ಬ್ರೇಕಿಂಗ್ ನ್ಯೂಸ್
04-12-24 02:32 pm Mangalore Correspondent ಕರಾವಳಿ
ಮಂಗಳೂರು, ಡಿ.4: ಮಂಗಳೂರಿನ ಖ್ಯಾತ ದಂತ ವೈದ್ಯ, ಎ.ಬಿ. ಶೆಟ್ಟಿ ಸ್ಮಾರಕ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಹಾಗೂ ಡೀನ್ ಆಗಿದ್ದ ಡಾ.ಯು.ಎಸ್.ಕೃಷ್ಣ ನಾಯಕ್ (64) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಅವರು ಪತ್ನಿ, ಪುತ್ರ ಡಾ.ಅರ್ಜುನ್ ನಾಯಕ್ ಯುಎಸ್, ಪುತ್ರಿ ಡಾ.ಏಕತಾ ನಾಯಕ್ ಯು.ಎಸ್ (ಇಬ್ಬರೂ ದಂತ ವೈದ್ಯರು) ಸಹಿತ ಅಪಾರ ಬಂಧುಗಳು, ಅಭಿಮಾನಿಗಳನ್ನು ಅಗಲಿದ್ದಾರೆ. ಮಂಗಳೂರಿನ ಸಂತ ಅಲೋಶಿಯಸ್ ಶಾಲೆ ಹಾಗೂ ಕಾಲೇಜಿನಲ್ಲಿ ತಮ್ಮ ಪ್ರೌಢಶಿಕ್ಷಣ, ಪದವಿ ಪೂರ್ವ ಶಿಕ್ಷಣ ಪೂರೈಸಿ ಮಣಿಪಾಲ ಕೆಎಂಸಿಯಲ್ಲಿ ದಂತ ವೈದ್ಯಕೀಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಗಳಿಸಿದರು. ಮಂಗಳೂರಿನ ನಾಯಕ್ಸ್ ಡೆಂಟಲ್ ಕ್ಲಿನಿಕ್ನಲ್ಲೂ ಅವರು ಸೇವೆ ಸಲ್ಲಿಸುತ್ತಿದ್ದರು.
2003ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, 2002ರಲ್ಲಿ ರಾಜೀವ್ ಗಾಂಧಿ ಹೂಮನ್ ಎಕ್ಸಲೆನ್ಸ್ ಅವಾರ್ಡ್, 2014ರಲ್ಲಿ ಔಟ್ ಸ್ಟ್ಯಾಂಡಿಂಗ್ ಪ್ರೊಫೆಸರ್ ಅವಾರ್ಡ್ ಕೂಡ ಪಡೆದಿದ್ದಾರೆ. 2024ರ ಸೆ.20, 21ರಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಐಒಎಸ್ ಕಾನ್ಫರೆನ್ಸ್ನಲ್ಲಿ ಪ್ರತಿಷ್ಠಿತ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿಯನ್ನು ಕೂಡ ಗಳಿಸಿದ್ದರು. ಡಾ.ಯು.ಎಸ್. ಕೃಷ್ಣ ನಾಯಕ್ ಅವರ ಅಕಾಲಿಕ ನಿಧನಕ್ಕೆ ವೈದ್ಯಕೀಯ ರಂಗದ ಪ್ರಮುಖರು, ಸಮಾಜದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಭಾರತೀಯ ದಂತ ವೈದ್ಯಕೀಯ ಸಂಘದ ಅಧ್ಯಕ್ಷರಾಗಿ, ಇಂಡಿಯನ್ ಅರ್ಥೋಡಾಂಟಿಕ್ಸ್ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಲ್ಲದೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಡೆಂಟಲ್ ಸರ್ಜರಿ ಬೋರ್ಡ್ ಆಫ್ ಸ್ಟಡೀಸ್ ಸದಸ್ಯರಾಗಿದ್ದರು. ದೇಶ ವಿದೇಶಗಳಲ್ಲಿ ಹಲವು ಪ್ರವಾಸ ಕೈಗೊಂಡು ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿದ್ದಾರೆ. ಅಮೆರಿಕನ್ ಬಯೋಗ್ರಾಫಿಕಲ್ ಸೊಸೈಟಿಯಿಂದ ಮ್ಯಾನ್ ಆಫ್ ದಿ ಇಯರ್ ಗೌರವ ಪ್ರಶಸ್ತಿಯೂ ಲಭಿಸಿದೆ.
Senior dentist and principal of Ab Shetty college Dr Krishna Nayak passes away in Mangalore. Senior orthodontist and principal of A.B. Shetty Memorial Institute of Dental Sciences (ABSMIDS) U.S. Krishna Nayak, 63, passed away in a private hospital at Attavar in Mangaluru following a brief illness on December 3.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 09:44 pm
HK News Staffer
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm