ಬ್ರೇಕಿಂಗ್ ನ್ಯೂಸ್
06-12-24 01:47 pm Mangalore Correspondent ಕರಾವಳಿ
ಮಂಗಳೂರು, ಡಿ.6: ಪ್ರೀತಿ, ಪ್ರೇಮಕ್ಕೆ ಭಾಷೆ, ದೇಶದ ಹಂಗಿಲ್ಲ ಎಂಬ ಮಾತಿದೆ. ಕೆಲಸದ ನಿಮಿತ್ತ ಥೈಲ್ಯಾಂಡಿನಲ್ಲಿ ನೆಲೆಸಿದ್ದ ಮಂಗಳೂರಿನ ಯುವಕನಿಗೆ ಅಲ್ಲಿನ ಯುವತಿ ಜೊತೆಗೆ ಪ್ರೇಮಾಂಕುರವಾಗಿದ್ದು ಡಿ.5ರಂದು ತುಳುನಾಡಿನ ಸಂಪ್ರದಾಯದಲ್ಲಿಯೇ ಮಂಗಳಾದೇವಿ ದೇವಸ್ಥಾನದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.
ಮಂಗಳೂರಿನ ಯುವಕ ಪೃಥ್ವಿರಾಜ್ ಎಸ್.ಅಮೀನ್ ಹಾಗೂ ಥೈಲ್ಯಾಂಡ್ ಯುವತಿ ಮೊಂತಕಾನ್ ಸಸೂಕ್ ಮಂಗಳೂರಿನ ಮಂಗಳಾದೇವಿ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಹಿಂದೆಯೇ ಥೈಲ್ಯಾಂಡ್ ಸಂಪ್ರದಾಯ ಪ್ರಕಾರ ಇವರು ಜುಲೈನಲ್ಲಿ ವಿವಾಹವಾಗಿದ್ದರು. ಮಂಗಳೂರಿನ ವಕೀಲೆ ಸುಜಯಾ ಸತೀಶ್ ಹಾಗೂ ಸತೀಶ್ ಕುಮಾರ್ ಅವರ ಪುತ್ರ ಪೃಥ್ವಿರಾಜ್ ಬೆಂಗಳೂರಿನಲ್ಲಿ ತಮ್ಮದೇ ಸಾಫ್ಟ್ವೇರ್ ಕಂಪೆನಿ ಮುನ್ನಡೆಸುತ್ತಿದ್ದಾರೆ. ಟಾಟಾ, ಪೋರ್ಸ್ ಮುಂತಾದ ಕಂಪೆನಿಗಳಿಗೆ ಸಾಫ್ಟ್ವೇರ್ ಸರ್ವೀಸ್ ಸೇವೆ ಒದಗಿಸುತ್ತಿದ್ದಾರೆ.












ಥೈಲ್ಯಾಂಡ್ ಹೋಗಿದ್ದ ವೇಳೆ ಪೃಥ್ವಿರಾಜ್ಗೆ ಪ್ರೇಮಿಗಳ ದಿನವೇ ಮೊಂತಕನ್ ಸಸೂಕ್ ಪರಿಚಯವಾಗಿತ್ತು. ಆಬಳಿಕ ಪ್ರೇಮ ನಿವೇದನೆ ಮಾಡಿಕೊಂಡಿದ್ದರು. ಪರಸ್ಪರ ಪ್ರೀತಿ ಗಟ್ಟಿಗೊಳ್ಳುತ್ತಿದ್ದಂತೆ ಇಬ್ಬರೂ ಮದುವೆಯಾಗುವ ನಿರ್ಧಾರಕ್ಕೆ ಬಂದಿರುವುದಾಗಿ ಪೃಥ್ವಿರಾಜ್ ತಿಳಿಸಿದ್ದಾರೆ. ಥೈಲ್ಯಾಂಡ್ ಯುವತಿಯನ್ನು ಮದುವೆಯಾಗುವ ವಿಷಯ ತಿಳಿಸಿದಾಗ ಪಾಲಕರು ಆಘಾತಕ್ಕೆ ಒಳಗಾಗಿದ್ದರು. ಬಳಿಕ ಸಮ್ಮತಿ ನೀಡಿದರು ಎಂದು ಪೃಥ್ವಿರಾಜ್ ಹೇಳಿದ್ದಾರೆ.
ಥೈಲ್ಯಾಂಡ್ ಭಾಷೆ ಸ್ವಲ್ಪ ಸ್ವಲ್ಪ ಕಲಿಯತೊಡಗಿದ್ದೇನೆ. ಕೆಲವು ಪದಗಳು ಬರುತ್ತವೆ. ಮೊಂತಕಾನ್ ಕೂಡ ತುಳು ಭಾಷೆಯನ್ನು ಕಲಿಯುತ್ತಿದ್ದು, ಮುಂದೆ ತುಳುವಿನಲ್ಲೇ ಮಾತನಾಡಲಿದ್ದಾರೆ ಎಂದು ಪೃಥ್ವಿರಾಜ್ ಹೇಳಿಕೊಂಡಿದ್ದಾರೆ.
On December 5th, a beautiful wedding took place at the Mangaladevi Temple in the city, where Mangalorean boy Prutivraj married Thai girl Motkan Sasuk. The ceremony brought together two cultures and celebrated love and unity. The temple, known for its serene atmosphere and historical significance, served as the perfect backdrop for this special occasion. Friends and family gathered to witness the couple exchange vows, marking the beginning of their journey together.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm