ಮತ್ತು ಕೃತಿಕಾ ಉದಯನಿಧಿ ಹೆಸರು ಉಲ್ಲೇಖ ಆಗಿತ್ತು. ಮಂಗಳೂರು ಏರ್ಪೋರ್ಟಿಗೆ ಬಂದಿರುವ ಬೆದರಿಕೆ ಸಂದೇಶದಲ್ಲಿ ತಮಿಳುನಾಡಿನ ವಿಚಾರ ಇರುವುದರಿಂದ ಈ ಕೃತ್ಯದಲ್ಲಿ ಅಲ್ಲಿನವರೇ ಇರುವ ಸಾಧ್ಯತೆಯಿದೆ.
A bomb threat was issued to Mangalore International Airport via email, and a case has been registered at Bajpe Police Station. An email was sent to the CISF from akram_waikar@outlook.com. Bajpe police are now investigating the case.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 12:00 pm
Mangalore Correspondent
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
23-07-25 11:36 am
Udupi Correspondent
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm