ಬ್ರೇಕಿಂಗ್ ನ್ಯೂಸ್
03-12-24 11:05 pm Mangalore Correspondent ಕರಾವಳಿ
ಮಂಗಳೂರು, ಡಿ.3: ಮಂಗಳೂರಿನಲ್ಲಿ ನಡೆಯುತ್ತಿರುವ ಫ್ರಾಡ್ ಸ್ಕೀಮ್ ಗಳ ಬಗ್ಗೆ ಉಪ ಲೋಕಾಯುಕ್ತ ಜಸ್ಟಿಸ್ ವೀರಪ್ಪ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಸ್ಕೀಮ್ ನಡೆಸುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ಸೂಚಿಸಿದ್ದಾರೆ.
ಎರಡು ದಿನಗಳ ಕಾಲ ಸರ್ಕಾರಿ ಅಧಿಕಾರಿಗಳ ವಿರುದ್ಧ ನೂರಾರು ದೂರುಗಳನ್ನು ಸ್ವೀಕರಿಸಿದ ಅವರು ಮಂಗಳವಾರ ಸಂಜೆ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು ಮೊದಲು ಗಾರ್ಡನ್ ಸಿಟಿ ಆಗಿತ್ತು. ಈಗ ಗಾರ್ಬೇಜ್ ಸಿಟಿ ಆಗಿದೆ. ಹಿಂದೆ ಸಾವಿರ ಕೆರೆ ಇತ್ತು, ಈವಾಗ ಅಲ್ಲಿ ನೂರು ಕೆರೆನೂ ಇಲ್ಲ. ಇದರಿಂದಾಗಿ ಗಾರ್ಡನ್ ಸಿಟಿ ಹಾಳಾಗಿ ಹೋಗಿದೆ ಎಂದು ಹೇಳಿದ ಅವರು, ಪಚ್ಚನಾಡಿ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಘಟಕದಲ್ಲಿ 9 ಲಕ್ಷ ಟನ್ ಕಸದ ರಾಶಿ ಬಾಕಿ ಉಳಿದಿದ್ದು ಈವರೆಗೆ ಕೇವಲ ಒಂದು ಲಕ್ಷ ಟನ್ ಕಸವನ್ನು ವಿಲೇವಾರಿ ಮಾಡಲಾಗಿದೆ. ಉಳಿದ ಕಸ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಈ ಕುರಿತು ಲೋಕಾಯುಕ್ತದಿಂದ ಸುಮೊಟೋ ಕೇಸ್ ದಾಖಲಿಸುತ್ತೇವೆ ಎಂದರು.
ವಿದ್ಯಾರ್ಥಿ ನಿಲಯ, ಕಾರಾಗೃಹ ಸೇರಿದಂತೆ ಸರಕಾರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಗತ್ಯ ಸೌಲಭ್ಯಗಳನ್ನು ಅಳವಡಿಸಲು ಸೂಚನೆ ನೀಡಲಾಗಿದೆ. ಅಲ್ಲದೆ, ವೈದ್ಯರು ಹೊರಗಡೆ ಚೀಟಿ ಬರೆದು ಕೊಡದಂತೆ ಸೂಚಿಸಿದ್ದೇನೆ. ಸರ್ಕಾರಿ ಆಸ್ಪತ್ರೆಗೆ ಬಡ ರೋಗಿಗಳು ಬರುತ್ತಿದ್ದು ಅವರಿಗೆ ಚೀಟಿ ಕೊಟ್ಟು ಹೊರಗಡೆ ಕಳಿಸುವುದು ತಪ್ಪು. ಅದರಿಂದ ಸರ್ಕಾರದ ಆಸ್ಪತ್ರೆ ಉದ್ದೇಶ ಈಡೇರುವುದಿಲ್ಲ ಎಂದರು.
ಸಾರ್ವಜನಿಕ ಅಹವಾಲು ಕುಂದು ಕೊರತೆ ಸಭೆಯಲ್ಲಿ 193 ದೂರುಗಳು ಬಂದಿವೆ. ಈ ಪೈಕಿ 81 ದೂರುಗಳನ್ನು ಸ್ಥಳದಲ್ಲೇ ವಿಲೇವಾರಿ ಮಾಡಲಾಗಿದೆ ಎಂದ ಉಪ ಲೋಕಾಯುಕ್ತರು, ಭ್ರಷ್ಟ ಅಧಿಕಾರಿಗಳನ್ನು ಟ್ರಾಪ್ ಮಾಡುವ ಲೋಕಾಯುಕ್ತ ಅಧಿಕಾರಿಗಳ ಮೇಲೆಯೂ ನಿಗಾ ಇಡಲಾಗುತ್ತಿದೆ. ಲೋಕಾಯುಕ್ತ ಅಧಿಕಾರಿಗಳನ್ನು ನಾವೇ ಟ್ರಾಕ್ ಮಾಡುತ್ತಿದ್ದೇವೆ. ಈಗಾಗಲೇ ಸುಮಾರು ಅಧಿಕಾರಿಗಳನ್ನು ಸಂಸ್ಥೆಯಿಂದಲೇ ಹೊರಗೆ ಹಾಕಿದ್ದೇವೆ ಎಂದರು.
ಲೋಕಾಯುಕ್ತ ಅಧಿಕಾರಿ ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಬಂದರೆ ತನಿಖೆ ನಡೆಸುತ್ತೇವೆ. ಅಂಥವರ ಮೇಲೆ ಕಾನೂನು ಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಾವು ಲೋಕಾಯುಕ್ತ ಪೊಲೀಸರನ್ನೂ ಬಿಡಲ್ಲಾ, ಲೋಕಲ್ ಪೊಲೀಸರನ್ನು ಬಿಡಲ್ಲಾ.. ಕೇವಲ ಮಾಹಿತಿ ಬಂದರೆ ಸಾಕು ಸುಮೊಟೋ ಕೇಸು ಹಾಕುತ್ತೇವೆ ಎಂದು ಹೇಳಿದರು.
Fraud illegal lucky draw companies in Mangalore, Upa Lokayukta Justice Veerappa orders for FIR to police commissioner Anupam Agarwal
03-04-26 07:35 am
HK News Staffer
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm