ಬ್ರೇಕಿಂಗ್ ನ್ಯೂಸ್
14-12-20 03:03 pm Mangalore Correspondent ಕರಾವಳಿ
ಪುತ್ತೂರು, ಡಿ.14 : ರಾಜ್ಯದಲ್ಲೇ ಮೊದಲ ಬಾರಿಗೆ ಗ್ರಾಮೀಣ ಭಾಗದ ಪತ್ರಕರ್ತರ ಜೀವನ ಭದ್ರತೆಗಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘ ಅಭೂತಪೂರ್ವ ಯೋಜನೆ ಜಾರಿ ಮಾಡಿದೆ. ಪತ್ರಕರ್ತರ ಸಂಘದ ಸದಸ್ಯರ ಜೀವನ ಭದ್ರತೆಗಾಗಿ 34 ಲಕ್ಷ ರೂ. ಮೊತ್ತದ ಯೋಜನೆಯನ್ನು 2020ರ ಡಿ.14ರಿಂದ ಜಾರಿಗೊಳ್ಳಲಿದೆ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘ ಘೋಷಿಸಿದೆ.
ಪುತ್ತೂರು ಪತ್ರಿಕಾಭವನದಲ್ಲಿ ಸೋಮವಾರ ನಡೆದ ತಾಲೂಕು ಪತ್ರಕರ್ತರ ಸಂಘದ ವಿಶೇಷ ಮಹಾಸಭೆಯಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ, ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರಕರ್ತರ ಸಾಮಾಜಿಕ ಮತ್ತು ಕುಟುಂಬ ಭದ್ರತಾ ಯೋಜನೆ ಹೆಸರಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದ್ದು ಪುತ್ತೂರು ತಾ. ಪತ್ರಕರ್ತರ ಸಂಘದ ಸದಸ್ಯರ ಹೆಸರಿನಲ್ಲಿ ತಲಾ 25 ಸಾವಿರ ರೂ. ಬ್ಯಾಂಕ್ ಡೆಪೊಸಿಟ್ ಮಾಡಿ, ಸದಸ್ಯನಿಗೆ 60 ವರ್ಷ ವಯಸ್ಸು ದಾಟಿದ ನಂತರ ಬಡ್ಡಿ ಸಹಿತ ಪೂರ್ಣ ಪ್ರಮಾಣದ ಲಾಭಾಂಶ ದೊರೆಯಲಿದೆ. ಈ ಮೂಲಕ ಪುತ್ತೂರು ತಾಲೂಕು ಪತ್ರಕರ್ತರ ಸಂಘದ 23 ಸದಸ್ಯ ಪತ್ರಕರ್ತರು ಒಟ್ಟು 34 ಲಕ್ಷ ರೂ. ಮೊತ್ತದ ಫಲಾನುಭವಿ ಮೊತ್ತವನ್ನು ಪಡೆಯಲಿದ್ದಾರೆ.
ಕರ್ತವ್ಯ ಸಂದರ್ಭ ಅಪಘಾತ, ಮಾರಣಾಂತಿಕ ದಾಳಿ- ಹಲ್ಲೆ ಘಟನೆ ಸಂಭವಿಸಿದಲ್ಲಿ ಚಿಕಿತ್ಸೆಗಾಗಿ ಸದಸ್ಯನ ಹೆಸರಲ್ಲಿರುವ ಡೆಪೊಸಿಟ್ ಆಧಾರದಲ್ಲಿ ಗರಿಷ್ಠ 20 ಸಾವಿರ ರೂ. ತುರ್ತು ವೈಯಕ್ತಿಕ ಸಾಲ ಪಡೆಯುವ ಅವಕಾಶ ಇರಲಿದೆ ಎಂದು ಪುತ್ತೂರು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ತಿಳಿಸಿದ್ದಾರೆ.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಐ.ಬಿ ಸಂದೀಪ್ ಕುಮಾರ್, ಜತೆ ಕಾರ್ಯದರ್ಶಿ ಅಜಿತ್, ಕೋಶಾಧಿಕಾರಿ ಕೃಷ್ಣಪ್ರಸಾದ್ ಬಲ್ನಾಡ್, ಉಪ್ಯಾಧ್ಯಕ್ಷರಾದ ಸರ್ವೇಶ್ ಕುಮಾರ್ ಉಪ್ಪಿನಂಗಡಿ, ಅನೀಶ್ ಕುಮಾರ್ ಮರಿಲ್ ಉಪಸ್ಥಿತರಿದ್ದರು.
ಯೋಜನೆಯ ಕಾರ್ಯ ನಿರ್ವಹಣೆ ಹೇಗೆ ?
ಸೌಲಭ್ಯಕ್ಕೆ ಅಗತ್ಯ ಮಾನದಂಡಗಳು
Puttur press club to be states first club in providing welfare fund to Rural Journalists. Puttur taluk journalist union Shravan Kumar Nala announced its packages.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm